AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಭೂ ಸ್ವಾಧೀನದ ಪರಿಹಾರ ನೀಡದ ಸಣ್ಣ ನೀರಾವರಿ ಇಲಾಖೆ: ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ

ಭೂಸ್ವಾಧೀನ ಪರಿಹಾರದ ಹಣ ನೀಡುವಲ್ಲಿ ವಿಳಂಬ ತೋರಿದ ಹಿನ್ನೆಲೆ ಧಾರವಾಡದ ಸಣ್ಣ ನೀರಾವರಿ ಇಲಾಖೆಯನ್ನು ಜಪ್ತಿ ಮಾಡುವಂತೆ ಆದೇಶಿಸಿದ ನ್ಯಾಯಾಲಯ

ರೈತರಿಗೆ ಭೂ ಸ್ವಾಧೀನದ ಪರಿಹಾರ ನೀಡದ ಸಣ್ಣ ನೀರಾವರಿ ಇಲಾಖೆ: ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ
ಧಾರವಾಡ ಸಣ್ಣ ನೀರಾವರಿ ಇಲಾಖೆ
TV9 Web
| Updated By: ವಿವೇಕ ಬಿರಾದಾರ|

Updated on:Nov 04, 2022 | 4:23 PM

Share

ಧಾರವಾಡ: ನ್ಯಾಯಾಲಯದ ಆದೇಶವಿದ್ದರೂ ಭೂಸ್ವಾಧೀನ ಪರಿಹಾರದ ಹಣ ನೀಡುವಲ್ಲಿ ವಿಳಂಬ ತೋರಿದ ಹಿನ್ನೆಲೆ ಧಾರವಾಡದ (Dharwad) ಸಣ್ಣ ನೀರಾವರಿ ಇಲಾಖೆಯನ್ನು (Irrigation Department) ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ಹಾವೇರಿ ಜಿಲ್ಲೆಯಲ್ಲಿನ ಶಿಗ್ಗಾಂವ್, ಹಾನಗಲ್ ತಾಲೂಕಿನಲ್ಲಿ ಕಾಲುವೆ ನಿರ್ಮಾಣ ಮಾಡಲು, ಹಾನಗಲ್ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ರೈತರ ಜಮೀನನ್ನು ಸ್ವಾಧೀನ ಮಾಡಿಕೊಳ್ಳಲಾಗಿತ್ತು. ಸಣ್ಣ ನೀರಾವರಿ ಇಲಾಖೆ 6 ಎಕರೆ ಜಮೀನು ಸ್ವಾಧೀನ ಮಾಡಿಕೊಂಡಿದ್ದು, ಪ್ರತಿ ಎಕರೆಗೆ 29 ಸಾವಿರ ರೂ. ಪರಿಹಾರ ನಿಗದಿಪಡಿಸಿತ್ತು.

ಆದರೆ ಪರಿಹಾರದ ಹಣ ಹೆಚ್ಚಿಸುವಂತೆ 2007 ರಲ್ಲಿ ನೀಲವ್ವ, ಶಿವಪ್ಪ, ಮಹಮ್ಮದ್ ಷರೀಫ್ ಅನ್ನೋ ಮೂವರು ರೈತರು ಹಾನಗಲ್‌ನ ಹಿರಿಯ ಸಿವಿಲ್ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. 3 ಜನ ರೈತರದ್ದು 35 ಗುಂಟೆ ಜಮೀನಿದ್ದು, ಪ್ರತಿ ಗುಂಟೆಗೆ 10 ಸಾವಿರ ಪರಿಹಾರ ನೀಡಬೇಕೆಂದು 2016 ರಲ್ಲಿ ಹಾನಗಲ್‌ನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿತ್ತು.

ತೀರ್ಪು ಬಂದು 6 ವರ್ಷಗಳು ಕಳೆದರೂ ನೀರಾವರಿ ಇಲಾಖೆ ರೈತರಿಗೆ ಪರಿಹಾರ ನೀಡಿರಲಿಲ್ಲ. ಈ ಸಂಬಂಧ ನ್ಯಾಯಾಲಯ ಇಲಾಖೆಯನ್ನು ಜಪ್ತಿ ಮಾಡುವಂತೆ ಆದೇಶ ನೀಡಿದೆ. ಹೀಗಾಗಿ ನ್ಯಾಯಾಲಯದ ಸಿಬ್ಬಂದಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್​ಗಳನ್ನು ಜಪ್ತಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Fri, 4 November 22

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು