AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿಗೆ ಹಣ ಬಿಡುಗಡೆಯಾಗದಿರಲು ಈಶ್ವರಪ್ಪ ಮುಖ್ಯ ಕಾರಣ: ಗುತ್ತಿಗೆದಾರ ಸಂತೋಷ್ ಮತ್ತೊಂದು ಆರೋಪ

ನಾನು ನಿರ್ವಹಿಸಿದ ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲ. ಇದಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ನೇರ ಹೊಣೆ ಎಂದು ಕಮಿಷನ್ ಆರೋಪ ಮಾಡಿರುವ ಸಂತೋಷ್ ಪಾಟೀಲ್ ಹೇಳಿದರು.

ಕಾಮಗಾರಿಗೆ ಹಣ ಬಿಡುಗಡೆಯಾಗದಿರಲು ಈಶ್ವರಪ್ಪ ಮುಖ್ಯ ಕಾರಣ: ಗುತ್ತಿಗೆದಾರ ಸಂತೋಷ್ ಮತ್ತೊಂದು ಆರೋಪ
ಕೆ ಎಸ್​ ಈಶ್ವರಪ್ಪ
TV9 Web
| Edited By: |

Updated on: Mar 29, 2022 | 1:57 PM

Share

ಹುಬ್ಬಳ್ಳಿ: ನಾನು ನಿರ್ವಹಿಸಿದ ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲ. ಇದಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ನೇರ ಹೊಣೆ ಎಂದು ಕಮಿಷನ್ ಆರೋಪ ಮಾಡಿರುವ ಸಂತೋಷ್ ಪಾಟೀಲ್ ಹೇಳಿದರು. ಈಶ್ವರಪ್ಪ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂತೋಷ್ ಬರೆದಿದ್ದ ಪತ್ರ ಸುದ್ದಿಯಾಗಿತ್ತು. ‘ಈಶ್ವರಪ್ಪ ಅವರು ಆರೋಪದಿಂದ ನುಣುಚಿಕೊಳ್ಳಲು ಏನೇನೋ ಮಾತನಾಡುತ್ತಿದ್ದಾರೆ. ಸಚಿವರು, ಇಲಾಖೆಯ ಅನುಮತಿಯಿಲ್ಲದೆ ಯಾವುದಾದರೂ ಕಾಮಗಾರಿ ಮಾಡಲು ಸಾಧ್ಯವಿದೆಯೇ? ಅನುಮತಿ ಇಲ್ಲದೆ ಒಂದು ಅಡಿ ರಸ್ತೆ ಅಗೆದರೆ ಕೇಸ್ ಹಾಕುತ್ತಾರೆ. ಅಂಥದ್ದರಲ್ಲಿ ನಾನು ನೂರೆಂಟ್​ ಕಾಮಗಾರಿ ಮಾಡಿದ್ದೇನೆ ಎಂದು ಹೇಳಿದರು.

ನಾನು ಅನುಮತಿ ಪಡೆಯದೆ ಕಾಮಗಾರಿ ನಡೆಸಲು ಹೇಗೆ ಸಾಧ್ಯ ಎನ್ನುವ ಬಗ್ಗೆ ಈಶ್ವರಪ್ಪ ಅವರೇ ಉತ್ತರಿಸಬೇಕು. ಇಷ್ಟೊಂದು ಕಾಮಗಾರಿಗಳನ್ನು ನಿರ್ವಹಿಸಿದ್ದರೂ ಬಿಲ್​ಗಳ ಮಂಜೂರಾಗಿಲ್ಲ ಎಂದು ಗೆಳೆಯರೊಂದಿಗೆ ಚರ್ಚಿಸಿದಾಗ ಅವರು ತಾವೆಲ್ಲರೂ ಕಮಿಷನ್ ಕೊಟ್ಟು ಬಿಲ್ ಮಾಡಿಸಿಕೊಂಡಿದ್ದೇವೆ ಎಂದು ಹೇಳಿದರು. ನನಗೂ ಈಶ್ವರಪ್ಪ ಅವರ ಆಪ್ತ ಬಸವರಾಜು ಕಡೆಯಿಂದ ಕಮಿಷನ್​ ಆಮಿಷ ಬಂದಿತ್ತು. ಹಿರಿಯರಾಗಿರುವ ಈಶ್ವರಪ್ಪ ಏನೇನೋ ಮಾತನಾಡಬಾರದು. ನಾನು ಪ್ರಧಾನಿ ಮೋದಿಗೆ ಪತ್ರ ಬರೆದು ನ್ಯಾಯ ಕೇಳಿದ್ದೇನೆ. ನ್ಯಾಯ ಸಿಗದಿದ್ದರೆ ನಾನು ಜೀವ ಕಳೆದುಕೊಳ್ಳಬೇಕಾಗುತ್ತದೆ. ನಾನು ಕಟ್ಟಾ ಬಿಜೆಪಿ ಕಾರ್ಯಕರ್ತ, ಅದು ಎಲ್ಲರಿಗೂ ಗೊತ್ತು ಎಂದು ಹೇಳಿದರು.

ವಿಧಾನ ಪರಿಷತ್​ನಲ್ಲಿ ಮತ್ತೆ ಪ್ರಸ್ತಾಪ

ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕೇಳಿಬಂದಿರುವ ಕಮಿಷನ್ ಆರೋಪವು ಮಂಗಳವಾರವು ಸದನದಲ್ಲಿ ಸದ್ದು ಮಾಡಿತು. ಪ್ರತಿಪಕ್ಷಗಳ ಆರೋಪ ಕುರಿತು ಪ್ರತಿಕ್ರಿಯಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಯಾವ ಸಚಿವರು ಪರ್ಸೆಂಟೇಜ್ ಪಡೆದಿದ್ದಾರೆಂದು ನೇರವಾಗಿ ಹೇಳಲಿ. ಯಾರೋ ಎಲ್ಲೋ ಮಾತಾಡಿರುವ ಬಗ್ಗೆ ಇಲ್ಲಿ ಚರ್ಚೆ ಮಾಡುವುದು ಸರಿಯಲ್ಲ ಎಂದರು.

ಸಚಿವರ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಬೇಕು. ಕಮಿಷನ್ ವಿಚಾರದ ಬಗ್ಗೆ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಒತ್ತಾಯಕ್ಕೆ ಮಣಿಯದ ಈಶ್ವರಪ್ಪ, ರಾಜಕೀಯ ಪ್ರಚಾರಕ್ಕೆ ಸದನ ಬಳಸಿಕೊಳ್ತೀರಿ ಎಂದು ಕಿಡಿಕಾರಿದರು. ಅವನ್ಯಾರೋ ಪತ್ರ ಬರೆದರೆ ಅದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳಲು ಆಗುವುದಿಲ್ಲ ಎಂದರು.

ಯಾರೋ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಕ್ಕೆ ನಾವು ಉತ್ತರ ಕೊಡಲು ಆಗುವುದಿಲ್ಲ. ನಿರ್ದಿಷ್ಟವಾಗಿ ಯಾವ ಸಚಿವ, ಯಾವ ಶಾಸಕ ಹಣ ಪಡೆದ ಅಂತ ಹೇಳಲಿ. ಉತ್ತರ ಕೊಡ್ತೀವಿ ಎಂದರು. ಈ ಹೇಳಿಕೆಗೆ ಕಾಂಗ್ರೆಸ್​ನ ಪ್ರಕಾಶ್ ರಾಥೋಡ್, ಹರಿಪ್ರಸಾದ್ ಒತ್ತಾಯಿಸಿದರು.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸದಸ್ಯ ಪ್ರಕಾಶ್ ರಾಥೋಡ್, ಏಪ್ರಿಲ್ ಕೊನೆಯ ವಾರದಲ್ಲಿ ಗುತ್ತಿಗೆದಾರರಿಂದ ಹೋರಾಟ ಮಾಡಿದರು. ವಿವಿಧ ಇಲಾಖೆಗಳಲ್ಲಿ ₹ 25 ಸಾವಿರ ಕೋಟಿ ಅಕ್ರಮ ನಡೆದಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಿ. ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಸದನ ಸಮಿತಿಯನ್ನಾದರೂ ನೇಮಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕಾಮಗಾರಿ ಮಾಡಿದ ಬಿಲ್ ಕೊಡಿಸುವಂತೆ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಂತೋಷ್ ಪಾಟೀಲ್

ಇದನ್ನೂ ಓದಿ: ನನ್ನ ವಿರುದ್ಧ ದೂರು ಕೊಟ್ಟ ಹೆಸರಿನವರಿಗೆ ಯಾವುದೇ ಗುತ್ತಿಗೆ ಕೊಟ್ಟಿಲ್ಲ: ಈಶ್ವರಪ್ಪ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್