AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಜಿಲ್ಲಾ ಕಸಾಪ ಚುನಾವಣೆಗೆ ನಿಯಮಬಾಹಿರ ಸ್ಪರ್ಧೆ; ಕೋರ್ಟ್​ನಿಂದ ತಡೆಯಾಜ್ಞೆ

Dharwad News: ಕಸಾಪ ಹಿಂದಿನ ಅಧ್ಯಕ್ಷ ಲಿಂಗರಾಜ ಅಂಗಡಿ ಸ್ಪರ್ಧೆ ಪ್ರಶ್ನಿಸಿ ನಾಗರಾಜ ಕಿರಣಗಿ ರಿಟ್ ಸಲ್ಲಿಸಿದ್ದರು. ಎರಡು ಬಾರಿ ಅಧ್ಯಕ್ಷರಾಗಿದ್ದ ಲಿಂಗರಾಜ ಅಂಗಡಿ, 3ನೇ ಬಾರಿ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಧಾರವಾಡ: ಜಿಲ್ಲಾ ಕಸಾಪ ಚುನಾವಣೆಗೆ ನಿಯಮಬಾಹಿರ ಸ್ಪರ್ಧೆ; ಕೋರ್ಟ್​ನಿಂದ ತಡೆಯಾಜ್ಞೆ
ಧಾರವಾಡ ಹೈಕೋರ್ಟ್‌
TV9 Web
| Edited By: |

Updated on:Oct 27, 2021 | 8:14 PM

Share

ಧಾರವಾಡ: ಇಲ್ಲಿನ ಜಿಲ್ಲಾ ಕಸಾಪ ಚುನಾವಣೆಗೆ ತಡೆಯಾಜ್ಞೆ ವಿಧಿಸಲಾಗಿದೆ. ಧಾರವಾಡ ಹೈಕೋರ್ಟ್‌ನಿಂದ ತಡೆಯಾಜ್ಞೆ ಹಾಕಲಾಗಿದೆ. ನವೆಂಬರ್ 21 ರಂದು ನಡೆಬೇಕಿದ್ದ ಕಸಾಪ ಚುನಾವಣೆ ಸಂಬಂಧ ನಿಯಮಬಾಹಿರ ಸ್ಪರ್ಧೆ ವಿರುದ್ಧ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ನಾಗರಾಜ ಕಿರಣಗಿ ಎಂಬವರು ಧಾರವಾಡ ಹೈಕೋರ್ಟ್​ಗೆ ರಿಟ್ ಸಲ್ಲಿಸಿದ್ದರು. ಅರ್ಜಿದಾರರ ಪರ ಎ.ಆರ್. ಪಾಟೀಲ್ ವಾದ ಮಂಡಿಸಿದ್ದರು.

ಕಸಾಪ ಹಿಂದಿನ ಅಧ್ಯಕ್ಷ ಲಿಂಗರಾಜ ಅಂಗಡಿ ಸ್ಪರ್ಧೆ ಪ್ರಶ್ನಿಸಿ ನಾಗರಾಜ ಕಿರಣಗಿ ರಿಟ್ ಸಲ್ಲಿಸಿದ್ದರು. ಎರಡು ಬಾರಿ ಅಧ್ಯಕ್ಷರಾಗಿದ್ದ ಲಿಂಗರಾಜ ಅಂಗಡಿ, 3ನೇ ಬಾರಿ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ನಿರಂತರ 2 ಬಾರಿ ಸ್ಪರ್ಧಿಸದಂತೆ ಕಸಾಪ ನಿಯಮ ಇದೆ. ಆದರೂ ಲಿಂಗರಾಜ ಅಂಗಡಿ 3ನೇ ಬಾರಿ ಸ್ಪರ್ಧಿಸಿರುವ ಹಿನ್ನೆಲೆ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದ ನಾಗರಾಜ ಕಿರಣಗಿ, ನಾಮಪತ್ರ ತಿರಸ್ಕರಿಸುವಂತೆ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಕ್ರಮ‌ ಕೈಗೊಳ್ಳದ ಹಿನ್ನೆಲೆ ರಿಟ್​ ಅರ್ಜಿ ಸಲ್ಲಿಸಲಾಗಿದೆ. ಇದೀಗ ನ್ಯಾಯಾಲಯ ನಾಗರಾಜ ಕಿರಣಗಿ ಅರ್ಜಿ ಪುರಸ್ಕರಿಸಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ರಿಂದ ತಡೆಯಾಜ್ಞೆ ವಿಧಿಸಲಾಗಿದೆ.

ಇದನ್ನೂ ಓದಿ: ಅಕ್ರಮ ಕಟ್ಟಡ ತೆರವು ವಿಚಾರ: ಬಿಬಿಎಂಪಿ ಕಾರ್ಯವೈಖರಿಗೆ ಹೈಕೋರ್ಟ್​ ಗರಂ

ಇದನ್ನೂ ಓದಿ: ಸರ್ಕಾರಿ ಲಿವರ್ ಕಸಿ ಆಸ್ಪತ್ರೆ ಆರಂಭಿಸಲು ವಿಳಂಬ; ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಹೈಕೋರ್ಟ್

Published On - 7:03 pm, Wed, 27 October 21

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ