AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರ ಪಾಲಿಗೆ ದುಬಾರಿಯಾದ ಧಾರವಾಡ ಜಿಲ್ಲಾ ಆಸ್ಪತ್ರೆ: ವೈದ್ಯಕೀಯ ಸೇವೆ ದರ ಏಕಾಏಕಿ ಏರಿಕೆ

ಕಳೆದ ಹತ್ತು ವರ್ಷಗಳಿಂದ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ದರ ಏರಿಕೆ ಮಾಡಿರಲಿಲ್ಲ. ಹುಬ್ಬಳ್ಳಿ ಕಿಮ್ಸ್ ದರಕ್ಕೆ ಹೋಲಿಕೆ ಮಾಡಿ ಈ ದರ ಏರಿಕೆ ಮಾಡಲಾಗಿದೆ. ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೋಲಿಸಿದರೆ, ಇದು ತೀರಾ ಕಡಿಮೆ ಎಂದು ದರ ಏರಿಕೆಯನ್ನು ಜಿಲ್ಲಾಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಬಡವರ ಪಾಲಿಗೆ ದುಬಾರಿಯಾದ ಧಾರವಾಡ ಜಿಲ್ಲಾ ಆಸ್ಪತ್ರೆ: ವೈದ್ಯಕೀಯ ಸೇವೆ ದರ ಏಕಾಏಕಿ ಏರಿಕೆ
ವೈದ್ಯಕೀಯ ಸೇವಾ ದರ ಹೆಚ್ಚಳ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಯಿತು.
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Nov 29, 2023 | 7:30 PM

Share

ಧಾರವಾಡ, ನವೆಂಬರ್ 29: ಧಾರವಾಡದ ಜಿಲ್ಲಾ ಆಸ್ಪತ್ರೆ (Dharawad District Hospital) ಈಗ ಬಡವರ ಪಾಲಿಗೆ ದುಬಾರಿಯಾಗಿ ಹೋಗಿದೆ. ಏಕೆಂದರೆ ಬಿಪಿಎಲ್ ಕಾರ್ಡ್​​ದಾರರೂ ಕೂಡ ಶೇ 50ರಷ್ಟು ಹಣ ನೀಡಿ ಚಿಕಿತ್ಸೆ ಪಡೆಯಬೇಕು ಎಂಬುದಾಗಿ ಆದೇಶ ಹೊರಡಿಸಲಾಗಿದ್ದು, ಹಿಂದಿನ ದರಗಳನ್ನು ಏಕಾಏಕಿ ಏರಿಕೆ (Service Charges Hike) ಮಾಡಲಾಗಿದೆ. ಧಾರವಾಡ ಜಿಲ್ಲಾ ಆಸ್ಪತ್ರೆ ಕೇವಲ ಜಿಲ್ಲೆಗೆ ಮಾತ್ರವಲ್ಲ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಯ ಕೆಲವು ತಾಲೂಕುಗಳ ಬಡವರಿಗೂ ಸಹ ಜೀವ ಸಂಜೀವಿನಿಯಾಗಿದೆ. ಆದರೆ ಇಂಥ ಆಸ್ಪತ್ರೆಯಿಂದ ಬಡವರು ದೂರ ಆಗುವಂಥ ಪರಿಸ್ಥಿತಿ ಬಂದಿದೆ. ಏಕೆಂದರೆ ಇಲ್ಲಿರೋ ಇಲ್ಲಿ ವೈದ್ಯಕೀಯ ಸೇವೆಯ ಎಲ್ಲ ದರಗಳನ್ನು ಏಕಾಏಕಿಯಾಗಿ ಏರಿಕೆ ಮಾಡಲಾಗಿದೆ. ಈ ಹಿಂದೆ ಇದ್ದ ಒಪಿಡಿ ನೋಂದಣಿ ಶುಲ್ಕವನ್ನು 10 ರೂಪಾಯಿಯಿಂದ 20 ರೂಪಾಯಿಗೆ ಏರಿಸಲಾಗಿದ್ದರೆ, ಅದರ ಜೊತೆಗೆ ಎಲ್ಲ ಪರೀಕ್ಷೆಗಳ ದರವನ್ನೂ ಎರಡುಪಟ್ಟು ಮಾಡಿದ್ದಾರೆ.

ಈ ಹಿಂದೆ ಬಿಪಿಎಲ್ ಕಾರ್ಡ್​​ದಾರರಿಗೆ ಇಲ್ಲಿ ನೋಂದಣಿ ಉಚಿತವಾಗಿತ್ತು. ಆದರೆ ಈಗ ಬಿಪಿಎಲ್ ಕಾರ್ಡ್​​ದಾರರೂ ಸಹ ನೋಂದಣಿ ಸೇರಿದಂತೆ ಎಲ್ಲ ಪರೀಕ್ಷೆಗಳಿಗೂ ಶೇ 50ರಷ್ಟು ಹಣ ಕೊಡಬೇಕಿದೆ. ಹೀಗಾಗಿ ಇದು ದುಬಾರಿ ಆಸ್ಪತ್ರೆ ಆಗಿ ಬದಲಾಗಿದೆ. ಇಲ್ಲಿ ಬರೋರೆಲ್ಲ ಬಡವರು. ಬಡವರಿಂದ ಹೀಗೆ ಹಣ ಸುಲಿಗೆ ಮಾಡೋದು ಎಷ್ಟರಮಟ್ಟಿಗೆ ಸರಿ ಅನ್ನೋ ಆಕ್ರೋಶ ಜನರಿಂದ ವ್ಯಕ್ತವಾಗುತ್ತಿದೆ.

ಹೀಗೆ ದರಗಳನ್ನು ಹೆಚ್ಚಳ ಮಾಡಲಾಗಿದ್ದಕ್ಕೆ ವಿರೋಧ ವ್ಯಕ್ತವಾಗುತ್ತಿರೋ ಹಿನ್ನೆಲೆಯಲ್ಲಿಯೇ ಇದನ್ನು ಖಂಡಿಸಿ ಹೋರಾಟಗಳು ಕೂಡ ಆರಂಭವಾಗಿವೆ. ಈಗ ಮೊದಲೇ ಬರಗಾಲ ಇದೆ. ಇಂಥ ಬರಗಾಲದ ಸಮಯದಲ್ಲಿಯೇ ದರ ಏರಿಕೆ ಮಾಡಿದ್ದು ಎಷ್ಟು ಸರಿ ಅನ್ನೋ ಆಕ್ರೋಶ ವ್ಯಕ್ತವಾಗಿದೆ. ದರ ಏರಿಕೆಯನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅನೇಕ ಹೋರಾಟಗಳು ಶುರುವಾಗಿವೆ. ಒಂದು ಕಡೆ ಸರಕಾರ ಉಚಿತ ಯೋಜನೆಗಳನ್ನು ಗ್ಯಾರಂಟಿ ಹೆಸರಿನಲ್ಲಿ ನೀಡುತ್ತಿದ್ದರೆ, ಅದೇ ಸರಕಾರ ಮತ್ತೊಂಡು ಕಡೆಯಿಂದ ಬಡವರಿಂದ ಹಣವನ್ನು ಕಿತ್ತುಕೊಳ್ಳುತ್ತಿದೆ ಅನ್ನೋ ಆಕ್ರೋಶವೂ ವ್ಯಕ್ತವಾಗುತ್ತಿದೆ.

ದರ ಏರಿಕೆಯನ್ನು ಜಿಲ್ಲಾಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ದರ ಏರಿಕೆ ಮಾಡಿರಲಿಲ್ಲ. ಹುಬ್ಬಳ್ಳಿ ಕಿಮ್ಸ್ ದರಕ್ಕೆ ಹೋಲಿಕೆ ಮಾಡಿ ಈ ದರ ಏರಿಕೆ ಮಾಡಲಾಗಿದೆ. ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೋಲಿಸಿದರೆ, ಇದು ತೀರಾ ಕಡಿಮೆ. ಈ ಹಣವನ್ನು ಇದೇ ಆಸ್ಪತ್ರೆಯ ಸುಧಾರಣೆಗೆ ವಿನಿಯೋಗ ಮಾಡುತ್ತೇವೆ ಎಂದು ಹೇಳುತ್ತಾರೆ.

ಇದನ್ನೂ ಓದಿ: ಕಾಶಿಯಾತ್ರೆ ಯೋಜನೆಯಡಿ ಏಕಕಾಲಕ್ಕೆ 400 ಭಕ್ತಾಧಿಗಳಿಂದ ತೀರ್ಥಯಾತ್ರೆ: ದಿವ್ಯ ದರ್ಶನ ಸಿಗಲಿ ಎಂದು ಶುಭ ಹಾರೈಸಿದ ಪ್ರಲ್ಹಾದ ಜೋಶಿ

ಸದ್ಯದ ಗ್ಯಾರಂಟಿ ಯೋಜನೆಗಳ ಕಾರಣಕ್ಕೆ ಸರ್ಕಾರದ ಬಳಿ ಸರ್ಕಾರಿ ಆಸ್ಪತ್ರೆಗಳಿಗೆ ಕೊಡುವುದಕ್ಕೂ ಅನುದಾನ ಇಲ್ಲದೇ ಇರೋ ಕಾರಣಕ್ಕೆ ಹೀಗೆ ದರ ಏರಿಕೆ ಮಾಡಿ, ಜನರಿಂದಲೇ ಹಣ ಪಡೆದು ಜನಸಾಮಾನ್ಯರ ಆಸ್ಪತ್ರೆ ನಡೆಸೋಕ್ಕೆ ಮುಂದಾದ್ರಾ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಜನರ ಆಕ್ರೋಶದ ಹಿನ್ನೆಲೆಯಲ್ಲಿ ಹೊಸ ದರ ಪರಿಷ್ಕರಣೆಯಾಗುತ್ತಾ ಅಥವಾ ಅದನ್ನೇ ಮುಂದುವರೆಸಿಕೊಂಡು ಹೋಗುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ