AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಗೋಳು ಕೇಳುವರಾರು! ಕೈ ಕೊಟ್ಟ ಮಳೆರಾಯ; ನೀರಿಲ್ಲದೇ ಒಣಗಿದ ಬೆಳೆಗಳು

 ಈ ಬಾರಿ ರಾಜ್ಯದಲ್ಲಿ ರೈತರ ಬಾಳು ಚಿಂತಾಜನಕವಾದಂತಾಗಿದೆ. ಇದಕ್ಕೆ ಕಾರಣ ವರುಣ ದೇವ ತೋರಿಸಿದ ಮುನಿಸು. ಮುಂಗಾರು, ಹಿಂಗಾರು ಎರಡೂ ಮಳೆ ಈ ಬಾರಿ ಕೈಕೊಟ್ಟಿವೆ. ಇದರಿಂದಾಗಿ ರಾಜ್ಯದ ರೈತರ ಪಾಡು ಹೇಳತೀರದಾಗಿದೆ. ಇದಕ್ಕೆ ಧಾರವಾಡ ಜಿಲ್ಲೆ ಹೊರತಾಗಿಲ್ಲ. ಮಳೆ ಬರುತ್ತೆ ಎಂದು ಕಾಯುತ್ತಾ ಕೂತಿದ್ದ ರೈತರಿಗೆ ಇದೀಗ ನಿರಾಸೆಯಾಗಿ, ಒಣಗಿ ಹೋಗುತ್ತಿರುವ ಬೆಳೆಗಳನ್ನು ಕತ್ತರಿಸಿ ಹಾಕುತ್ತಿದ್ದಾರೆ.

ರೈತರ ಗೋಳು ಕೇಳುವರಾರು! ಕೈ ಕೊಟ್ಟ ಮಳೆರಾಯ; ನೀರಿಲ್ಲದೇ ಒಣಗಿದ ಬೆಳೆಗಳು
ನವಲಗುಂದ ಶಾಸಕ ಎನ್​ಎಚ್ ಕೋನರೆಡ್ಡಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 20, 2023 | 3:47 PM

Share

ಧಾರವಾಡ, ಅ.20: ಜಿಲ್ಲೆಯ ನವಲಗುಂದ ತಾಲೂಕಿನ ವಿವಿಧ ಭಾಗದಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಾರೆ. ಈ ಪ್ರದೇಶದಲ್ಲಿ ಮಳೆಯಾಶ್ರಿತ ಹಾಗೂ ನೀರಾವರಿ ಭೂಮಿ(Irrigated land) ಇದೆ. ಮಳೆಯಾಶ್ರಿತ ಭೂಮಿಗೆ ಮಳೆ ಬಾರದೇ ಇದ್ದಾಗ ಮಲಪ್ರಭಾ(Malaprabha) ಬಲದಂಡೆ ಕಾಲುವೆಯ ನೀರನ್ನು ಬಳಸಿ ರೈತರು ಕೃಷಿ ಮಾಡುತ್ತಾರೆ. ಆದರೆ, ಈ ಬಾರಿ ಮುಂಗಾರು ವಿಫಲವಾಗಿ, ಇದೀಗ ಹಿಂಗಾರು ಕೂಡ ಕೈಕೊಟ್ಟಿದೆ. ಇದರಿಂದಾಗಿ ಮೆಕ್ಕೆಜೋಳದ ಬೆಳೆ ತೆನೆ ಬಿಡುವ ಹೊತ್ತಿನಲ್ಲಿ ಒಣಗಿ ಹೋಗುತ್ತಿದೆ. ಇದೇ ಕಾರಣಕ್ಕೆ ರೈತರು ಇದೀಗ ಬೆಳೆಯನ್ನು ಕತ್ತರಿಸಿ ಹಾಕುತ್ತಿದ್ದಾರೆ.

ಇದುವರೆಗೂ ರೈತರು ಮಳೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ, ಅವರ ನಿರೀಕ್ಷೆ ಸುಳ್ಳಾಗಿದೆ. ಇನ್ನೇನು ಮೆಕ್ಕೆಜೋಳದ ತೆನೆ ಒಡೆಯಲು ಶುರುವಾಗುತ್ತೆ ಎನ್ನುವ ಹೊತ್ತಿಗೆ ನೀರಿನ ಕೊರತೆ ಹೆಚ್ಚಾಗಿ, ಬೆಳೆ ಒಣಗುತ್ತಿದೆ. ಮಲಪ್ರಭಾ ಕಾಲುವೆಯ ನೀರು ಕೂಡ ಬರುತ್ತಿಲ್ಲ. ಏಕೆಂದರೆ ನವಿಲು ತೀರ್ಥ ಡ್ಯಾಂನಲ್ಲಿ ನೀರಿನ ಕೊರತೆ ಇರುವುದರಿಂದ ಕಾಲುವೆಗೆ ನೀರು ಹರಿಸಲಾಗುತ್ತಿಲ್ಲ. ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಬೆಳೆಯನ್ನು ಹಾಗೆಯೇ ಬಿಟ್ಟರೆ ಅದೆಲ್ಲ ಒಣಗಿ ಹೋಗಿ, ಜಾನುವಾರುಗಳು ಇದನ್ನು ತಿನ್ನುವುದು ಇಲ್ಲ. ಇದೇ ಕಾರಣಕ್ಕೆ ಈ ಬೆಳೆಯನ್ನು ಈಗಲೇ ಕಟಾವು ಮಾಡಿ, ಜಾನುವಾರುಗಳಿಗೆ ಹಾಕಿದರೆ ಅವುಗಳಾದರೂ ತಿನ್ನುತ್ತವೆ ಅನ್ನೋದು ರೈತರ ಲೆಕ್ಕಾಚಾರ.

ಇದನ್ನೂ ಓದಿ:ಬೆಳಗಾವಿ: ಭೀಕರ ಬರ ಇದ್ದರೂ ಶಾಸಕರ ನಿರ್ಲಕ್ಷ್ಯ: ರೈತರು ಆಕ್ರೋಶ

ಹೀಗಾಗಿ ಇದೀಗ ಒಣಗಿ ಹೋಗುತ್ತಿರುವ ಬೆಳೆಯನ್ನು ಕತ್ತರಿಸಿ, ಮನೆಗೆ ಟ್ರ್ಯಾಕ್ಟರ್, ಚಕ್ಕಡಿಗಳ ಮೂಲಕ ತೆಗೆದುಕೊಂಡು ಹೋಗುತ್ತಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ನವಲಗುಂದ ಶಾಸಕ ಎನ್​ಎಚ್ ಕೋನರೆಡ್ಡಿ, ‘ಇನ್ನೂ ಕೂಡ ಮಳೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿ ಇದೆ. ಅವರು ಕೂಡ ದೇವರ ಮೇಲೆ ಭಾರ ಹಾಕಿರೋದಾಗಿ ಹೇಳುತ್ತಾರೆ. ಇದೀಗ ರೈತರಿಗೆ ಮತ್ತೊಂದು ಸಮಸ್ಯೆ ಏನೆಂದರೆ, ಈಗಲೇ ಈ ಬೆಳೆಯನ್ನು ಮೇವಾಗಿ ಜಾನುವಾರುಗಳಿಗೆ ಹಾಕಿಬಿಟ್ಟರೆ, ಮುಂಬರುವ ಭೀಕರ ಬೇಸಿಗೆಗೆ ಪ್ರಾಣಿಗಳ ಗತಿ ಏನು ಎನ್ನುವುದು ಚಿಂತೆಯಾಗಿದೆ. ಏಕೆಂದರೆ ಈ ಬೆಳೆ ಬಂದು, ಬಳಿಕ ಇದನ್ನೇ ಬೇಸಿಗೆ ಸಮಯದಲ್ಲಿ ಜಾನುವಾರುಗಳಿಗೆ ಮೇವಾಗಿ ಬಳಸಲಾಗುತ್ತಿತ್ತು. ಆದರೆ, ಈಗಲೇ ಎಲ್ಲ ಬಳಕೆಯಾದರೆ ಮುಂಬರುವ ದಿನಗಳಲ್ಲಿ ಜಾನುವಾರುಗಳ ಹೊಟ್ಟೆಯ ಗತಿ ಏನು? ಎಂಬ ಪ್ರಶ್ನೆ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Fri, 20 October 23

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ