AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಭಾಷಣ; ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು

ತೈಲದರ ಏರಿಕೆ ಖಂಡಿಸಿ ನಿನ್ನೆ(ಜೂ.17) ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು  ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಈ ಮೂಲಕ ಸಿಎಂ ಗೆ ಅಗೌರವ ತೋರಿದ್ದಾರೆ ಎಂದು ಸಿ.ಟಿ.ರವಿ(CT Ravi) ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಆಗಿದೆ.

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಭಾಷಣ; ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು
ಸಿಟಿ ರವಿ ವಿರುದ್ಧ ದಾಖಲಾಯ್ತು ದೂರು
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 18, 2024 | 3:29 PM

Share

ಹುಬ್ಬಳ್ಳಿ, ಜೂ.18: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಅವಹೇಳನಕಾರಿ‌ ಭಾಷಣ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ(CT Ravi) ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಆಗಿದೆ. ಹೌದು, ತೈಲದರ ಏರಿಕೆ ಖಂಡಿಸಿ ನಿನ್ನೆ(ಜೂ.17) ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು  ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಅಗೌರವ ತೋರಿದ್ದಾರೆ ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅವರು ಮಾನನಷ್ಟ ಮೊಕದ್ದಮೆ ಹೂಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತೈಲ ಬೆಲೆ ಏರಿಕೆ ವಿರುದ್ದ ಪ್ರತಿಭಟಿಸಿದ್ದ ಬಿಜೆಪಿ

ಹೌದು, ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ಬೆಂಗಳೂರಿನ ಫ್ರೀಡಂ ಪಾರ್ಕ್‌​ನಲ್ಲಿ ಬಿಜೆಪಿ ನಾಯಕರು ಹೋರಾಟ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಸಿ‌.ಟಿ.ರವಿ, ‘ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡೋದು. ಭಂಡತನದ ಸಮರ್ಥನೆ ಬಿಟ್ಟು ಯಾಕೆ ಸೆಸ್ ಹಾಕೀರೋದು ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದರು.

ಇದನ್ನೂ ಓದಿ:ಪೆಟ್ರೋಲ್, ಡೀಸೆಲ್​​​​ ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸರ್ಕಾರದ ವಿರುದ್ಧ ಸಿಟಿ ರವಿ ಪ್ರತಿಭಟನೆ

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಿ.ಟಿ ರವಿ, ಅಶ್ವತ್ಥನಾರಾಯಣ್ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ