AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi: ಗಂಗೂಬಾಯಿ ಹಾನಗಲ್ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ‌

CM ಸಿದ್ದರಾಮಯ್ಯಗೆ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಬರೆದಿರುವ ಪತ್ರದ ಸಾರಾಂಶ ಹೀಗಿದೆ: ಕಳೆದ 12 ವರ್ಷದಲ್ಲಿ ಅಧ್ಯಕ್ಷರಾದ ಪ್ರಾದೇಶಿಕ ಆಯುಕ್ತರು ಸಭೆ ಕರೆಯದಿರುವುದು ಶೋಚನೀಯ. ಗುರುಕುಲಕ್ಕೆ ಸರ್ಕಾರ ಪ್ರತಿ ವರ್ಷ 1 ಕೋಟಿ 25 ಲಕ್ಷ ಅನುದಾನ ನೀಡುತ್ತಿತ್ತು. ಆದ್ರೆ 2023-24 ರಲ್ಲಿ ಕೇವಲ 25 ಲಕ್ಷ ಅನುದಾನ ಬಂದಿದೆ. ಹೀಗಾಗಿ ಗುರುಕುಲದ ನಿತ್ಯ ಚಟುವಟಿಕೆ ನಡೆಸಲು ಕಷ್ಟವಾಗಿದೆ ಎಂದಿದ್ದಾರೆ.

Hubballi: ಗಂಗೂಬಾಯಿ ಹಾನಗಲ್ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ‌
ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ‌
ಶಿವಕುಮಾರ್ ಪತ್ತಾರ್
| Edited By: ಸಾಧು ಶ್ರೀನಾಥ್​|

Updated on: Aug 31, 2023 | 12:40 PM

Share

ಹುಬ್ಬಳ್ಳಿ, ಆಗಸ್ಟ್​ 31: ಗಂಗೂಬಾಯಿ ಹಾನಗಲ್ ಭಾರತೀಯ ಶಾಸ್ತ್ರೀಯ ಸಂಗೀತ ಗುರುಕುಲ (Dr.Gangubai Hangal Gurukul) ಆರ್ಥಿಕ‌ ಸಂಕಷ್ಟದಲ್ಲಿದೆ. ಕಳೆದ ನಾಲ್ಕು ತಿಂಗಳಿಂದ ಗುರುಕುಲದ ಗುರುಗಳಿಗೆ ಗೌರವ ಧನಕ್ಕೆ ಕೊಕ್ಕೆ ಬಿದ್ದಿದೆ. ಗುರುಗಳು ಹಾಗೂ ತಬಲಾ ಸಾರಥಿಗಳಿಗೆ ಕಳೆದ ನಾಲ್ಕು ತಿಂಗಳಿಂದ ಗೌರವ ಧನ ಬಂದಿಲ್ಲ. ಹಾಗಾಗಿ ಗುರುಕುಲದ ಗುರುಗಳಿಗೆ ಗೌರವ ಧನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (CM Siddaramaiah) ಮೇಲ್ಮನೆ ಸದಸ್ಯ, ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್ ‌(Congress MLC Jagadish Shettar) ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಬರೆದಿರುವ ಪತ್ರದ ಸಾರಾಂಶ ಹೀಗಿದೆ:

ಗುರುಕುಲದ ಸರ್ವತೋಮುಖ ಅಭಿವೃದ್ಧಿಗೂ ಅನುದಾನ‌ ಬಿಡುಗಡೆ ಮಾಡುವಂತೆ ಜಗದೀಶ್ ಶೆಟ್ಟರ್ ಪತ್ರದಲ್ಲಿ ಕೋರಿದ್ದಾರೆ. ಕಳೆದ 12 ವರ್ಷದಲ್ಲಿ ಅಧ್ಯಕ್ಷರಾದ ಪ್ರಾದೇಶಿಕ ಆಯುಕ್ತರು ಸಭೆ ಕರೆಯದಿರುವುದು ಶೋಚನೀಯ ಸಂಗತಿಯಾಗಿದೆ‌. ಗುರುಕುಲಕ್ಕೆ ಸರ್ಕಾರ ಪ್ರತಿ ವರ್ಷ 1 ಕೋಟಿ 25 ಲಕ್ಷ ರೂಪಾಯಿ ಅನುದಾನ ನೀಡುತ್ತಿತ್ತು. ಆದ್ರೆ 2023-24 ರಲ್ಲಿ ಕೇವಲ 25 ಲಕ್ಷ ರೂಪಾಯಿ ಅನುದಾನ ಬಂದಿದೆ. ಗುರುಕುಲದ ಸರ್ಕಾರಿ ಆಡಳಿತ ವರ್ಗ ಹೊರತು ಪಡಿಸಿ 25 ಲಕ್ಷ ರೂ ಅನುದಾನ ಬಂದಿದೆ.

ಇದನ್ನೂ ಓದಿ:  ಲಿಂಗಸುಗೂರು ಪುರಸಭೆಯಲ್ಲಿ ಲ್ಯಾಂಡ್ ಮಾಫಿಯಾ -ಸಿಗ್ನೇಚರ್ ಇಲ್ಲದೆಯೇ ವೈಟ್ನರ್ ಹಚ್ಚಿ ದಾಖಲೆ ಸೃಷ್ಟಿ!

ಹೀಗಾಗಿ ಗುರುಕುಲದ ನಿತ್ಯ ಚಟುವಟಿಕೆ ನಡೆಸಲು ಕಷ್ಟವಾಗಿದೆ. ಗುರುಕುಲದಲ್ಲಿ 5 ಗುರುಗಳು, 4 ತಬಲಾ ಸಾರಥಿಗಳು ಕೆಲಸ ಮಾಡುತ್ತಿದ್ದಾರೆ. ಆದ್ರೆ ಕಳೆದ ನಾಲ್ಕು ತಿಂಗಳಿಂದ ಅವರಿಗೆ ಗೌರವಧನ ಬಂದಿಲ್ಲ ಎಂದು ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಅವರು ಪತ್ರ ಬರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದಾರೆ.

ಹುಬ್ಬಳ್ಳಿ ಕುರಿತಾದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು