AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಕೆಲಸ ಆಗುತ್ತಿಲ್ಲವೆಂದು ಪತ್ರ ಬರೆದಿದ್ದು ನಿಜ, ಆದರೆ ಹಳೆಯದ್ದು: ಕಾಂಗ್ರೆಸ್​​ ಶಾಸಕ ಬಿಆರ್ ಪಾಟೀಲ್

ಅಭಿವೃದ್ಧಿ ಕೆಲಸಕ್ಕೆ ಹಣದ ಕೊರತೆ ಇದೆ. ಈ ವರ್ಷ ಸರ್ಕಾರದ ಗ್ಯಾರಂಟಿಗೆ 56 ಸಾವಿರ ಕೋಟಿ ರೂಪಾಯಿ ಬೇಕು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಸಿಗುತ್ತದೆ ಎಂದು ಕಾಂಗ್ರೆಸ್​​ ಶಾಸಕ ಬಿಆರ್ ಪಾಟೀಲ್ ಧಾರಬವಾಡದಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಅಭಿವೃದ್ಧಿ ಕೆಲಸ ಆಗುತ್ತಿಲ್ಲವೆಂದು ಪತ್ರ ಬರೆದಿದ್ದು ನಿಜ, ಆದರೆ ಹಳೆಯದ್ದು: ಕಾಂಗ್ರೆಸ್​​ ಶಾಸಕ ಬಿಆರ್ ಪಾಟೀಲ್
ಕಾಂಗ್ರೆಸ್​​ ಶಾಸಕ ಬಿಆರ್ ಪಾಟೀಲ್
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Ganapathi Sharma|

Updated on: Nov 09, 2023 | 6:01 PM

Share

ಧಾರವಾಡ, ನವೆಂಬರ್ 9: ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಪತ್ರ ಬರೆದ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್​​ ಶಾಸಕ ಬಿಆರ್ ಪಾಟೀಲ್ (BR Patil) ಪ್ರತಿಕ್ರಿಯೆ ನೀಡಿದ್ದು, ಆ ರೀತಿ ಪತ್ರ ಬರೆದಿದ್ದು ನಿಜ, ಆದರೆ ಅದು ಹಳೆಯದ್ದು. ಅದನ್ನು ಈಗ ವೈರಲ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಧಾರವಾಡದಲ್ಲಿ (Dharawad) ಮಾತನಾಡಿದ ಅವರು, ನಾವು ಮೂರು ಜನರಲ್ಲ, ಅನೇಕ ಶಾಸಕರು ಸೇರಿ ಪತ್ರ ಬರೆದಿದ್ದೆವು. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಪತ್ರ ಬರೆಯಲಾಗಿತ್ತು ಎಂದು ಹೇಳಿದ್ದಾರೆ.

ಆ ಪತ್ರ ಬರೆದಿದ್ದರಲ್ಲಿ ಅಸಮಾಧಾನ, ಅತೃಪ್ತಿ ಇರಲಿಲ್ಲ. ಸಭೆ ಕರೆಯುವಂತೆ ಕೇಳಿದ್ದೆವು ಅಷ್ಟೆ. ಆದರೆ ಹಳೇ ದಿನಾಂಕದ ಲೆಟರ್ ಹೆಡ್ ದುರುಪಯೋಗ ಆಗಿದೆ. ತಮಗೆ ಬೇಕಾದಂತೆ ಬರೆದುಕೊಂಡು ಪತ್ರ ವೈರಲ್ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಭಿವೃದ್ಧಿ ಕೆಲಸಕ್ಕೆ ಹಣದ ಕೊರತೆ ಇದೆ. ಈ ವರ್ಷ ಸರ್ಕಾರದ ಗ್ಯಾರಂಟಿಗೆ 56 ಸಾವಿರ ಕೋಟಿ ರೂಪಾಯಿ ಬೇಕು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಸಿಗುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​ ಪಕ್ಷದಲ್ಲಿ ಲಿಂಗಾಯತರ ಕಡೆಗಣನೆ ಮಾಡಲಾಗುತ್ತಿದೆ ಎಂಬ ಬಿಜೆಪಿ ನಾಯಕ ಗೋವಿಂದ ಕಾರಜೋಳ ಆರೋಪಕ್ಕೆ ಸಂಬಂಧಿಸಿ ತಿರುಗೇಟು ನೀಡಿದ ಪಾಟೀಲ್​, ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪರಿಸ್ಥಿತಿ ಏನಾಗಿದೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್​​ನಲ್ಲಿ ಲಿಂಗಾಯತರು ಗಟ್ಟಿಯಾಗಿದ್ದೇವೆ. ಎಲ್ಲರನ್ನೂ ಸಿಎಂ ಸಿದ್ದರಾಮಯ್ಯ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾವಣೆ ವದಂತಿಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಈಗ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಚಾಯಿತಿಗೊಂದು ಮದ್ಯದಂಗಡಿ: ತಮ್ಮದೇ ಸರ್ಕಾರದ ಈ ನಡೆಗೆ ಸಿಡಿದೆದ್ದ ಕಾಂಗ್ರೆಸ್ ಶಾಸಕ

ಗ್ರಾಮ ಪಂಚಾತಿಗೊಂದು ವೈನ್ ಶಾಪ್ ಆರಂಭಿಸುವ ರಾಜ್ಯ ಸರ್ಕಾರದ ಚಿಂತನೆ ವಿಚಾರವಾಗಿಯೂ ಬಿಆರ್​ ಪಾಟೀಲ್ ವಿರೋಧ ವ್ಯಕ್ತಪಡಿಸಿ ಇತ್ತೀಚೆಗೆ ಸುದ್ದಿಯಾಗಿದ್ದರು. ಅಲ್ಲದೇ, ಈ ನಡೆಯಿಂದ ಹಿಂದೆ ಸರಿಯದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?