AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದ ನಂತರ, ಭವಿಷ್ಯದ ದೃಷ್ಟಿಯಿಂದ ಒಂದಾದ ದಂಪತಿ! ಇದು ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕ್ರಮ

ಒಂದಾದ ದಂಪತಿಯನ್ನು ನ್ಯಾಯಧೀಶರಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಪಿ. ಕೃಷ್ಣ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರುಗಳು ದಂಪತಿ ಮತ್ತೆ ಒಂದಾಗಿರುವುದರ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.

10 ವರ್ಷದ ನಂತರ, ಭವಿಷ್ಯದ ದೃಷ್ಟಿಯಿಂದ ಒಂದಾದ ದಂಪತಿ! ಇದು ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕ್ರಮ
10 ವರ್ಷದ ನಂತರ, ಭವಿಷ್ಯದ ದೃಷ್ಟಿಯಿಂದ ಒಂದಾದ ದಂಪತಿ! ಇದು ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕ್ರಮ
TV9 Web
| Edited By: |

Updated on:Jul 18, 2022 | 10:48 PM

Share

ಧಾರವಾಡ: ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು 10 ವರ್ಷಗಳಿಂದ ದೂರವಾಗಿದ್ದ ದಂಪತಿಯನ್ನು (Couple) ಪರಸ್ಪರ ಒಂದುಗೂಡಿಸಿದೆ. ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ದಂಪತಿ ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು. ಪತಿ ದೀಪಕ್ ಅವರು ವಿಚ್ಛೇದನ (Divorce) ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ‌ ಅರ್ಜಿ ಸಲ್ಲಿಸಿದ್ದರು.

ನಿರಾ ಎಂಬ 11 ವರ್ಷದ ಹೆಣ್ಣು ಮಗಳಿರುವ ಈ ದಂಪತಿಯನ್ನು ನ್ಯಾಯಮೂರ್ತಿಗಳ ಸಲಹೆ ಮೇರೆಗೆ ಮಧ್ಯಸ್ಥಿಕೆಗಾರರ ಎದುರು ಹಾಜರು ಪಡಿಸಲಾಯಿತು. ಉಭಯ ಪಕ್ಷಗಾರರ ಸಂಬಂಧಿಕರು, ಉಭಯ ಪಕ್ಷಗಾರರ ವಕೀಲರಾದ ಎಸ್.ಆರ್ . ಹೆಗಡೆ ಮತ್ತು ಗಿರೀಶ ಹಿರೇಮಠ ಹಾಗೂ ಮಧ್ಯಸ್ಥಗಾರರಾದ ಹನುಮಂತರೆಡ್ಡಿ ಸಾವ್ಕಾರ ಅವರ ಹಿತವಚನದ ಮೇರೆಗೆ ಮುಂದಿನ ದಾಂಪತ್ಯ ಜೀವನ, ಭವಿಷ್ಯ ಹಾಗೂ ಮಗಳ ಜೀವನದ ನಿರ್ವಹಣೆಯ ಸದುದ್ದೇಶವನ್ನು ಗಮನದಲ್ಲಿಟ್ಟುಕೊಂಡು ರಾಜಿ ಮಾಡಿಕೊಂಡರು.

ಒಂದಾದ ದಂಪತಿಯನ್ನು ನ್ಯಾಯಧೀಶರಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಪಿ. ಕೃಷ್ಣ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರುಗಳು ದಂಪತಿ ಮತ್ತೆ ಒಂದಾಗಿರುವುದರ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು. ದಂಪತಿ ಇಂದು ಜೊತೆಯಾಗಿ ಶಿವಮೊಗ್ಗದಲ್ಲಿರುವ ಪತಿಯ ಮನೆಗೆ ತೆರಳಿದರು ಎಂದು ಹೈಕೋರ್ಟ್ ಪೀಠದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್. ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published On - 8:00 pm, Mon, 18 July 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ