AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬ: ನೈಋತ್ಯ ರೈಲ್ವೆಯಿಂದ ಈ ಊರುಗಳಿಗೆ ವಿಶೇಷ ರೈಲು!

Deepavali Special Train: ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆಗಳನ್ನು ಘೋಷಿಸಿದೆ. ಅಕ್ಟೋಬರ್ 17, 18, 19 ರಂದು ಹುಬ್ಬಳ್ಳಿ–ಮಂಗಳೂರು, ಯಶವಂತಪುರ–ಮಂಗಳೂರು ಮತ್ತು ಬೆಳಗಾವಿ–ಬೆಂಗಳೂರು ಮಾರ್ಗಗಳಲ್ಲಿ ಈ ವಿಶೇಷ ರೈಲುಗಳು ಸಂಚರಿಸಲಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ದೀಪಾವಳಿ ಹಬ್ಬ: ನೈಋತ್ಯ ರೈಲ್ವೆಯಿಂದ ಈ ಊರುಗಳಿಗೆ ವಿಶೇಷ ರೈಲು!
ಪ್ರಾತಿನಿಧಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 13, 2025 | 10:06 PM

Share

ಹುಬ್ಬಳ್ಳಿ, ಅಕ್ಟೋಬರ್​​ 13: ದೀಪಾವಳಿ ಹಬ್ಬದ (deepavali festival) ಪ್ರಯುಕ್ತ ಪ್ರಯಾಣಿಕರ ಅನುಕೂಲ ಹಾಗೂ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆ ವಿಶೇಷ ರೈಲು (Special Train) ಸೇವೆಯನ್ನು ಘೋಷಿಸಿದೆ. ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ, ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಹಾಗೂ ಬೆಳಗಾವಿ-ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.

ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ (ತಲಾ 1 ಟ್ರಿಪ್)

ರೈಲು ಸಂಖ್ಯೆ (07353) ಎಸ್ಎಸ್ಎಸ್ ಹುಬ್ಬಳ್ಳಿ ಟು ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್​ಪ್ರೆಸ್ ರೈಲು ಅ. 17 ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಂದರೆ ಅ. 18ರಂದು ಬೆಳಿಗ್ಗೆ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ.

ನೈಋತ್ಯ ರೈಲ್ವೆ ಟ್ವೀಟ್​

ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಇದನ್ನೂ ಓದಿ: Deepavali Special Train: ಪ್ರಯಾಣಿಕರಿಗೆ ಸಿಹಿ ಸುದ್ದಿ; ಬೆಂಗಳೂರಿನಿಂದ ತಾಳಗುಪ್ಪ, ಬೆಳಗಾವಿಗೆ ದೀಪಾವಳಿ ವಿಶೇಷ ರೈಲು

ರೈಲು ಸಂಖ್ಯೆ (07354) ಮಂಗಳೂರು ಜಂಕ್ಷನ್ ಟು ಯಶವಂತಪುರ ವಿಶೇಷ ಎಕ್ಸ್​ಪ್ರೆಸ್ ರೈಲು ಅ.18 ರಂದು ಮಧ್ಯಾಹ್ನ 02:35 ಗಂಟೆಗೆ ಮಂಗಳೂರು ಜಂಕ್ಷನ್​​ನಿಂದ ಹೊರಟು, ಅದೇ ದಿನ ರಾತ್ರಿ 11:15 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲು ಸಂಖ್ಯೆ 06229/06230 ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ (ತಲಾ 1 ಟ್ರಿಪ್)

ರೈಲು ಸಂಖ್ಯೆ (06229) ಯಶವಂತಪುರ ಟು ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್​ಪ್ರೆಸ್ ಅ. 19ರಂದು 12:15 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ರೈಲು ಸಂಖ್ಯೆ (06230) ಮಂಗಳೂರು ಜಂಕ್ಷನ್ ಟು ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್​ಪ್ರೆಸ್ ರೈಲು ಅ. 19 ರಂದು 02:35 ಗಂಟೆಗೆ ಮಂಗಳೂರು ಜಂಕ್ಷನ್​​ನಿಂದ ಹೊರಟು, ಮರುದಿನ 12:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ಎರಡೂ ವಿಶೇಷ ರೈಲುಗಳು (07353/07354 ಮತ್ತು 06229/06230) 20 ಬೋಗಿಗಳನ್ನು ಒಳಗೊಂಡಿರುತ್ತವೆ. ಅಂದರೆ 01 ಫಸ್ಟ್ ಕಮ್ ಸೆಕೆಂಡ್ ಎಸಿ, 01 ಎಸಿ 2-ಟೈರ್, 02 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್, ಡಿ ಬೋಗಿಗಳು ಒಳಗೊಂಡಿರುತ್ತವೆ.

ರೈಲು ಸಂಖ್ಯೆ 06507/06508 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ (ತಲಾ 1 ಟ್ರಿಪ್)

ರೈಲು ಸಂಖ್ಯೆ (06507) ಬೆಳಗಾವಿ ಟು ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು ಅ. 18 ರಂದು 8 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 07:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಅ. 18 ರಂದು 09 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅ. 19 ರಂದು 08:35 ಗಂಟೆಗೆ ಬೆಳಗಾವಿ ತಲುಪಲಿದೆ.

ಇದನ್ನೂ ಓದಿ: ಸಾಲು ಸಾಲು ಹಬ್ಬಗಳ ಹಿನ್ನಲೆ ಬೆಂಗಳೂರಿನಿಂದ ಈ ಸ್ಥಳಗಳಿಗೆ ವಿಶೇಷ ರೈಲು

ಮಾರ್ಗಮಧ್ಯೆ, ಈ ರೈಲು ಎರಡೂ ದಿಕ್ಕುಗಳಲ್ಲಿ ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣವರ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿತ್ತದೆ. ಈ ರೈಲು 01 ಎಸಿ 2-ಟೈರ್, 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್, ಡಿ ಬೋಗಿ ಸೇರಿ ಒಟ್ಟು 19 ಬೋಗಿಗಳನ್ನು ಒಳಗೊಂಡಿರುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್