AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಮುಟ್ಟಿದ್ರೆ ನೀವು ಸುಟ್ಟು ಭಸ್ಮ ಆಗ್ತೀರಿ- ಬಿಜೆಪಿಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಎಚ್ಚರಿಕೆ

ಇಂದು(ಏ.14) ಹುಬ್ಬಳ್ಳಿಯಲ್ಲಿ(Hubballi) ನಡೆದ ವಿಶ್ವ ಮಾನವರ ದಿನಾಚರಣೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ, ‘ಸಂವಿಧಾನ ಮುಟ್ಟಿದ್ರೆ ನೀವು ಸುಟ್ಟು ಭಸ್ಮ ಆಗ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಸಚಿವ ಸಂತೋಷ್​ ಲಾಡ್​ ಮಾತನಾಡಿ, ‘ಬಸವಣ್ಣನವರು ಸಮಾನತೆಗಾಗಿ ಶ್ರಮಿಸಿದ ಕ್ರಾಂತಿಕಾರಿ ನಾಯಕ. ಬಸವಣ್ಣನವರ ಆಶಯ ರೀತಿಯಲ್ಲೇ ಡಾ.ಬಿ.ಆರ್.ಅಂಬೇಡ್ಕರ್ ನಡೆದಿದ್ದಾರೆ ಎಂದರು.

ಸಂವಿಧಾನ ಮುಟ್ಟಿದ್ರೆ ನೀವು ಸುಟ್ಟು ಭಸ್ಮ ಆಗ್ತೀರಿ- ಬಿಜೆಪಿಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಎಚ್ಚರಿಕೆ
ಬಿಜೆಪಿಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಎಚ್ಚರಿಕೆ
ಶಿವಕುಮಾರ್ ಪತ್ತಾರ್
| Edited By: |

Updated on: Apr 14, 2024 | 9:52 PM

Share

ಹುಬ್ಬಳ್ಳಿ, ಏ.14: ಸಂವಿಧಾನ ಮುಟ್ಟಿದ್ರೆ ನೀವು ಸುಟ್ಟು ಭಸ್ಮ ಆಗ್ತೀರಿ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ (Prasad Abbayya)ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು(ಏ.14) ಹುಬ್ಬಳ್ಳಿಯಲ್ಲಿ(Hubballi) ನಡೆದ ವಿಶ್ವ ಮಾನವರ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಕೆಲವೊಬ್ಬರು ಮಾತೆತ್ತಿದ್ರೆ ಸಂವಿಧಾನ ಬದಲಾಯಿಸುವ ಬಗ್ಗೆ ಮಾತಾಡುತ್ತಿದ್ದಾರೆ. ಆದರೆ, ಸಂವಿಧಾನ ಬದಲಾವಣೆ ಸಾಧ್ಯವೇ ಇಲ್ಲ. ಒಂದು ವೇಳೆ ಸಂವಿಧಾನ ಬದಲಾವಣೆಗೆ ಕೈಹಾಕಿದರೆ ಸುಟ್ಟು ಭಸ್ಮ ಆಗುತ್ತಾರೆ ಎಂದರು.

ಡಾ. ಬಿ.ಆರ್​ ಅಂಬೇಡ್ಕರ್ ಅವರು ಶೋಷಿತ ಜನಾಂಗಕ್ಕೆ ಜೀವನ ಮುಡುಪಾಗಿಟ್ಟಿದ್ದರು. ಸಂವಿಧಾನ ಬದಲಾಯಿಸ್ತೇವೆ ಎನ್ನುವ ಭೂಪರಿಗೆ ತಕ್ಕ ಉತ್ತರ ಕೊಡಬೇಕು. ಸಂವಿಧಾನ ವಿರೋಧಿ ಹೇಳಿಕೆ ಕೊಡುವವರನ್ನು ಲಾಡ್ ನಾಶ ಮಾಡ್ತಾರೆ. ಸಚಿವ ಸಂತೋಷ್ ಲಾಡ್ ಗುಡುಗು ಮಿಂಚಿನ ರೀತಿಯಲ್ಲಿ ಓಡಾಡುತ್ತಿದ್ದಾರೆ. BJP ಕಚೇರಿಯಲ್ಲಿ ಅಂಬೇಡ್ಕರ್, ವಾಲ್ಮೀಕಿ ಫೋಟೋ ಹೊರಗೆ ಹಾಕಲಾಗಿದೆ. ಬಿಜೆಪಿ ಮತ್ತು RSS ಮನಸ್ಥಿತಿ ಏನು ಎಂದು ಇದರಿಂದಲೇ ಗೊತ್ತಾಗುತ್ತದೆ. ಸಂವಿಧಾನ ಉಳಿಯಬೇಕಾದ್ರೆ ವಿನೋದ್ ಅಸೂಟಿಯಂಥವರು ಗೆಲ್ಲಬೇಕು ಎಂದು ಹೇಳಿದರು.

ಇದನ್ನೂ ಓದಿ:ಅನಂತಕುಮಾರ್ ಹೆಗಡೆ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಅಸಾಧ್ಯ: ಬಿಜೆಪಿ ಉಪಾಧ್ಯಕ್ಷ ರಾಜುಗೌಡ

ಇದೇ ವೇಳೆ ಮಾತನಾಡಿದ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್, ‘ಡಾ.ಅಂಬೇಡ್ಕರ್​ ಕೇವಲ ಎಸ್​ಸಿ, ಎಸ್​ಟಿ ಜನಾಂಗಕ್ಕೆ ಸೀಮಿತವಾಗಿರಲಿಲ್ಲ. ಸಾಹು ಮಹಾರಾಜರು ಶೇ.50.ರಷ್ಟು ಮೀಸಲಾತಿ ಕೊಟ್ಟ ಮೊದಲಿಗರು, ಬಸವಣ್ಣನವರು ಸಮಾನತೆಗಾಗಿ ಶ್ರಮಿಸಿದ ಕ್ರಾಂತಿಕಾರಿ ನಾಯಕ. ಬಸವಣ್ಣನವರ ಆಶಯ ರೀತಿಯಲ್ಲೇ ಡಾ.ಬಿ.ಆರ್.ಅಂಬೇಡ್ಕರ್ ನಡೆದಿದ್ದಾರೆ. 70 ವರ್ಷದಲ್ಲಿ ಕಾಂಗ್ರೆಸ್ ಏನು ಮಾಡಿದೆ ಅಂತಾ ಮೋದಿ ಕೇಳ್ತಾರೆ. ಮೋದಿ ಜನಿಸಿದ ವರ್ಷದಲ್ಲೇ ಈ ದೇಶಕ್ಕೆ ಸಂವಿಧಾನ ಜಾರಿಗೆ ಬಂತು. ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಮೋದಿ ಓದಿ ಅರ್ಥ ಮಾಡಿಕೊಳ್ಳಲಿ. ಬಿಜೆಪಿ ಮತ್ತು ಆರ್​​ಎಸ್​​ಎಸ್​​ನವರು ಎಂದೂ ಅಂಬೇಡ್ಕರ್​​ರನ್ನು ಒಪ್ಪಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ