AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು; ರಾಜಕಾರಣಕ್ಕೆ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ -ಸಚಿವ ರಾಮಲಿಂಗಾರೆಡ್ಡಿ

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಈ ದೇಶದಲ್ಲಿ ಲಕ್ಷಾಂತರ ರಾಮನ ದೇವಾಲಯಗಳಿವೆ. ಬಿಜೆಪಿಯವರಿಗೆ ಇತ್ತೀಚೆಗೆ ರಾಮನ ನೆನಪಾಗಿದೆ. ವೋಟ್​ಗಾಗಿ ರಾಮನ ನೆನಪು ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೂ ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು. ರಾಜಕಾರಣಕ್ಕೆ ಯಾವತ್ತೂ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ ಎಂದರು.

ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು; ರಾಜಕಾರಣಕ್ಕೆ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ -ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗಾರೆಡ್ಡಿ
ಶಿವಕುಮಾರ್ ಪತ್ತಾರ್
| Edited By: ಆಯೇಷಾ ಬಾನು|

Updated on: Jan 08, 2024 | 2:20 PM

Share

ಹುಬ್ಬಳ್ಳಿ, ಜ.08: ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು. ರಾಜಕಾರಣಕ್ಕೆ ಯಾವತ್ತೂ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಲಕ್ಷಾಂತರ ರಾಮನ ದೇವಾಲಯಗಳಿವೆ. ಬಿಜೆಪಿಯವರಿಗೆ ಇತ್ತೀಚಿನ ದಿನಗಳಲ್ಲಿ ಶ್ರೀರಾಮನ (Lord Rama) ನೆನಪಾಗಿದೆ. ಬಿಜೆಪಿಯವರು ವೋಟ್​ಗಾಗಿ ರಾಮನ ನೆನಪು ಮಾಡಿಕೊಂಡಿದ್ದಾರೆ. ನಾವು ಸಾವಿರಾರು ವರ್ಷದಿಂದ ರಾಮ, ಆಂಜನೇಯ ಪೂಜೆ ಮಾಡ್ತಿದ್ದೇವೆ ಎಂದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಈ ದೇಶದಲ್ಲಿ ಲಕ್ಷಾಂತರ ರಾಮನ ದೇವಾಲಯಗಳಿವೆ. ಬಿಜೆಪಿಯವರಿಗೆ ಇತ್ತೀಚೆಗೆ ರಾಮನ ನೆನಪಾಗಿದೆ. ವೋಟ್​ಗಾಗಿ ರಾಮನ ನೆನಪು ಮಾಡಿಕೊಂಡಿದ್ದಾರೆ. ಸಾವಿರಾರು ವರ್ಷಗಳಿಂದ ನಾವು ರಾಮ ಆಂಜನೇಯ ಪೂಜೆ ಮಾಡ್ತಿದ್ದೀವಿ. ನಾವು ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳಲ್ಲ. ಬಿಜೆಪಿಗೆ ಏನೂ ಬಂಡವಾಳ ಇಲ್ಲ, ಅದಕ್ಕೆ ಧರ್ಮ ತರುತ್ತಾರೆ. ನಾವು ಶ್ರದ್ಧಾ ಭಕ್ತಿಯಿಂದ ಶ್ರೀರಾಮನನ್ನು ಪೂಜೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿ ಹಣ ಆ ದೇಗುಲಕ್ಕೇ ಬಳಕೆಯಾಗಬೇಕು: ರಾಮಲಿಂಗಾ ರೆಡ್ಡಿ ಮಹತ್ವದ ಘೋಷಣೆ

ಬಿಜೆಪಿಯವರು ಅಧಿಕಾರಕ್ಕೆ ಬಂದಾಗ ಏನೂ ಕೆಲಸ ಮಾಡಲಿಲ್ಲ. ಕೆಲಸ ಮಾಡೋರಿಗೂ ಬಿಡಲ್ಲ. ಆಗೋದಕ್ಕೆ ಹರಕತ್ತು, ಆಗದೆ ಇರೋದಕ್ಕೆ ಕುಮ್ಮಕ್ಕು ಬಿಜೆಪಿಯ ಕಥೆ. ಕೆಲಸ ಮಾಡಲಿಲ್ಲ, ಹೀಗಾಗಿ ಜನರು ಬಿಜೆಪಿಯವರನ್ನು ಮನೆಗೆ ಕಳಿಸಿದ್ರು.ಕಳೆದ ನಾಲ್ಕು ವರ್ಷದಿಂದ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ನೇಮಕಾತಿ ಮಾಡಲಿಲ್ಲ. ಪ್ರತಿ ದಿನ 60 ಲಕ್ಷ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್​ಗಳಲ್ಲಿ ಓಡಾಡ್ತಿದ್ದಾರೆ. ಇವರ ಶಾಪ ಬಿಜೆಪಿಗೆ ತಟ್ಟತ್ತೆ. ಬಿಜೆಪಿಗೆ ತಡೆದುಕೊಳ್ಳಲು ಆಗ್ತಿಲ್ಲ, ಅವರಿಗೆ ಹೊಟ್ಟೆ ಉರಿ. ಪ್ರಹ್ಲಾದ ಜೋಶಿ ಗಿಮಿಕ್ ಮಾಡ್ತಿದಾರೆ. ಕೇಂದ್ರದ ಮಂತ್ರಿ ಅಂಕಿ ಸಂಖ್ಯೆ ಇಟ್ಕೊಂಡು ಮಾತಾಡಬೇಕು. ಕರಸೇವಕ ಅಂತಾರೆ, ಅವರ ಮೇಲೆ ಎಷ್ಟು ಕೇಸ್ ಇದೆ? ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

ಮೂರು ಜನ ಡಿಸಿಎಮ್ ಕೇಳೋದ್ರಲ್ಲಿ ತಪ್ಪಿಲ್ಲ. ಮಾಡೋದ ಬಿಡೋದು ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಉಪಮುಖ್ಯಮಂತ್ರಿ ಆಕಾಂಕ್ಷಿ ಅಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!