AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ?: ಬಾಬಾಜಾನ್ ಸಾವಿಗೆ ಬಿಗ್​ ಟ್ವಿಸ್ಟ್​, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು

2025 ನವೆಂಬರ್ 11 ರಂದು ಹೃದಯಾಘಾತದಿಂದ ಸಾವನ್ನಪ್ಪಿದ ಬಾಬಾಜಾನ್ ಚಿನ್ನೂರು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೋಷಕರು ಸೊಸೆಯ ವಿರುದ್ಧ ಕೊಲೆಯ ಆರೋಪ ಮಾಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಭದ್ರಾಪುರದಲ್ಲಿ ಹೂತಿದ್ದ ಶವವನ್ನು ಹೊರತೆಗೆಯಲಾಗಿದೆ. ಮರಣೋತ್ತರ ವರದಿ ಬಂದ ನಂತರ ಇದು ಕೊಲೆಯೋ ಅಥವಾ ಹೃದಯಾಘಾತವೋ ಎಂಬುದು ಬಹಿರಂಗವಾಗಲಿದ್ದು, ಸತ್ಯ ತಿಳಿಯಲು ತನಿಖೆ ಮುಂದುವರಿದಿದೆ.

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ?: ಬಾಬಾಜಾನ್ ಸಾವಿಗೆ ಬಿಗ್​ ಟ್ವಿಸ್ಟ್​, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು
ಬಾಬಾಜಾನ್ ಸಾವು ಪ್ರಕರಣ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jan 21, 2026 | 5:42 PM

Share

ಧಾರವಾಡ, ಜ.21: 2025 ನವೆಂಬರ್ 11 ರಂದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​​ ಸಿಕ್ಕಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಬಾಬಾಜಾನ್ (Baba Jan )ಚಿನ್ನೂರು(51) ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ಇದು ಹೃದಯಾಘಾತವಲ್ಲ, ಕೊಲೆ ಎಂದು ಹೇಳಿದರು. ಇದೀಗ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.

NWKSRTC (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಯಲ್ಲಿ ಡ್ರೈವರ್ ಆಗಿದ್ದ ಬಾಬಾಜಾನ್ ಅವರು, ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆಗೆ ಸಂತೋಷದ ಜೀವನ ನಡೆಸುತ್ತಿದ್ದರು. ನವೆಂಬರ್​​​ 11ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಾಬಾಜಾನ್ ಅವರ ಮೃತ ದೇಹವನ್ನು ಸ್ವಗ್ರಾಮ ಭದ್ರಾಪುರಕ್ಕೆ ತಂದು ಕುಟುಂಬ ತರಾತುರಿಯಾಗಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಅದಾದ ಬಳಿಕ ಸೊಸೆಯೇ ತಮ್ಮ ಮಗನ್ನು ಹತ್ಯೆ ಮಾಡಿದ್ದಾಳೆ ಎಂದು ಬಾಬಾಜಾನ್ ಅವರ ಪೋಷಕರು ದೂರಿದ್ದಾರೆ. ಯಾವುದೋ ದುರುದ್ದೇಶದಿಂದ ಮಗನ ಹತ್ಯೆ ಆಗಿದೆ ಎಂದು ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದ್ವೆಗೂ ಮುಂಚೆ ಪ್ರಗ್ನೆಂಟ್, ಹುಟ್ಟಿದಾಕ್ಷಣ ಹಸುಗೂಸು ಸಾವು:ಸಾವಿನ ಸುತ್ತ ಅನುಮಾನದ ಹುತ್ತ

ನಮ್ಮ ಮಗ ಸತ್ತ ನಂತರ ಅವನ ಮರಣೋತ್ತರ ಪರೀಕ್ಷೆ ಮಾಡಿಲ್ಲ, ಯಾವ ಕಾರಣಕ್ಕೆ ಮಾಡಿಲ್ಲ ಎಂಬುದು ತಿಳಿಯಬೇಕು. ಅವನಿಗೆ ನಿಜವಾಗಿಯೂ ಹೃದಯಾಘಾತ ಆಗಿದ್ದೀಯಾ? ಎಂಬುದು ತಿಳಿಯಬೇಕು. ಇದರ ಹಿಂದೆ ನಮ್ಮ ಸೊಸೆಯ ಕೈವಾಡ ಇದೆ ಎಂದು ಬಾಬಾಜಾನ್ ಅವರ ಹೆತ್ತವರ ಆರೋಪವಾಗಿದೆ. ಈ ಕಾರಣದಿಂದ ಎಸ್ಪಿಗೆ ದೂರು ನೀಡಿದ್ದಾರೆ. ಇದೀಗ ತಹಶೀಲ್ದಾರ್ ನೇತೃತ್ವದಲ್ಲಿ ಮತ್ತೆ ಮರಣೋತ್ತರ ಪರೀಕ್ಷೆಗಾಗಿ ಭದ್ರಾಪುರದ ಸ್ಮಶಾನದಲ್ಲಿ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆಯಲಾಗಿದೆ. ಈ ಪರೀಕ್ಷೆಯ ನಂತರ ಇದು ಕೊಲೆಯೋ ಅಥವಾ ಹೃದಯಾಘಾತವೋ ಎಂಬುದು ತಿಳಿಯಲಿದೆ. ಮರಣೋತ್ತರ ನಂತರ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್​​ ಅಧಿಕಾರಿಗಳು ಹೇಳಿದ್ದಾರೆ. ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆಯುವ ಪ್ರಕ್ರಿಯೆಗಳು ಈಗಾಗಲೇ ಮುಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿಲಾಗಿದೆ ಎಂದು ಹೇಳಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ