AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು; ರಾಜಕಾರಣಕ್ಕೆ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ -ಸಚಿವ ರಾಮಲಿಂಗಾರೆಡ್ಡಿ

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಈ ದೇಶದಲ್ಲಿ ಲಕ್ಷಾಂತರ ರಾಮನ ದೇವಾಲಯಗಳಿವೆ. ಬಿಜೆಪಿಯವರಿಗೆ ಇತ್ತೀಚೆಗೆ ರಾಮನ ನೆನಪಾಗಿದೆ. ವೋಟ್​ಗಾಗಿ ರಾಮನ ನೆನಪು ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೂ ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು. ರಾಜಕಾರಣಕ್ಕೆ ಯಾವತ್ತೂ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ ಎಂದರು.

ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು; ರಾಜಕಾರಣಕ್ಕೆ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ -ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗಾರೆಡ್ಡಿ
ಶಿವಕುಮಾರ್ ಪತ್ತಾರ್
| Updated By: ಆಯೇಷಾ ಬಾನು|

Updated on: Jan 08, 2024 | 2:20 PM

Share

ಹುಬ್ಬಳ್ಳಿ, ಜ.08: ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು. ರಾಜಕಾರಣಕ್ಕೆ ಯಾವತ್ತೂ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಲಕ್ಷಾಂತರ ರಾಮನ ದೇವಾಲಯಗಳಿವೆ. ಬಿಜೆಪಿಯವರಿಗೆ ಇತ್ತೀಚಿನ ದಿನಗಳಲ್ಲಿ ಶ್ರೀರಾಮನ (Lord Rama) ನೆನಪಾಗಿದೆ. ಬಿಜೆಪಿಯವರು ವೋಟ್​ಗಾಗಿ ರಾಮನ ನೆನಪು ಮಾಡಿಕೊಂಡಿದ್ದಾರೆ. ನಾವು ಸಾವಿರಾರು ವರ್ಷದಿಂದ ರಾಮ, ಆಂಜನೇಯ ಪೂಜೆ ಮಾಡ್ತಿದ್ದೇವೆ ಎಂದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಈ ದೇಶದಲ್ಲಿ ಲಕ್ಷಾಂತರ ರಾಮನ ದೇವಾಲಯಗಳಿವೆ. ಬಿಜೆಪಿಯವರಿಗೆ ಇತ್ತೀಚೆಗೆ ರಾಮನ ನೆನಪಾಗಿದೆ. ವೋಟ್​ಗಾಗಿ ರಾಮನ ನೆನಪು ಮಾಡಿಕೊಂಡಿದ್ದಾರೆ. ಸಾವಿರಾರು ವರ್ಷಗಳಿಂದ ನಾವು ರಾಮ ಆಂಜನೇಯ ಪೂಜೆ ಮಾಡ್ತಿದ್ದೀವಿ. ನಾವು ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳಲ್ಲ. ಬಿಜೆಪಿಗೆ ಏನೂ ಬಂಡವಾಳ ಇಲ್ಲ, ಅದಕ್ಕೆ ಧರ್ಮ ತರುತ್ತಾರೆ. ನಾವು ಶ್ರದ್ಧಾ ಭಕ್ತಿಯಿಂದ ಶ್ರೀರಾಮನನ್ನು ಪೂಜೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿ ಹಣ ಆ ದೇಗುಲಕ್ಕೇ ಬಳಕೆಯಾಗಬೇಕು: ರಾಮಲಿಂಗಾ ರೆಡ್ಡಿ ಮಹತ್ವದ ಘೋಷಣೆ

ಬಿಜೆಪಿಯವರು ಅಧಿಕಾರಕ್ಕೆ ಬಂದಾಗ ಏನೂ ಕೆಲಸ ಮಾಡಲಿಲ್ಲ. ಕೆಲಸ ಮಾಡೋರಿಗೂ ಬಿಡಲ್ಲ. ಆಗೋದಕ್ಕೆ ಹರಕತ್ತು, ಆಗದೆ ಇರೋದಕ್ಕೆ ಕುಮ್ಮಕ್ಕು ಬಿಜೆಪಿಯ ಕಥೆ. ಕೆಲಸ ಮಾಡಲಿಲ್ಲ, ಹೀಗಾಗಿ ಜನರು ಬಿಜೆಪಿಯವರನ್ನು ಮನೆಗೆ ಕಳಿಸಿದ್ರು.ಕಳೆದ ನಾಲ್ಕು ವರ್ಷದಿಂದ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ನೇಮಕಾತಿ ಮಾಡಲಿಲ್ಲ. ಪ್ರತಿ ದಿನ 60 ಲಕ್ಷ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್​ಗಳಲ್ಲಿ ಓಡಾಡ್ತಿದ್ದಾರೆ. ಇವರ ಶಾಪ ಬಿಜೆಪಿಗೆ ತಟ್ಟತ್ತೆ. ಬಿಜೆಪಿಗೆ ತಡೆದುಕೊಳ್ಳಲು ಆಗ್ತಿಲ್ಲ, ಅವರಿಗೆ ಹೊಟ್ಟೆ ಉರಿ. ಪ್ರಹ್ಲಾದ ಜೋಶಿ ಗಿಮಿಕ್ ಮಾಡ್ತಿದಾರೆ. ಕೇಂದ್ರದ ಮಂತ್ರಿ ಅಂಕಿ ಸಂಖ್ಯೆ ಇಟ್ಕೊಂಡು ಮಾತಾಡಬೇಕು. ಕರಸೇವಕ ಅಂತಾರೆ, ಅವರ ಮೇಲೆ ಎಷ್ಟು ಕೇಸ್ ಇದೆ? ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

ಮೂರು ಜನ ಡಿಸಿಎಮ್ ಕೇಳೋದ್ರಲ್ಲಿ ತಪ್ಪಿಲ್ಲ. ಮಾಡೋದ ಬಿಡೋದು ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಉಪಮುಖ್ಯಮಂತ್ರಿ ಆಕಾಂಕ್ಷಿ ಅಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ