AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ; ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ.

ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ; ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದ ಪ್ರಹ್ಲಾದ್ ಜೋಶಿ
ಪ್ರಹ್ಲಾದ್​ ಜೋಶಿ
TV9 Web
| Edited By: |

Updated on: Jan 28, 2024 | 7:54 AM

Share

ಹುಬ್ಬಳ್ಳಿ, ಜ.28: ಒಂದು ಕಾಲದಲ್ಲಿ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಿತ್ತು. ಆದರೆ ಇಂದು ಭಯೋತ್ಪಾದಕರನ್ನು ಹುಡುಕಿ ಹೊಡೆಯುವ ಕೆಲಸವಾಗಿದೆ. ದೇಶದಲ್ಲಿ ಶಾಂತಿ ಇರುವ ಕಾರಣಕ್ಕೆ ರಾಮಮಂದಿರ ನಿರ್ಮಾಣವಾಗಿದೆ. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ (Narendra Modi) ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ. ತೀಸ್ರೀ ಬಾರ್ ಮೋದಿ ಸರ್ಕಾರ ಬರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಈ ಉತ್ಸವದಲ್ಲಿ ಜೋಶಿ ಪುತ್ರಿ ಅರ್ಪಿತಾ ಜೋಶಿ ಎಲ್ಲರ ಗಮನ ಸೆಳೆದರು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕ ಸಂಚಿತ್ ಹೆಗಡೆ ಕೂಡ ಭಾಗಿಯಾಗಿದ್ದರು. ಇನ್ನು ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಅರ್ಪಿತಾ ಜೋಶಿ ಅವರು ಹಾಡು ಹಾಡಿ ಜನರನ್ನು ರಂಜಿಸಿದರು. ಮತ್ತೊಂದೆಡೆ ಗಾಳಿಪಟ ಉತ್ಸವದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ. ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್, ಶಾಸಕರಾದ ಮಹೇಶ್ ಟೆಂಗಿನಕಾಯಿ, ಎಂ.ಆರ್.ಪಾಟೀಲ್ ಉಪಸ್ಥಿತರಿದ್ದರು.

ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ

ಇನ್ನು ಗಾಳಿಪಟ ಉತ್ಸವದಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳು ಎಂದು ಮಾತು ಆರಂಭಿಸಿದರು. ಮೋದಿ ಹೆಸರು ಹೇಳುತ್ತಿದ್ದಂತೆ ಜನರೆಲ್ಲ ಮೋದಿ ಮೋದಿ ಎಂದು ಕೂಗಿ ಸಂಭ್ರಮಿಸಿದ್ರು. 500 ವರ್ಷಗಳ ದಾಸ್ಯದ ಕಳಂಕ ತೊರೆದು ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ಮೋದಿಯವರು ಕ್ರೀಡಾ ಉತ್ಸವ, ಸಾಂಸ್ಕೃತಿಕ ಉತ್ಸವ ಮಾಡಲು ಕರೆ ಕೊಟ್ಟಿದ್ದಾರೆ. ಮೋದಿಯವರ ಆಡಳಿತದಲ್ಲಿ ದೇಶ ಬಲಿಷ್ಠವಾಗಿದೆ.

ಒಂದು ಕಾಲದಲ್ಲಿ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಿತ್ತು. ಆದರೆ ಇಂದು ಭಯೋತ್ಪಾದಕರನ್ನು ಹುಡುಕಿ ಹೊಡೆಯುವ ಕೆಲಸವಾಗಿದೆ. ದೇಶದಲ್ಲಿ ಶಾಂತಿ ಇರುವ ಕಾರಣಕ್ಕೆ ರಾಮಮಂದಿರ ನಿರ್ಮಾಣವಾಗಿದೆ. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ. ತೀಸ್ರೀ ಬಾರ್ ಮೋದಿ ಸರ್ಕಾರ ಬರಬೇಕು. ನೀವೇ ಜನತಾ ಜನಾರ್ದನ, ಶ್ರೀಮನ್ನಾರಾಯಣ, ಪಾಂಡುರಂಗ ಎನ್ನುವ ಮೂಲಕ ಗಾಳಿಪಟ ಉತ್ಸವದಲ್ಲಿ ನೆರೆದಿದ್ದವರನ್ನು ಜೋಶಿ ಹಾಡಿಹೊಗಳಿದರು.

ಇದನ್ನೂ ಓದಿ: ನ್ಯಾಯಾಲಯದಿಂದ ಶಿಕ್ಷೆಗೊಳಗಾದ ವ್ಯಕ್ತಿಗಳನ್ನು ಸಾರ್ವಜನಿಕವಾಗಿ ವೈಭವೀಕರಿಸುವುದು ನ್ಯಾಯಾಂಗಕ್ಕೆ ಮಾಡಿದ ಅವಮಾನ: ಪ್ರಧಾನಿ ಮೋದಿ

ಗಾಳಿಪಟ ಉತ್ಸವದಲ್ಲಿ ಜೋಶಿ ಪರ ಅರವಿಂದ ಬೆಲ್ಲದ್ ಬ್ಯಾಟಿಂಗ್

ಇದೇ ವೇಳೆ ಮಾತನಾಡಿದ ಅರವಿಂದ ಬೆಲ್ಲದ್, 3ನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗಬೇಕು. ಮೋದಿ ಪ್ರಧಾನಿ ಆಗಬೇಕಾದರೆ ಜೋಶಿ 5ನೇ ಬಾರಿಗೆ ಗೆಲ್ಲಬೇಕು ಎನ್ನುವ ಮೂಲಕ ಗಾಳಿಪಟ ಉತ್ಸವದಲ್ಲಿ ಜೋಶಿ ಪರ ಅರವಿಂದ ಬೆಲ್ಲದ್ ಬ್ಯಾಟಿಂಗ್ ಮಾಡಿದ್ದಾರೆ. ನೀವೆಲ್ಲರೂ ಒಂದು ಸಾವಿರ ಜನರಿಂದ ಜೋಶಿಗೆ ಮತ ಹಾಕಿಸಬೇಕು. ದೇಶದ ಸಮೃದ್ಧಿ ಆಗಬೇಕು ಅಂದರೆ ಮತ್ತೊಮ್ಮೆ ಮೋದಿ ಬರಬೇಕು. ಇದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಜಗದೀಶ್ ಶೆಟ್ಟರ್​ ಘರ್​ವಾಪ್ಸಿಗೆ ಟಾಂಗ್ ಕೊಟ್ಟ ಟೆಂಗಿನಕಾಯಿ

ಗಾಳಿಪಟ ಉತ್ಸವದಲ್ಲಿ ಹುಬ್ಬಳ್ಳಿ-ಧಾರವಾರ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಜಗದೀಶ್ ಶೆಟ್ಟರ್​ ಘರ್​ವಾಪ್ಸಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಯಾರೋ ಒಬ್ಬರು 10 ಕೋಟಿ ಅನುದಾನದ ಬಗ್ಗೆ ಮಾತಾಡಿದ್ದರು. ಆದರೆ ನನಗೆ 150 ಕೊಡ್ತೀನಿ ಅಂದಿದ್ದಾರೆ ಎಂದರು.

ಕೆಲ ದಿನಗಳ ಹಿಂದೆ ಅನುದಾನ ವಿಚಾರವಾಗಿ ಟಾಕ್ ಫೈಟ್ ನಡೆದಿತ್ತು. ಶೆಟ್ಟರ್, ಮಹೇಶ್ ಟೆಂಗಿನಕಾಯಿ ನಡುವೆ ಟಾಕ್ ಫೈಟ್ ನಡೆದಿತ್ತು. ಶೆಟ್ಟರ್​ ಬಿಜೆಪಿಗೆ ಮರು ಸೇರ್ಪಡೆಯಾದರೂ ಟೆಂಗಿನಕಾಯಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಮೋದಿ ಹೇಗೆ ದೇಶ ಅಭಿವೃದ್ಧಿ ಮಾಡಿದ್ದಾರೋ ಹಾಗೆ ಜೋಶಿ ಧಾರವಾಡ ಲೋಕಸಭಾ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಅವರನ್ನು ಮಹೇಶ್ ಟೆಂಗಿನಕಾಯಿ ಹಾಡಿಹೊಗಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!