AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ 2ನೆಯ ವಂದೇ ಭಾರತ್‌ ರೈಲು! ಜುಲೈಗೆ ಧಾರವಾಡ-ಬೆಂಗಳೂರು ವಂದೇ ಭಾರತ್‌ ಸಂಚಾರ ಆರಂಭ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಧಾರವಾಡ ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ ಆರಂಭಿಸಿದರೆ ರಾಜ್ಯದ ಎರಡನೆಯ ವಂದೇ ಭಾರತ್‌ ರೈಲು ಇದಾಗಲಿದೆ. ದೇಶದ ಅತಿ ವೇಗದ ರೈಲು ಇದಾಗಿದ್ದು ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ.

ಕರ್ನಾಟಕಕ್ಕೆ 2ನೆಯ ವಂದೇ ಭಾರತ್‌ ರೈಲು! ಜುಲೈಗೆ ಧಾರವಾಡ-ಬೆಂಗಳೂರು ವಂದೇ ಭಾರತ್‌ ಸಂಚಾರ ಆರಂಭ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಜುಲೈ ತಿಂಗಳೊಳಗೆ ಧಾರವಾಡ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Follow us
ಸಾಧು ಶ್ರೀನಾಥ್​
|

Updated on:Jun 01, 2023 | 2:57 PM

ವಂದೇ ಭಾರತ್‌  ಸ್ಪೀಡ್‌ ರೈಲಿನಲ್ಲಿ ಓಡಾಡಬೇಕು ಎಂಬ ಉತ್ತರ ಕರ್ನಾಟಕ ಜನರ ಕನಸು ಶೀಘ್ರದಲ್ಲಿಯೇ ನನಸಾಗಲಿದ್ದು, ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸಂಚಾರ (Dharwad-Bangalore Vande Bharat train) ಆರಂಭವಾಗುವ ನಿಟ್ಟಿನಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬರುವ ಎರಡು ತಿಂಗಳೊಳಗೆ ಧಾರವಾಡ ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೇ ಸಚಿವ (Minister of Railways) ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಮ್ಮ ಸಹೋದ್ಯೋಗಿ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ (Pralhad Joshi) ಭರವಸೆ ನೀಡಿದ್ದಾರೆ.

ಈ ಕುರಿತಂತೆ ತಮ್ಮ ಫೇಸ್​​ ಬುಕ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರೈಲು ಸೇವೆಯ ಆರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್‌ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ರೈಲ್ವೇ ಸಚಿವರು ನೀಡಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ. ಧಾರವಾಡ ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ ಆರಂಭಿಸಿದರೆ ರಾಜ್ಯದ ಎರಡನೆಯ ವಂದೇ ಭಾರತ್‌ ರೈಲು ಇದಾಗಲಿದೆ. ಕರ್ನಾಟಕಕ್ಕೆ ದಕ್ಕಿದ ಮೊದಲ ವಂದೇ ಭಾರತ್‌ ರೈಲು ಬೆಂಗಳೂರು ಮತ್ತು ಚೆನ್ನೈ ಮಹಾನಗರಗಳ (Vande Bharat Express from Bengaluru to Chennai) ನಡುವಣ ಸಂಚಾರವಾಗಿದೆ.

ದೇಶದ ಅತಿ ವೇಗದ ರೈಲು ಇದಾಗಿದ್ದು, ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಅತ್ಯುತ್ತಮ ದರ್ಜೆಯ ಆಸನಗಳೊಂದಿಗೆ ಐಷಾರಾಮಿ ವ್ಯವಸ್ಥೆಗಳನ್ನು ಈ ರೈಲಿನಲ್ಲಿ ವಿಮಾನದ ರೀತಿ ನಿರ್ಮಿಸಲಾಗಿದೆ. ಇದು ವಿಶ್ವದರ್ಜೆಯ ಸೌಕರ್ಯಗಳನ್ನು ಹೊಂದಿದ್ದು, ಹವಾನಿಯಂತ್ರಿತ, ಎಕಾನಮಿ ಮತ್ತು ಪ್ರಿಮಿಯಂ ಕ್ಲಾಸ್‌ಗಳನ್ನು ಈ ರೈಲು ಹೊಂದಿದೆ.

ವಂದೇ ಭಾರತ್‌ ರೈಲಿನಲ್ಲಿ ಆನ್‌ಬೋರ್ಡ್‌ ಉಪಾಹಾರದ ವ್ಯವಸ್ಥೆ ಇದೆ. ರೀಡಿಂಗ್‌ ಲೈಟ್‌ ವ್ಯವಸ್ಥೆ, ಸ್ವಯಂಚಾಲಿತ ಬಾಗಿಲು, ವೈ ಫೈ, ಮಾಹಿತಿ ವ್ಯವಸ್ಥೆ, ಚಾರ್ಜಿಂಗ್‌ ಪಾಯಿಂಟ್‌, ಸಿಸಿಕ್ಯಾಮೆರಾ, ಬಯೋ ಶೌಚಾಲಯ ವ್ಯವಸ್ಥೆಯೂ ಇದೆ ಎಂದು ಸಚಿವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಿವರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರದ ಜನರ ಬಹು ನಿರೀಕ್ಷಿತ ಈ ಉತ್ಕೃಷ್ಟ ರೈಲಿನ ಪ್ರಯಾಣದ ಅನುಭವವನ್ನು ಶೀಘ್ರದಲ್ಲಿಯೇ ಆಸ್ವಾದಿಸಬಹುದು ಎಂದು ಪ್ರಲ್ಹಾದ ಜೋಶಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 11:57 am, Thu, 1 June 23

ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ