AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಭಾಷಣ; ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು

ತೈಲದರ ಏರಿಕೆ ಖಂಡಿಸಿ ನಿನ್ನೆ(ಜೂ.17) ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು  ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಈ ಮೂಲಕ ಸಿಎಂ ಗೆ ಅಗೌರವ ತೋರಿದ್ದಾರೆ ಎಂದು ಸಿ.ಟಿ.ರವಿ(CT Ravi) ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಆಗಿದೆ.

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಭಾಷಣ; ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು
ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು
ಶಿವಕುಮಾರ್ ಪತ್ತಾರ್
| Edited By: |

Updated on: Jun 18, 2024 | 3:29 PM

Share

ಹುಬ್ಬಳ್ಳಿ, ಜೂ.18: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಅವಹೇಳನಕಾರಿ‌ ಭಾಷಣ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ(CT Ravi) ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಆಗಿದೆ. ಹೌದು, ತೈಲದರ ಏರಿಕೆ ಖಂಡಿಸಿ ನಿನ್ನೆ(ಜೂ.17) ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು  ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಅಗೌರವ ತೋರಿದ್ದಾರೆ ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅವರು ಮಾನನಷ್ಟ ಮೊಕದ್ದಮೆ ಹೂಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತೈಲ ಬೆಲೆ ಏರಿಕೆ ವಿರುದ್ದ ಪ್ರತಿಭಟಿಸಿದ್ದ ಬಿಜೆಪಿ

ಹೌದು, ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ಬೆಂಗಳೂರಿನ ಫ್ರೀಡಂ ಪಾರ್ಕ್‌​ನಲ್ಲಿ ಬಿಜೆಪಿ ನಾಯಕರು ಹೋರಾಟ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಸಿ‌.ಟಿ.ರವಿ, ‘ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡೋದು. ಭಂಡತನದ ಸಮರ್ಥನೆ ಬಿಟ್ಟು ಯಾಕೆ ಸೆಸ್ ಹಾಕೀರೋದು ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದರು.

ಇದನ್ನೂ ಓದಿ:ಪೆಟ್ರೋಲ್, ಡೀಸೆಲ್​​​​ ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸರ್ಕಾರದ ವಿರುದ್ಧ ಸಿಟಿ ರವಿ ಪ್ರತಿಭಟನೆ

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಿ.ಟಿ ರವಿ, ಅಶ್ವತ್ಥನಾರಾಯಣ್ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​