AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹು ನಿರೀಕ್ಷಿತ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಸ್ಥಳೀಯರ ತೀವ್ರ ವಿರೋಧ: ಕಾರಣ ಇಲ್ಲಿದೆ

ಧಾರವಾಡ-ಬೆಳಗಾವಿ ರೈಲು ಮಾರ್ಗ ಯೋಜನೆಗೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಕಟ್ಟಡಗಳು, ಕೃಷಿ ಭೂಮಿ ನಷ್ಟದ ಭೀತಿ ಎದುರಾಗಿರುವ ಕಾರಣ ಮಾರ್ಗ ಬದಲಾವಣೆಗೆ ದೊಡ್ಡ ಮಟ್ಟದ ಆಗ್ರಹ ಕೇಳಿಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ವಿಳಂಬ, ಯೋಜನಾ ವೆಚ್ಚ ಹೆಚ್ಚಳ ಹಾಗೂ ಹೆದ್ದಾರಿ ವಿಸ್ತರಣೆಗೆ ಅಡ್ಡಿ ಕಾರಣಗಳಿಂದ ಯೋಜನೆಯ ಭವಿಷ್ಯ ಅನಿಶ್ಚಿತವಾಗಿದೆ.

ಬಹು ನಿರೀಕ್ಷಿತ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಸ್ಥಳೀಯರ ತೀವ್ರ ವಿರೋಧ: ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Apr 08, 2026 | 4:44 PM

Share

ಧಾರವಾಡ, ಏಪ್ರಿಲ್​​ 08: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಧಾರವಾಡ-ಬೆಳಗಾವಿ ನಡುವಿನ ರೈಲು ಮಾರ್ಗ ನಿರ್ಮಾಣಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂತನ ರೈಲು ಮಾರ್ಗದ ನೀಲ ನಕ್ಷೆಯ ಆಧಾರದಲ್ಲಿ ಸರ್ಕಾರದ ಹಾಗೂ ಖಾಸಗಿಯವರ ನೂರಾರು ಕಟ್ಟಡಗಳು ಕಾಮಗಾರಿ ಕಾರಣಕ್ಕೆ ನೆಲಸಮವಾಗಲಿದ್ದು, ಕೃಷಿ ಭೂಮಿಯೂ ರೈತರ ಕೈತಪ್ಪುವ ಆತಂಕ ಎದುರಾಗಿದೆ. ಹೀಗಾಗಿ ರೈಲು ಮಾರ್ಗ ಬದಲಾವಣೆ ಮಾಡುವಂತೆ ಆಗ್ರಹ ಕೇಳಿಬಂದಿದೆ.

ಕೈಗಾರಿಕಾ ಪ್ರದೇಶಕ್ಕಾಗಿ ಈಗಾಗಲೇ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ, ಬೇಲೂರು, ಚಿಕ್ಕಮಲ್ಲಿಗವಾಡ ಗ್ರಾಮಸ್ಥರು ತಮ್ಮೆಲ್ಲ ಭೂಮಿಯನ್ನು ಕಳೆದುಕೊಂಡಿದ್ದಾರೆ. ಹೀಗಿರುವಾಗ ಪ್ರಸ್ತುತ ಸಿದ್ಧವಾಗಿರುವ ನೀಲ ನಕ್ಷೆಯ ಅನ್ವಯ ಧಾರವಾಡ-ಬೆಳಗಾವಿ ನಡುವಿನ ರೈಲು ಮಾರ್ಗ ನಿರ್ಮಾಣ ಆಗಿದ್ದೇ ಆದಲ್ಲಿ, ಬೇಲೂರು ಕೈಗಾರಿಕಾ ಪ್ರದೇಶದಲ್ಲಿನ ಕೇಂದ್ರೀಯ ಉಗ್ರಾಣದ ನೂತನ ಕಟ್ಟಡ ಸೇರಿದಂತೆ ಮತ್ತಿತರ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಕಟ್ಟಡಗಳು‌ ನೆಲಸಮವಾಗಲಿವೆ. ಅಲ್ಲದೆ ಈ ರೈಲು ಮಾರ್ಗ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 50 ಮೀಟರ್ ಪಕ್ಕದಲ್ಲೇ ಹಾದು ಹೋಗಲಿರುವ ಕಾರಣ, ಭವಿಷ್ಯದಲ್ಲಿ ಹೆದ್ದಾರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕೂಡ ಈ ಯೋಜನೆಯಿಂದ ಹಿನ್ನಡೆಯಾಗಲಿದೆ ಎಂಬುದು ಸ್ಥಳೀಯರ ವಾದ.

ಇದನ್ನೂ ಓದಿ: ಕೈದಿಗಳ ಕಳ್ಳಾಟಕ್ಕಿಲ್ಲ ಬ್ರೇಕ್​; ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ

ಧಾರವಾಡ-ಬೆಳಗಾವಿ ಮಧ್ಯೆ ಒಟ್ಟು 73 ಕಿ.ಮೀ. ನೂತನ ರೈಲು ಮಾರ್ಗ ನಿರ್ಮಾಣವಾಗಬೇಕಿದ್ದು, ಈ ಮಾರ್ಗಕ್ಕೆ‌ ಮೊದಲು ಅಂದಾಜು 927.42 ಕೋಟಿ ರೂಪಾಯಿ ವೆಚ್ಚ ಅಂದಾಜಿಸಲಾಗಿತ್ತಾದರೂ ಈಗ ಆ ಮೊತ್ತ 2,509 ಕೋಟಿಗೆ ಹೆಚ್ಚಿದೆ ಎನ್ನಲಾಗಿದೆ. ಧಾರವಾಡ ಜಿಲ್ಲೆಯಲ್ಲಿ 225 ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 602 ಎಕರೆ ಜಮೀನು ಈ ಮಾರ್ಗದ ನಿರ್ಮಾಣಕ್ಕೆ ಅಗತ್ಯವಿದ್ದು, ಸಣ್ಣ ರೈತರ ಜಮೀನಿನ ಮೂಲಕ ಈ ಮಾರ್ಗವೇನಾದರೂ ಹಾದು ಹೋದರೆ ಅನ್ನದಾತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಉಳಿಯುವ ತುಂಡು ಜಮೀನಿನಲ್ಲಿ ಕೃಷಿ ಮಾಡಲಾಗದಿರೋದು ಒಂದೆಡೆಯಾದರೆ, ಮಾರೋಣ ಎಂದರೆ ಜಾಗದ ಮೌಲ್ಯವೂ ಕಡಿಮೆಯಾಗಬಹುದೆಂಬ ಆತಂಕ ಕಾಡತೊಡಗಿದೆ.

ಇನ್ನು ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಈ ಮಾರ್ಗ ನಿರ್ಮಾಣವಾಗಿ ಸಾರ್ವಜನಿಕರಿಗೆ ಸೇವೆ ಲಭ್ಯವಾಗಬೇಕಿತ್ತು. ಆದರೆ ರಾಜ್ಯ ಸರಕಾರ ತನ್ನ ಪಾಲಿನ ಜವಾಬ್ದಾರಿಯಾಗಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಕಾಮಗಾರಿ ವಿಳಂಬವಾಗಿದೆ. ಈ ನಡುವೆ ಮಾರ್ಗ ನಿರ್ಮಾಣಕ್ಕೆ ಸ್ಥಳೀಯರ ವಿರೋಧವೂ ಕೇಳಿಬಂದಿರುವ ಕಾರಣ ಯೋಜನೆಗೆ ಮತ್ತಷ್ಟು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!