AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೀಟರ್ ಡೀಸೆಲ್ ದರ 100ರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.37 ರೂ. ಆಗಿದ್ದರೆ, ರಾಯಚೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.25 ರೂಪಾಯಿ ಇದೆ.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಸುಳಿವು ನೀಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Oct 17, 2021 | 10:42 AM

Share

ಹುಬ್ಬಳ್ಳಿ: ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆ ಇಳಿಕೆ ಮಾಡುವ ಸುಳಿವು ನೀಡಿದ್ದಾರೆ. ತೈಲ ಬೆಲೆ ಆರ್ಥಿಕತೆ ಮೇಲೆ ನೇರ ಪರಿಣಾಮ ಬೀರುತ್ತದೆ. ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಉಪಚುನಾವಣೆ ಬಳಿಕ ಬೆಲೆ ಇಳಿಕೆ ಮಾಡುವ ಬಗ್ಗೆ ಚಿಂತನೆಯಿದೆ ಅಂತ ತಿಳಿಸಿದ್ದಾರೆ.

ಎಷ್ಟಿದೆ ಡೀಸೆಲ್ ದರ? ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೀಟರ್ ಡೀಸೆಲ್ ದರ 100ರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.37 ರೂ. ಆಗಿದ್ದರೆ, ರಾಯಚೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.25 ರೂಪಾಯಿ, ತುಮಕೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 100.84 ರೂಪಾಯಿ, ಕಲಬುರಗಿಯಲ್ಲಿ ಲೀಟರ್ ಡೀಸೆಲ್ ಬೆಲೆ 100.16 ರೂಪಾಯಿ ಹಾಗೂ ರಾಮನಗರದಲ್ಲಿ ಲೀಟರ್ ಡೀಸೆಲ್ ಬೆಲೆ 100.67 ರೂಪಾಯಿಗೆ ಏರಿಕೆ ಆಗಿದೆ. ಬೀದರ್​ನಲ್ಲಿ ಲೀಟರ್ ಡೀಸೆಲ್ ಬೆಲೆ 101.22 ರೂಪಾಯಿ ಹಾಗೂ ಚಿತ್ರದುರ್ಗದಲ್ಲಿ ಲೀಟರ್ ಡೀಸೆಲ್ ಬೆಲೆ 101.93 ರೂಪಾಯಿ ಇದೆ. ಪ್ರತಿದಿನ ಸಾಗುತ್ತಿದ್ದಂತೆಯೇ ಪೆಟ್ರೋಲ್, ಡೀಸೆಲ್ ದರ ಇನ್ನಷ್ಟು ಏರಿಕೆಯಾಗುತ್ತಿರುವುದನ್ನು ಕಂಡು ವಾಹನ ಸವಾರರು ಬೇಸರ ಹೊರಹಾಕಿದ್ದಾರೆ.

ಎಷ್ಟಿದೆ ಪೆಟ್ರೋಲ್ ಬೆಲೆ? ಇಂದು ರಾಯಚೂರಿನಲ್ಲಿ ಒಂದು ಲೀಟರ್ ಪೆಟ್ರೋಲ್​ಗೆ 109.35 ರೂ. ಇದೆ. ತುಮಕೂರಿನಲ್ಲಿ 108.08 ರೂ, ಕಲಬುರಗಿಯಲ್ಲಿ ಪೆಟ್ರೋಲ್ 109.26, ಬೀದರ್​ನಲ್ಲಿ 110.42, ಚಿತ್ರದುರ್ಗದಲ್ಲಿ 111.30, ಮಂಡ್ಯದಲ್ಲಿ 109.28, ಯಾದಗಿರಿಯಲ್ಲಿ 109.88, ಚಿಕ್ಕಬಳ್ಳಾಪುರದಲ್ಲಿ 109.59, ಧಾರವಾಡದಲ್ಲಿ 109.26 ರೂ ಇದೆ. ಇನ್ನು ವಿಜಯಪುರದಲ್ಲೂ ಒಂದು ಲೀಟರ್ ಪೆಟ್ರೋಲ್​ಗೆ 109.24 ರೂಪಾಯಿ ಆಗಿದೆ.

ಇದನ್ನೂ ಓದಿ

ಕೌಟುಂಬಿಕ ಕಲಹ: ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಹತ್ಯೆ; ಪತಿಯು ನೇಣಿಗೆ ಶರಣು

T20 World Cup 2021: ಟಿ20 ವಿಶ್ವಕಪ್ ಕಾವು ಶುರು: ಅರ್ಹಾತಾ ಸುತ್ತಿನಲ್ಲಿಂದು ಎರಡು ಪಂದ್ಯ: ಸೂಪರ್ 12ಗಾಗಿ ಹೋರಾಟ

Published On - 9:27 am, Sun, 17 October 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?