AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi News: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ 36 ವಿದ್ಯಾರ್ಥಿಗಳು ಅಸ್ವಸ್ಥ

ಸರ್ಕಾರಿ ಪ್ರಾಥಮಿಕ ಶಾಲೆಯ 36 ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸೇವಿಸಿ ಅಸ್ವಸ್ಥಯಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

Hubballi News: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ 36 ವಿದ್ಯಾರ್ಥಿಗಳು ಅಸ್ವಸ್ಥ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
| Updated By: Digi Tech Desk

Updated on:Mar 29, 2023 | 5:14 PM

ನವಲಗುಂದ: ಸರ್ಕಾರಿ ಪ್ರಾಥಮಿಕ ಶಾಲೆಯ 36 ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸೇವಿಸಿ ಅಸ್ವಸ್ಥಯಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 36 ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥತೆ ಮತ್ತು ವಾಂತಿಭೇದಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿಕ್ಷಕರು ತಿಳಿಸಿರುವಂತೆ ಮಧ್ಯಾಹ್ನದ ಬಿಸಿ ಊಟ ಸೇವಿಸಿದ ಮಕ್ಕಳು ಹೊಟ್ಟೆ ನೋವು ಎಂದು ತಿಳಿಸಿದ್ದಾರೆ. ಸ್ವಲ್ಪ ಸಮಯದ ನಂತರ ವಿದ್ಯಾರ್ಥಿಗಳು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ಮೂಲಗಳ ಪ್ರಕಾರ ಮಕ್ಕಳಿಗೆ ಬಡಿಸಿದ ಅನ್ನದಲ್ಲಿ ಹುಳಗಳು ಕಂಡು ಬಂದಿದೆ. ನಂತರದಲ್ಲಿ ಮಕ್ಕಳು ಅಸ್ವಸ್ಥವಾಗಿದ್ದಾರೆ. ಘಟನೆ ಬೆಳಕಿಗೆ ಬಂದ ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳು ಶಲವಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಳೀಯ ಆರೋಗ್ಯಾಧಿಕಾರಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ, ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳನ್ನು ಸಮೀಪದ ತಾಲೂಕು ಆಸ್ಪತ್ರೆಗೆ ರವಾನಿಸುವಂತೆ ಸೂಚಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ಸಿಬ್ಬಂದಿಗಳ ಮೇಲೆ ಆರೋಗ್ಯಾಧಿಕಾರಿಗಳು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಶಿ ಪಾಟೀಲ ಮಾಹಿತಿ ನೀಡಿದ್ದಾರೆ. ಇದೀಗ ಎಲ್ಲ ಮಕ್ಕಳು ಗುಣಮುಖರಾಗಿದ್ದಾರೆ. ಶಲವಡಿ ಪಿಎಚ್‌ಸಿಯ ಡಾ.ಅಶೋಕ್ ಅಗರ್ವಾಲ್ ಸ್ಥಳಕ್ಕೆ ಭೇಟಿ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಇದನ್ನೂ ಓದಿ: Shocking News: ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವು ಪತ್ತೆ; ಶಾಲಾ ಮಕ್ಕಳು ಅಸ್ವಸ್ಥ

36 ಮಕ್ಕಳನ್ನು ನವಲಗುಂದದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ವಿದ್ಯಾ ಹಾಗೂ ಡಾ.ಮಹೇಶ್ ಹಾಗೂ ಸಿಬ್ಬಂದಿ ಮಕ್ಕಳಿಗೆ ಚಿಕಿತ್ಸೆ ನೀಡಿದ್ದಾರೆ. ಇದೀಗ ಇದರಲ್ಲಿ ಹೆಚ್ಚಿನವರು ಚೇತರಿಸಿಕೊಂಡಿದ್ದಾರೆ. ಕೇವಲ ಆರು ಮಕ್ಕಳಿಗೆ ಮಾತ್ರ ಐವಿ ದ್ರವವನ್ನು ನೀಡಲಾಗಿದ್ದು, ಅವರೂ ಈಗ ಚೇತರಿಸಿಕೊಂಡಿದ್ದಾರೆ ಎಂದು ಡಾ. ಶಶಿ ಪಾಟೀಲ್ ಹೇಳಿದ್ದಾರೆ.

Published On - 5:07 pm, Wed, 29 March 23