AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಭೂ ಸ್ವಾಧೀನದ ಪರಿಹಾರ ನೀಡದ ಸಣ್ಣ ನೀರಾವರಿ ಇಲಾಖೆ: ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ

ಭೂಸ್ವಾಧೀನ ಪರಿಹಾರದ ಹಣ ನೀಡುವಲ್ಲಿ ವಿಳಂಬ ತೋರಿದ ಹಿನ್ನೆಲೆ ಧಾರವಾಡದ ಸಣ್ಣ ನೀರಾವರಿ ಇಲಾಖೆಯನ್ನು ಜಪ್ತಿ ಮಾಡುವಂತೆ ಆದೇಶಿಸಿದ ನ್ಯಾಯಾಲಯ

ರೈತರಿಗೆ ಭೂ ಸ್ವಾಧೀನದ ಪರಿಹಾರ ನೀಡದ ಸಣ್ಣ ನೀರಾವರಿ ಇಲಾಖೆ: ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ
ಧಾರವಾಡ ಸಣ್ಣ ನೀರಾವರಿ ಇಲಾಖೆ
TV9 Web
| Edited By: |

Updated on:Nov 04, 2022 | 4:23 PM

Share

ಧಾರವಾಡ: ನ್ಯಾಯಾಲಯದ ಆದೇಶವಿದ್ದರೂ ಭೂಸ್ವಾಧೀನ ಪರಿಹಾರದ ಹಣ ನೀಡುವಲ್ಲಿ ವಿಳಂಬ ತೋರಿದ ಹಿನ್ನೆಲೆ ಧಾರವಾಡದ (Dharwad) ಸಣ್ಣ ನೀರಾವರಿ ಇಲಾಖೆಯನ್ನು (Irrigation Department) ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ಹಾವೇರಿ ಜಿಲ್ಲೆಯಲ್ಲಿನ ಶಿಗ್ಗಾಂವ್, ಹಾನಗಲ್ ತಾಲೂಕಿನಲ್ಲಿ ಕಾಲುವೆ ನಿರ್ಮಾಣ ಮಾಡಲು, ಹಾನಗಲ್ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ರೈತರ ಜಮೀನನ್ನು ಸ್ವಾಧೀನ ಮಾಡಿಕೊಳ್ಳಲಾಗಿತ್ತು. ಸಣ್ಣ ನೀರಾವರಿ ಇಲಾಖೆ 6 ಎಕರೆ ಜಮೀನು ಸ್ವಾಧೀನ ಮಾಡಿಕೊಂಡಿದ್ದು, ಪ್ರತಿ ಎಕರೆಗೆ 29 ಸಾವಿರ ರೂ. ಪರಿಹಾರ ನಿಗದಿಪಡಿಸಿತ್ತು.

ಆದರೆ ಪರಿಹಾರದ ಹಣ ಹೆಚ್ಚಿಸುವಂತೆ 2007 ರಲ್ಲಿ ನೀಲವ್ವ, ಶಿವಪ್ಪ, ಮಹಮ್ಮದ್ ಷರೀಫ್ ಅನ್ನೋ ಮೂವರು ರೈತರು ಹಾನಗಲ್‌ನ ಹಿರಿಯ ಸಿವಿಲ್ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. 3 ಜನ ರೈತರದ್ದು 35 ಗುಂಟೆ ಜಮೀನಿದ್ದು, ಪ್ರತಿ ಗುಂಟೆಗೆ 10 ಸಾವಿರ ಪರಿಹಾರ ನೀಡಬೇಕೆಂದು 2016 ರಲ್ಲಿ ಹಾನಗಲ್‌ನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿತ್ತು.

ತೀರ್ಪು ಬಂದು 6 ವರ್ಷಗಳು ಕಳೆದರೂ ನೀರಾವರಿ ಇಲಾಖೆ ರೈತರಿಗೆ ಪರಿಹಾರ ನೀಡಿರಲಿಲ್ಲ. ಈ ಸಂಬಂಧ ನ್ಯಾಯಾಲಯ ಇಲಾಖೆಯನ್ನು ಜಪ್ತಿ ಮಾಡುವಂತೆ ಆದೇಶ ನೀಡಿದೆ. ಹೀಗಾಗಿ ನ್ಯಾಯಾಲಯದ ಸಿಬ್ಬಂದಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್​ಗಳನ್ನು ಜಪ್ತಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Fri, 4 November 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ