AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡನ್ ಹೋಮ್ ಶೆಲ್ಟರ್ಸ್‌ಗೆ ಖರೀದಿ ಪತ್ರ ಬರೆದು ಕೊಡಲು ಗ್ರಾಹಕರ ಆಯೋಗ ಆದೇಶ

ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಅಪಾರ್ಟ್ಮೆಂಟ್ ಕಟ್ಟಿಸದೇ ಫ್ಲ್ಯಾಟಿನ ಸ್ವಾಧೀನತೆ ಕೊಟ್ಟಿರದೇ ಇರೋದು ಮತ್ತು ಖರೀದಿ ಪತ್ರ ನೋಂದಣಿ ಮಾಡಿಕೊಡುವಲ್ಲಿ ಅವರು ವಿಫಲರಾಗಿದ್ದು ಗ್ರಾಹಕರ ರಕ್ಷಣಾ ಕಾಯ್ದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಗೋಲ್ಡನ್ ಹೋಮ್ ಶೆಲ್ಟರ್ಸ್‌ಗೆ ಖರೀದಿ ಪತ್ರ ಬರೆದು ಕೊಡಲು ಗ್ರಾಹಕರ ಆಯೋಗ ಆದೇಶ
ಗೋಲ್ಡನ್ ಹೋಮ್ ಶೆಲ್ಟರ್ಸ್‌ಗೆ ಖರೀದಿ ಪತ್ರ ಬರೆದು ಕೊಡಲು ಗ್ರಾಹಕರ ಆಯೋಗ ಆದೇಶ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​|

Updated on:Sep 14, 2023 | 7:55 PM

Share

ಬೆಂಗಳೂರಿನ ರಾಘವೇಂದ್ರ ಹಂದ್ರಾಳ್ ಎಂಬುವವರು ಗೋಲ್ಡನ್ ಹೋಮ್ ಶೆಲ್ಟರ್ಸ್ ಅವರ ಜೊತೆ ಜೂನ್ 30, 2008ರಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಅಪಾರ್ಟ್ಮೆಂಟ್‌ನ ಡಿ-ಬ್ಲಾಕ್ 3ನೇ ಮಹಡಿಯಲ್ಲಿನ ಫ್ಲಾಟ್ ನಂ. 304ನ್ನು ರೂ. 22,56,000/- ರೂಪಾಯಿಗಳಿಗೆ ಖರೀದಿಸಲು ಒಪ್ಪಂದ ಮಾಡಿಕೊಂಡು ಸಂಪೂರ್ಣ ಹಣವನ್ನು ಸಂದಾಯ ಮಾಡಿದ್ದರು. ಈ ಒಪ್ಪಂದದ ಪ್ರಕಾರ ಬಿಲ್ಡರ್ 24 ತಿಂಗಳಲ್ಲಿ ಅಪಾರ್ಟ್ಮೆಂಟ್ ಕಾಮಗಾರಿ ಪೂರ್ತಿಗೊಳಿಸಿ, ರಾಘವೇಂದ್ರ ಅವರಿಗೆ ಕೊಡಬೇಕಾಗಿತ್ತು. ಜೊತೆಗೆ ಖರೀದಿ ಪತ್ರವನ್ನೂ ನೋಂದಣಿ ಮಾಡಿಕೊಡಬೇಕಾಗಿತ್ತು. ಆದರ ಒಪ್ಪಂದದ ಪ್ರಕಾರ ಬಿಲ್ಡರ್ ನಡೆದುಕೊಂಡಿರಲಿಲ್ಲ. ಹೀಗಾಗಿ ತನಗೆ ಮೋಸ ಮಾಡಿ ಬಿಲ್ಡರ್ ಸೇವಾ ನ್ಯೂನತೆ ಎಸಗಿದ್ದಾರೆ ಅಂತ ಹೇಳಿ ಅವರ ವಿರುದ್ಧ ಗ್ರಾಹಕ ಸಂರಕ್ಷಣಾ ಕಾಯಿದೆ ಅಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರ ಜಿಲ್ಲಾ ಗ್ರಾಹಕರ ಆಯೋಗಕ್ಕೆ (District Consumer Disputes Redressal Commission -DCDRC) ಜುಲೈ14, 2023 ರಂದು ರಾಘವೇಂದ್ರ ದೂರನ್ನು ಸಲ್ಲಿಸಿದ್ದರು.

ಈ ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಅಪಾರ್ಟ್ಮೆಂಟ್ ಕಟ್ಟಿಸದೇ ಫ್ಲ್ಯಾಟಿನ ಸ್ವಾಧೀನತೆ ಕೊಟ್ಟಿರದೇ ಇರೋದು ಮತ್ತು ಖರೀದಿ ಪತ್ರ ನೋಂದಣಿ ಮಾಡಿಕೊಡುವಲ್ಲಿ ಅವರು ವಿಫಲರಾಗಿದ್ದು ಗ್ರಾಹಕರ ರಕ್ಷಣಾ ಕಾಯ್ದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Also Read:  ಪಿಂಚಣಿಯನ್ನು ತಪ್ಪು ಲೆಕ್ಕ ಹಾಕಿದ ಹುಬ್ಬಳ್ಳಿ PF ಇಲಾಖೆಗೆ 6.42 ಲಕ್ಷ ರೂ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ರಾಘವೇಂದ್ರ ಅವರಿಗೆ ಬಿಲ್ಡರ್ ಈ ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ಅಪಾರ್ಟ್‌ಮೆಂಟಿನ ಫ್ಲ್ಯಾಟ್ ನಂ: 304 ಖರೀದಿ ಪತ್ರವನ್ನು ನೋಂದಣಿ ಮಾಡಿಕೊಡಲು ನಿರ್ದೇಶಿಸಿದೆ. ತಪ್ಪಿದ್ದಲ್ಲಿ ದೂರುದಾರರು ಆಯೋಗದ ಮುಖಾಂತರ ತಮ್ಮ ಸ್ವಂತ ಖರ್ಚಿನಲ್ಲಿ ಆಯುಕ್ತರನ್ನು ನೇಮಿಸಿಕೊಂಡು ಖರೀದಿ ಪತ್ರವನ್ನು ನೋಂದಣಿ ಮಾಡಿಸಿಕೊಳ್ಳಲು ಅರ್ಹರಿದ್ದಾರೆ ಅಂತಾ ಆಯೋಗ ತನ್ನ ತೀರ್ಪಿನಲ್ಲಿ ತಿಳಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ ರೂ. 50,000/- ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ಅಂತಾ ರೂ. 10,000/- ನೀಡುವಂತೆ ಎದುರುದಾರನಿಗೆ ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Thu, 14 September 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ