AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಚ್ಚು ನಾಯಿ ಕಚ್ಚಿರುವ ವಿಚಾರ ಮುಚ್ಚಿಟ್ಟ ಅಜ್ಜಿ -ಮೊಮ್ಮಗಳು ಬಲಿ, ಮದುವೆ ಮನೆಯಲ್ಲಿ ಚಿಕನ್ ಪೀಸ್ ಗಾಗಿ ಜಗಳ -ಒಬ್ಬನ ಸಾವು

ಸೊಸೆ ಮೇಲಿನ ಕೋಪದಿಂದ ಅತ್ತೆ ಜಯಮ್ಮ ಇಂತಹ ಅನಾಹುತಕಾರಿ ವಿಚಾರ ಹೇಳಿಲ್ಲ ಎನ್ನಲಾಗಿದೆ. ರಕ್ತ ವಾಂತಿ ಮಾಡಿಕೊಂಡು ನಿನ್ನೆ ರಾತ್ರಿ ತ್ರಿಷಾ ಅಸುನೀಗಿದ್ದಾಳೆ. ಪುಟ್ಟರಾಜು ಜೊತೆಗೆ ಎರಡು ವರ್ಷದ ಹಿಂದೆ ಚಿಕ್ಕಮ್ಮನ ವಿವಾಹವಾಗಿತ್ತು. ಆದರೆ ಮಗ ಚಿಕ್ಕಮ್ಮಳನ್ನು ವಿವಾಹವಾಗಿದ್ದು ತಾಯಿ ಜಯಮ್ಮಗೆ ಅಸಮಾಧಾನ ತಂದಿತ್ತು.

ಹುಚ್ಚು ನಾಯಿ ಕಚ್ಚಿರುವ ವಿಚಾರ ಮುಚ್ಚಿಟ್ಟ ಅಜ್ಜಿ -ಮೊಮ್ಮಗಳು ಬಲಿ, ಮದುವೆ ಮನೆಯಲ್ಲಿ ಚಿಕನ್ ಪೀಸ್ ಗಾಗಿ ಜಗಳ -ಒಬ್ಬನ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 09, 2022 | 6:22 PM

ತುಮಕೂರು/ಧಾರವಾಡ: ಎರಡು ವರ್ಷದ ಮೊಮ್ಮಗಳಿಗೆ ಹುಚ್ಚು ನಾಯಿ ಕಚ್ಚಿರುವ ವಿಚಾರವನ್ನು ಅಜ್ಜಿ‌ ಮುಚ್ಚಿಟ್ಟ ಕಾರಣ ಆ ಪುಟ್ಟ ಮಗು ಸಾವಿಗೀಡಾಗಿದ್ದಾಳೆ. ಇಷ್ಟಕ್ಕೂ ಯಾಕಪ್ಪಾ ಅಜ್ಜಿ ತನ್ನದೇ ಮಗುವಿನ ಬಗ್ಗೆ ಹೀಗೆ ಅಸಡ್ಡೆ ತೋರಿದಳು ಅಂದರೆ ಅದಕ್ಕೆ ಕಾರಣವಾಗಿರುವುದು ಸೊಸೆಯ ಮೇಲಿನ ಮುನಿಸು! ಹೌದು ಸೊಸೆ ಮೇಲೆ ಅತ್ತೆಗೆ ಇದ್ದ ಕೋಪಕ್ಕೆ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ.

ಹುಚ್ಚು ನಾಯಿ ಕಡಿದು ಚಿಕಿತ್ಸೆ ಫಲಕಾರಿಯಾಗದೆ 2 ವರ್ಷದ ಮಗು ತ್ರಿಷಾ ಮೃತಪಟ್ಟಿದ್ದಾಳೆ. ಹುಚ್ಚು ನಾಯಿ ಕಚ್ಚಿ 1 ತಿಂಗಳು 10 ದಿನದ ನಂತರ ಮಗು ಕೊನೆಯುಸಿರೆಳೆದಿದ್ದಾಳೆ. ಮಗು ತ್ರಿಷಾ, ಅಜ್ಜಿಯ ಜೊತೆಗೆ ಹೊಲದ ಬಳಿ ಹೋಗಿದ್ದಾಗ ಈ ಅನಾಹಿತ ನಡೆದಿತ್ತು. ಹಸು ಮೇಯಿಸುವ ಸಂದರ್ಭದಲ್ಲಿ ಹುಚ್ಚು ನಾಯಿ ಹಸು ಹಾಗೂ ಮಗುವಿಗೆ ಇಬ್ಬರಿಗೂ ಕಚ್ಚಿತ್ತು. ಆದರೆ ಹುಚ್ಚು ನಾಯಿ ಕಚ್ಚಿರುವ ವಿಚಾರವನ್ನು ಅಜ್ಜಿ‌ ಜಯಮ್ಮ ಮುಚ್ಚಿಟ್ಟಿದ್ದಾಳೆ.

ಸೊಸೆ ಮೇಲಿನ ಕೋಪದಿಂದ ಅತ್ತೆ ಜಯಮ್ಮ ಇಂತಹ ಅನಾಹುತಕಾರಿ ವಿಚಾರ ಹೇಳಿಲ್ಲ ಎನ್ನಲಾಗಿದೆ. ರಕ್ತ ವಾಂತಿ ಮಾಡಿಕೊಂಡು ನಿನ್ನೆ ರಾತ್ರಿ ತ್ರಿಷಾ ಅಸುನೀಗಿದ್ದಾಳೆ. ಪುಟ್ಟರಾಜು ಜೊತೆಗೆ ಎರಡು ವರ್ಷದ ಹಿಂದೆ ಚಿಕ್ಕಮ್ಮನ ವಿವಾಹವಾಗಿತ್ತು. ಆದರೆ ಮಗ ಚಿಕ್ಕಮ್ಮಳನ್ನು ವಿವಾಹವಾಗಿದ್ದು ತಾಯಿ ಜಯಮ್ಮಗೆ ಅಸಮಾಧಾನ ತಂದಿತ್ತು.

ಮದುವೆ ಮನೆಯಲ್ಲಿ ಚಿಕನ್ ಪೀಸ್ ಗಾಗಿ ಇಬ್ಬರ ಮಧ್ಯೆ ಜಗಳ, ಸಾವು: ಇನ್ನು ಅತ್ತ ಧಾರವಾಡದಲ್ಲಿ ಮದುವೆ ಮನೆಯಲ್ಲಿ ಚಿಕನ್ ಪೀಸ್ ಗಾಗಿ ಇಬ್ಬರ ಮಧ್ಯೆ ಜಗಳವಾಗಿದ್ದು ಒಬ್ಬ ಇಹಲೋಕ ತ್ಯಜಿಸಿದ್ದಾನೆ. ಧಾರವಾಡದ ಪೆಂಡಾರಗಲ್ಲಿ ಬಡಾವಣೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮದುವೆ ಮನೆಯಲ್ಲಿ ಇಬ್ಬರ ನಡುವೆ ಜಗಳ ಶುರುವಾಗಿದೆ. ಚಿಕನ್ ಪೀಸ್ ಗಾಗಿ ಕಾದಾಡಿದ ಸಾದಿಕ್ ಮತ್ತು ರಿಜ್ವಾನ್ ವಿಕೋಪಕ್ಕೆ ಹೋಗಿದ್ದಾರೆ. ಇಬ್ಬರ ಜಗಳದಲ್ಲಿ ಸಾದಿಕ್ ಬಿಟ್ನಾಳ (30) ಎಂಬುವವರು ಸಾವಿಗೀಡಾಗಿದ್ದಾರೆ. ಮೃತ ಸಾದಿಕ್, ಧಾರವಾಡದ ಲಕ್ಷ್ಮಿ ಸಿಂಗನಕೇರಿ ನಿವಾಸಿ.

ಚಿಕನ್ ಪೀಸ್ ಗಾಗಿ ಇಬ್ಬರ ಮಧ್ಯೆ ಜಗಳವಾದಾಗ ಸಾದಿಕ್ ನನ್ನು ರಿಜ್ವಾನ್ ತಳ್ಳಿದ್ದಾನೆ. ಕೆಳಗಡೆ ಬಿದ್ದ ಸಾದಿಕ್‌ ತಲೆಗೆ ತೀವ್ರವಾಗು ಪೆಟ್ಟು ಬಿದ್ದಿದೆ. ದೂರು ನೀಡಲು ಸಾದಿಕ್ ನ ಮನೆಯವರು ಮೊದಲು ಒಪ್ಪಲಿಲ್ಲ. ಆದರೆ ಕೊನೆಗೆ ಧಾರವಾಡ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಆರೋಪಿ ರಿಜ್ವಾನನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ನನ್ನ ವಾಸ್ತವ್ಯ ಏನಿದ್ರೂ ನನ್ನ ಜಮೀನಿನಲ್ಲಿ, ಇನ್ಮುಂದೆ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಹೋಗುವುದಿಲ್ಲ ಎಂದ ಹೆಚ್ಡಿ ಕುಮಾರಸ್ವಾಮಿ

ಇದನ್ನೂ ಓದಿ: ಪಾರ್ಟಿ ಮಾಡಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ, ಕೆರೆಯಲ್ಲಿ ತೆಪ್ಪ ಮುಗುಚಿ ಮೂವರು ಯುವಕರು ಜಲಸಮಾಧಿ

Published On - 6:19 pm, Wed, 9 March 22

1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ