AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನದಾತನ ಕೈ ಹಿಡಿಯಬೇಕಿದ್ದ ಹತ್ತಿ ಬೆಳೆ ಸಂಪೂರ್ಣ ಮಣ್ಣು ಪಾಲು; ರೈತರು ಕಂಗಾಲು

ಮಳೆಗೆ ಬೆಳೆ ನಾಶವಾದರೂ ಅಧಿಕಾರಿಗಳ ಸುಳಿವೇ ಇಲ್ಲ ಅಂತ ರೈತರು ಆಕ್ರೋಶ ಹೊರಹಾಕಿದ್ದಾರೆ. ಸಮೀಕ್ಷೆ ಕೂಡಾ ಮಾಡಿಲ್ಲ ಅಂತ ಅನ್ನದಾತರು ಕಣ್ಣೀರು ಹಾಕಿದ್ದಾರೆ. ಹತ್ತಿ ಫಸಲು ನೀರಲ್ಲಿ ಕರಗಿ ಹೋಗುತ್ತಿದೆ.

ಅನ್ನದಾತನ ಕೈ ಹಿಡಿಯಬೇಕಿದ್ದ ಹತ್ತಿ ಬೆಳೆ ಸಂಪೂರ್ಣ ಮಣ್ಣು ಪಾಲು; ರೈತರು ಕಂಗಾಲು
ಹತ್ತಿ ಬೆಳೆ
TV9 Web
| Edited By: |

Updated on: Nov 21, 2021 | 9:20 AM

Share

ಹುಬ್ಬಳ್ಳಿ: ಜಿಲ್ಲೆಯಾದ್ಯಂತ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಹತ್ತಿ ಬೆಳೆ ಅನ್ನದಾತನ ಕೈ ಸೇರುವ ಮೊದಲೇ ಮಣ್ಣು ಪಾಲಾಗಿದೆ. ಪ್ರತಿ ಎಕರೆಗೆ 1 ಲಕ್ಷದಿಂದ ಒಂದೂವರೆ ಲಕ್ಷ ಆದಾಯ ಬರುವ ಹತ್ತಿ ಬೆಳೆ ನಿರಂತರ ಮಳೆಗೆ ಹಾಳಾಗಿದೆ. ನಾಲ್ಕು ದಿನದಿಂದ ಸುರಿದ ಅಕಾಲಿಕ ಮಳೆಗೆ ಹತ್ತಿ ಬೆಳೆ ಸರ್ವನಾಶವಾಗಿದೆ. ಧಾರವಾಡ ಜಿಲ್ಲೆಯ ನವಲಗುಂದ, ಹುಬ್ಬಳ್ಳಿ ಕುಂದಗೋಳ ತಾಲೂಕಿನಾದ್ಯಂತ ರೈತರು ಹತ್ತಿಯನ್ನು ಹೆಚ್ಚಾಗಿ ಬೆಳೆದಿದ್ದರು. ಆದರೆ ಮಳೆಯಿಂದ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಇನ್ನು ಮಳೆಗೆ ಬೆಳೆ ನಾಶವಾದರೂ ಅಧಿಕಾರಿಗಳ ಸುಳಿವೇ ಇಲ್ಲ ಅಂತ ರೈತರು ಆಕ್ರೋಶ ಹೊರಹಾಕಿದ್ದಾರೆ. ಸಮೀಕ್ಷೆ ಕೂಡಾ ಮಾಡಿಲ್ಲ ಅಂತ ಅನ್ನದಾತರು ಕಣ್ಣೀರು ಹಾಕಿದ್ದಾರೆ. ಹತ್ತಿ ಫಸಲು ನೀರಲ್ಲಿ ಕರಗಿ ಹೋಗುತ್ತಿದೆ. ರೈತನಿಗೆ ಆಸರೆಯಾಗಬೇಕಿದ್ದ ಹತ್ತಿ ಬೆಳೆ ಮಳೆಯಿಂದಾಗಿ ಮತ್ತಷ್ಟು ಕುಗ್ಗಿಸಿದೆ.

ಮೂರನೇ ಬಲಿ ದಾವಣಗೆರೆ ಜಿಲ್ಲೆಯಲ್ಲಿ ಮಳೆಗೆ ಮೂರನೇ ಬಲಿಯಾಗಿದೆ. ಜಾನುವಾರುಗಳ ಮೈ ತೊಳೆಯಲು ಹೋದ ರೈತ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 48 ವರ್ಷದ ತಿಪ್ಪೇಸ್ವಾಮಿ ಎಂಬುವವರು ಮೃತ ದುರ್ದೈವಿ. ನಿರಂತರ ಮಳೆಗೆ ಅನಿರೀಕ್ಷಿತವಾಗಿ ಕೆರೆಗೆ ನೀರು ಹರಿದು ಬಂದ ಹಿನ್ನೆಲೆ ರೈತ ದಾವಣಗೆರೆ ತಾಲೂಕಿನ ಹುಚ್ಚವನಹಳ್ಳಿ ಗ್ರಾಮದ ಕೆರೆ ನೀರಿನ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ದಾವಣಗೆರೆ ತಹಶೀಲ್ದಾರ್ ಗಿರೀಶ್ ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಸದ್ಯ ಈ ಪ್ರಕರಣ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸದ್ಯ ದಾವಣಗೆರೆ ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಸುರಿದ ಮಳೆಗೆ ಈಗ ಸ್ವಲ್ಪ ಅಲ್ಪವಿರಾಮ ಬಿದ್ದಿದೆ. ಧಾರಾಕಾರ ಮಳೆಗೆ ಅಡಿಕೆ ತೋಟಗಳು ಕೆರೆಯಂತಾಗಿವೆ. ಅಡಿಕೆ ಕೊಳೆತು ಹೋಗುವ ಆತಂಕದಲ್ಲಿ ರೈತರಿದ್ದಾರೆ.

ಇದನ್ನೂ ಓದಿ

ಮಂಚೇನಹಳ್ಳಿ ಕೆರೆ ಕಟ್ಟೆಯಲ್ಲಿ ನೀರು ಸೋರಿಕೆ; ರಾತ್ರೋರಾತ್ರಿ ದುರಸ್ತಿ ಕಾರ್ಯ ಮಾಡಿದ ಸ್ಥಳೀಯರು, ಜಿಲ್ಲೆಯ 13 ರಸ್ತೆಗಳ ಸಂಚಾರ ಮಾರ್ಗ ಬಂದ್

ಹಾಸನ: ಮಿತಿ ಮೀರಿದ ಕಾಡಾನೆ ಹಾವಳಿ; ಬಯಲಿನಲ್ಲಿ ದನಕರುಗಳು ಅಡ್ಡಾಡುವಂತೆ ಪ್ರತ್ಯಕ್ಷವಾದ 35 ಆನೆಗಳು

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್