ಸಿದ್ದರಾಮಯ್ಯ ನಾಯಕತ್ವ ಅಂತ್ಯಕಾಲಕ್ಕೆ ಬಂದಿದೆ -ಶೆಟ್ಟರ್​

ಹುಬ್ಬಳ್ಳಿ: ಕಾಂಗ್ರೆಸ್‌ ನಾಯಕರು ಅಧಿಕಾರದ ಕನಸು ಕಾಣುತ್ತಿದ್ದಾರೆ, ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ: ಬಿಜೆಪಿ‌ ಸಾಂಸ್ಥಿಕ ಚುನಾವಣಾ ವೀಕ್ಷಕರ ಸಭೆಯಲ್ಲಿ ಮಾತನಾಡಿದ ಶೆಟ್ಟರ್, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಚುನಾವಣಾ ಫಲಿತಾಂಶ ಬರುವ ಮುಂಚೆಯೇ ಅವರು ಅಧಿಕಾರದ ಕನಸು ಕಾಣುತ್ತಿದ್ದಾರೆ. ಈ ಹಿಂದೆ ಅವರು ಕೊಟ್ಟಂತಹ ಭಾಗ್ಯಗಳು ಯಾರಿಗೂ ತಲುಪಿಲ್ಲ. […]

ಸಿದ್ದರಾಮಯ್ಯ ನಾಯಕತ್ವ ಅಂತ್ಯಕಾಲಕ್ಕೆ ಬಂದಿದೆ -ಶೆಟ್ಟರ್​
ಸಾಧು ಶ್ರೀನಾಥ್​

Updated on: Dec 08, 2019 | 1:15 PM

ಹುಬ್ಬಳ್ಳಿ: ಕಾಂಗ್ರೆಸ್‌ ನಾಯಕರು ಅಧಿಕಾರದ ಕನಸು ಕಾಣುತ್ತಿದ್ದಾರೆ, ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ:
ಬಿಜೆಪಿ‌ ಸಾಂಸ್ಥಿಕ ಚುನಾವಣಾ ವೀಕ್ಷಕರ ಸಭೆಯಲ್ಲಿ ಮಾತನಾಡಿದ ಶೆಟ್ಟರ್, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಚುನಾವಣಾ ಫಲಿತಾಂಶ ಬರುವ ಮುಂಚೆಯೇ ಅವರು ಅಧಿಕಾರದ ಕನಸು ಕಾಣುತ್ತಿದ್ದಾರೆ. ಈ ಹಿಂದೆ ಅವರು ಕೊಟ್ಟಂತಹ ಭಾಗ್ಯಗಳು ಯಾರಿಗೂ ತಲುಪಿಲ್ಲ. ಸಿದ್ದರಾಮಯ್ಯಗೆ ಜನರ ನಾಡಿಮಿಡಿತ ಗೊತ್ತಿಲ್ಲ. ಅವರು ಅಹಂಕಾರದಿಂದ ಮಾತನಾಡುತ್ತಾರೆ. ಸಿದ್ಧರಾಮಯ್ಯ ಅವರ ನಾಯಕತ್ವ ಅಂತ್ಯಕಾಲಕ್ಕೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಸಿದ್ದರಾಮಯ್ಯ ಅವರ ವಿಪಕ್ಷ ನಾಯಕ ಸ್ಥಾನವನ್ನು ಮುಟ್ಟುಗೋಲು ಹಾಕಿಕೊಳ್ತಾರೆ. ಸಿದ್ದರಾಮಯ್ಯ ನಾಯಕತ್ವ ಅಂತ್ಯಕಾಲಕ್ಕೆ ಬಂದಿದೆ. ಹೀಗಾಗಿ ಮೊದಲು ಸಿದ್ದರಾಮಯ್ಯ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿ. ಅದನ್ನು ಬಿಟ್ಟು ಬಿಜೆಪಿ ಬಗ್ಗೆ ಮಾತನಾಡುವುದನ್ನು ಬಿಡಲಿ ಎಂದು ಹುಬ್ಬಳ್ಳಿ ನಗರದಲ್ಲಿ ಸಚಿವ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us