AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ; ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಜಮೀರ್ ಅಹ್ಮದ್

ಹೆಲ್ಮೆಟ್ ಹೇಗೆ ಸೇಫ್ಟಿ ಕೊಡುತ್ತೋ ಹಾಗೇ ಹಿಜಾಬ್​ ನೀಡುತ್ತೆ. ಹೆಲ್ಮೆಟ್​ ಕಡ್ಡಾಯವಿದ್ದರೂ ಕೆಲ ಬೈಕ್ ಸವಾರರು ಹಾಕಲ್ಲ. ಅದೇ ರೀತಿ ಬಹಳ ಜನ ಹಿಜಾಬ್​ ಕೂಡ ಹಾಕುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್​ ಹೇಳಿದ್ದಾರೆ.

ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ; ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಜಮೀರ್ ಅಹ್ಮದ್
ಜಮೀರ್ ಅಹ್ಮದ್​
TV9 Web
| Edited By: |

Updated on:Feb 14, 2022 | 5:57 PM

Share

ಹುಬ್ಬಳ್ಳಿ: ಹಿಜಾಬ್​ ಬಗ್ಗೆ ನಾನು ಮಾತನಾಡುತ್ತೇನೆ. ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ. ನಾನು ಯಾಕೆ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ (DK Shivakumar) ಜಮೀರ್​ ಅಹ್ಮದ್ ಖಾನ್ (Zameer Ahmad Khan) ಪ್ರತಿಕ್ರಿಯೆ​ ಕೊಟ್ಟಿದ್ದಾರೆ. ಹಿಜಾಬ್ (Hijab)​ ಹಾಕಬೇಕು ಎಂದು ನಾನು ಹೇಳಿಕೆ ನೀಡಿದ್ದೆ. ನನ್ನ ಹೇಳಿಕೆಯನ್ನು ಮಾಧ್ಯಮದವರು ತಿರುಚಿದ್ದಾರೆ. ಹೆಲ್ಮೆಟ್​ ರೀತಿ ಹಿಜಾಬ್​ ಹಾಕಬೇಕು ಎಂದು ಹೇಳಿದ್ದೆ. ಹೆಲ್ಮೆಟ್ ಹೇಗೆ ಸೇಫ್ಟಿ ಕೊಡುತ್ತೋ ಹಾಗೇ ಹಿಜಾಬ್​ ನೀಡುತ್ತೆ. ಹೆಲ್ಮೆಟ್​ ಕಡ್ಡಾಯವಿದ್ದರೂ ಕೆಲ ಬೈಕ್ ಸವಾರರು ಹಾಕಲ್ಲ. ಅದೇ ರೀತಿ ಬಹಳ ಜನ ಹಿಜಾಬ್​ ಕೂಡ ಹಾಕುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್​ ಹೇಳಿದ್ದಾರೆ.

ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಮೀರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರು. ಮೊದಲೇ ಹೇಳಿದ್ದೆ ಮಾತನಾಡಬಾರದು ಅಂತಾ. ಆದರೂ ಕೆಲವರು ಮಾತನಾಡಿದ್ದಾರೆ, ಜಮೀರ್ ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಲು ಹೇಳುತ್ತೇನೆ ಎಂದು ಹೇಳಿದ್ದರು.

ನಿನ್ನೆ (ಫೆಬ್ರವರಿ 13) ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್​ಖಾನ್​ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ವಿವಿಧ ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಹಿಜಾಬ್​ ಅಂದ್ರೆ ಮುಸಲ್ಮಾನರಲ್ಲಿ ಗೋಶಾಪರದ ಅಂತ ಹೇಳ್ತೇವೆ. ಅವರ ಮನೆಯಲ್ಲಿ ಹೆಣ್ಣುಮಕ್ಕಳಿದ್ದಾರೋ ಇಲ್ಲವೋ ಗೊತ್ತಿಲ್ಲ. ಅವರ ಮನೆಯಲ್ಲಿ ಹೆಣ್ಣುಮಕ್ಕಳು ಇದ್ದಿದ್ದರೆ ಗೊತ್ತಾಗುತ್ತಿತ್ತು. ಹೆಣ್ಣುಮಕ್ಕಳು ತಮ್ಮ ರಕ್ಷಣೆಗಾಗಿ ಹಿಜಾಬ್​ ಧರಿಸುತ್ತಾರೆ. ಹೆಣ್ಣುಮಕ್ಕಳು ದೊಡ್ಡವರಾದ ಮೇಲೆ ದೇಹರಚನೆ ಕಾಣಿಸಬಾರದು. ದೇಹರಚನೆ ಹೊರಗೆ ಕಾಣಿಸಬಾರದು ಎಂದು ಹಿಜಾಬ್​ ಬಳಸ್ತಾರೆ. ಅತ್ಯಾಚಾರ ಪ್ರಕರಣ ಹೆಚ್ಚಾಗಿರುವುದು ಭಾರತದಲ್ಲಿ. ಹಿಜಾಬ್​ ಹಾಕದಿರುವ ಕಾರಣದಿಂದ ಇಂತಹ ಘಟನೆ ನಡೆದಿದೆ ಎಂದು ಜಮೀರ್ ಅಹ್ಮದ್ ಹೇಳಿದ್ದರು.

ಇದನ್ನೂ ಓದಿ: ಸಂಬಂಧಗಳಿಗೆ ಮಹತ್ವ ಕೊಡುವ ಬುದ್ಧಿ ಜಮೀರ್​ಗೆ ಬರಲಿ: ಭಾರತಿ ಶೆಟ್ಟಿ ಆಕ್ರೋಶ

ಇದನ್ನೂ ಓದಿ: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ: ಜಮೀರ್ ಅಹ್ಮದ್ ​ಖಾನ್​ ವಿವಾದಾತ್ಮಕ ಹೇಳಿಕೆ

Published On - 5:52 pm, Mon, 14 February 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್