AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಜಿಲ್ಲಾ ಕಸಾಪ ಚುನಾವಣೆಗೆ ನಿಯಮಬಾಹಿರ ಸ್ಪರ್ಧೆ; ಕೋರ್ಟ್​ನಿಂದ ತಡೆಯಾಜ್ಞೆ

Dharwad News: ಕಸಾಪ ಹಿಂದಿನ ಅಧ್ಯಕ್ಷ ಲಿಂಗರಾಜ ಅಂಗಡಿ ಸ್ಪರ್ಧೆ ಪ್ರಶ್ನಿಸಿ ನಾಗರಾಜ ಕಿರಣಗಿ ರಿಟ್ ಸಲ್ಲಿಸಿದ್ದರು. ಎರಡು ಬಾರಿ ಅಧ್ಯಕ್ಷರಾಗಿದ್ದ ಲಿಂಗರಾಜ ಅಂಗಡಿ, 3ನೇ ಬಾರಿ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಧಾರವಾಡ: ಜಿಲ್ಲಾ ಕಸಾಪ ಚುನಾವಣೆಗೆ ನಿಯಮಬಾಹಿರ ಸ್ಪರ್ಧೆ; ಕೋರ್ಟ್​ನಿಂದ ತಡೆಯಾಜ್ಞೆ
ಧಾರವಾಡ ಹೈಕೋರ್ಟ್‌
TV9 Web
| Edited By: |

Updated on:Oct 27, 2021 | 8:14 PM

Share

ಧಾರವಾಡ: ಇಲ್ಲಿನ ಜಿಲ್ಲಾ ಕಸಾಪ ಚುನಾವಣೆಗೆ ತಡೆಯಾಜ್ಞೆ ವಿಧಿಸಲಾಗಿದೆ. ಧಾರವಾಡ ಹೈಕೋರ್ಟ್‌ನಿಂದ ತಡೆಯಾಜ್ಞೆ ಹಾಕಲಾಗಿದೆ. ನವೆಂಬರ್ 21 ರಂದು ನಡೆಬೇಕಿದ್ದ ಕಸಾಪ ಚುನಾವಣೆ ಸಂಬಂಧ ನಿಯಮಬಾಹಿರ ಸ್ಪರ್ಧೆ ವಿರುದ್ಧ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ನಾಗರಾಜ ಕಿರಣಗಿ ಎಂಬವರು ಧಾರವಾಡ ಹೈಕೋರ್ಟ್​ಗೆ ರಿಟ್ ಸಲ್ಲಿಸಿದ್ದರು. ಅರ್ಜಿದಾರರ ಪರ ಎ.ಆರ್. ಪಾಟೀಲ್ ವಾದ ಮಂಡಿಸಿದ್ದರು.

ಕಸಾಪ ಹಿಂದಿನ ಅಧ್ಯಕ್ಷ ಲಿಂಗರಾಜ ಅಂಗಡಿ ಸ್ಪರ್ಧೆ ಪ್ರಶ್ನಿಸಿ ನಾಗರಾಜ ಕಿರಣಗಿ ರಿಟ್ ಸಲ್ಲಿಸಿದ್ದರು. ಎರಡು ಬಾರಿ ಅಧ್ಯಕ್ಷರಾಗಿದ್ದ ಲಿಂಗರಾಜ ಅಂಗಡಿ, 3ನೇ ಬಾರಿ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ನಿರಂತರ 2 ಬಾರಿ ಸ್ಪರ್ಧಿಸದಂತೆ ಕಸಾಪ ನಿಯಮ ಇದೆ. ಆದರೂ ಲಿಂಗರಾಜ ಅಂಗಡಿ 3ನೇ ಬಾರಿ ಸ್ಪರ್ಧಿಸಿರುವ ಹಿನ್ನೆಲೆ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದ ನಾಗರಾಜ ಕಿರಣಗಿ, ನಾಮಪತ್ರ ತಿರಸ್ಕರಿಸುವಂತೆ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಕ್ರಮ‌ ಕೈಗೊಳ್ಳದ ಹಿನ್ನೆಲೆ ರಿಟ್​ ಅರ್ಜಿ ಸಲ್ಲಿಸಲಾಗಿದೆ. ಇದೀಗ ನ್ಯಾಯಾಲಯ ನಾಗರಾಜ ಕಿರಣಗಿ ಅರ್ಜಿ ಪುರಸ್ಕರಿಸಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ರಿಂದ ತಡೆಯಾಜ್ಞೆ ವಿಧಿಸಲಾಗಿದೆ.

ಇದನ್ನೂ ಓದಿ: ಅಕ್ರಮ ಕಟ್ಟಡ ತೆರವು ವಿಚಾರ: ಬಿಬಿಎಂಪಿ ಕಾರ್ಯವೈಖರಿಗೆ ಹೈಕೋರ್ಟ್​ ಗರಂ

ಇದನ್ನೂ ಓದಿ: ಸರ್ಕಾರಿ ಲಿವರ್ ಕಸಿ ಆಸ್ಪತ್ರೆ ಆರಂಭಿಸಲು ವಿಳಂಬ; ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಹೈಕೋರ್ಟ್

Published On - 7:03 pm, Wed, 27 October 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್