AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಭೂ ಸ್ವಾಧೀನದ ಪರಿಹಾರ ನೀಡದ ಸಣ್ಣ ನೀರಾವರಿ ಇಲಾಖೆ: ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ

ಭೂಸ್ವಾಧೀನ ಪರಿಹಾರದ ಹಣ ನೀಡುವಲ್ಲಿ ವಿಳಂಬ ತೋರಿದ ಹಿನ್ನೆಲೆ ಧಾರವಾಡದ ಸಣ್ಣ ನೀರಾವರಿ ಇಲಾಖೆಯನ್ನು ಜಪ್ತಿ ಮಾಡುವಂತೆ ಆದೇಶಿಸಿದ ನ್ಯಾಯಾಲಯ

ರೈತರಿಗೆ ಭೂ ಸ್ವಾಧೀನದ ಪರಿಹಾರ ನೀಡದ ಸಣ್ಣ ನೀರಾವರಿ ಇಲಾಖೆ: ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ
ಧಾರವಾಡ ಸಣ್ಣ ನೀರಾವರಿ ಇಲಾಖೆ
TV9 Web
| Edited By: |

Updated on:Nov 04, 2022 | 4:23 PM

Share

ಧಾರವಾಡ: ನ್ಯಾಯಾಲಯದ ಆದೇಶವಿದ್ದರೂ ಭೂಸ್ವಾಧೀನ ಪರಿಹಾರದ ಹಣ ನೀಡುವಲ್ಲಿ ವಿಳಂಬ ತೋರಿದ ಹಿನ್ನೆಲೆ ಧಾರವಾಡದ (Dharwad) ಸಣ್ಣ ನೀರಾವರಿ ಇಲಾಖೆಯನ್ನು (Irrigation Department) ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ಹಾವೇರಿ ಜಿಲ್ಲೆಯಲ್ಲಿನ ಶಿಗ್ಗಾಂವ್, ಹಾನಗಲ್ ತಾಲೂಕಿನಲ್ಲಿ ಕಾಲುವೆ ನಿರ್ಮಾಣ ಮಾಡಲು, ಹಾನಗಲ್ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ರೈತರ ಜಮೀನನ್ನು ಸ್ವಾಧೀನ ಮಾಡಿಕೊಳ್ಳಲಾಗಿತ್ತು. ಸಣ್ಣ ನೀರಾವರಿ ಇಲಾಖೆ 6 ಎಕರೆ ಜಮೀನು ಸ್ವಾಧೀನ ಮಾಡಿಕೊಂಡಿದ್ದು, ಪ್ರತಿ ಎಕರೆಗೆ 29 ಸಾವಿರ ರೂ. ಪರಿಹಾರ ನಿಗದಿಪಡಿಸಿತ್ತು.

ಆದರೆ ಪರಿಹಾರದ ಹಣ ಹೆಚ್ಚಿಸುವಂತೆ 2007 ರಲ್ಲಿ ನೀಲವ್ವ, ಶಿವಪ್ಪ, ಮಹಮ್ಮದ್ ಷರೀಫ್ ಅನ್ನೋ ಮೂವರು ರೈತರು ಹಾನಗಲ್‌ನ ಹಿರಿಯ ಸಿವಿಲ್ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. 3 ಜನ ರೈತರದ್ದು 35 ಗುಂಟೆ ಜಮೀನಿದ್ದು, ಪ್ರತಿ ಗುಂಟೆಗೆ 10 ಸಾವಿರ ಪರಿಹಾರ ನೀಡಬೇಕೆಂದು 2016 ರಲ್ಲಿ ಹಾನಗಲ್‌ನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿತ್ತು.

ತೀರ್ಪು ಬಂದು 6 ವರ್ಷಗಳು ಕಳೆದರೂ ನೀರಾವರಿ ಇಲಾಖೆ ರೈತರಿಗೆ ಪರಿಹಾರ ನೀಡಿರಲಿಲ್ಲ. ಈ ಸಂಬಂಧ ನ್ಯಾಯಾಲಯ ಇಲಾಖೆಯನ್ನು ಜಪ್ತಿ ಮಾಡುವಂತೆ ಆದೇಶ ನೀಡಿದೆ. ಹೀಗಾಗಿ ನ್ಯಾಯಾಲಯದ ಸಿಬ್ಬಂದಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್​ಗಳನ್ನು ಜಪ್ತಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Fri, 4 November 22

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ