ಬೆಣ್ಣೆ ಹಳ್ಳ ಪ್ರವಾಹ: ದೇವಸ್ಥಾನದೊಳಗೆ ನುಗ್ಗಿದ ನೀರಿನಲ್ಲೇ 2 ದಿನ ಕಳೆದ ಮಾನಸಿಕ ಅಸ್ವಸ್ಥನ ರಕ್ಷಣೆ

ಆತ ಎಂದಿನಂತೆ ಕಳ್ಳಿ ಬಸವೇಶ್ವರ ದೇವಸ್ಥಾನಕ್ಕೆ ಹೋಗಿದ್ದನು. ಆದರೆ ಅಲ್ಲಿಂದ ಮರಳಿ ಬರಬೇಕು ಎನ್ನುವಷ್ಟರಲ್ಲಿ ದೇವಸ್ಥಾನದ ಸುತ್ತಲೂ ನೀರು ಬಂದು ಬಿಟ್ಟಿತ್ತು. ಇದರಿಂದಾಗಿ ಆತ ಮನೆಗೆ ಬರಲಾಗದೆ ಎರಡು ದಿನ ದೇವಸ್ಥಾನದಲ್ಲಿಯೇ ಕಳೆದನು. ಮುಂದೇನಾಯ್ತು ಈ ಸ್ಟೋರಿ ಓದಿ.

ಬೆಣ್ಣೆ ಹಳ್ಳ ಪ್ರವಾಹ: ದೇವಸ್ಥಾನದೊಳಗೆ ನುಗ್ಗಿದ ನೀರಿನಲ್ಲೇ 2 ದಿನ ಕಳೆದ ಮಾನಸಿಕ ಅಸ್ವಸ್ಥನ ರಕ್ಷಣೆ
ಲಕ್ಷ್ಮಣ, ಬೆಣ್ಣೆ ಹಳ್ಳ ಪ್ರವಾಹ
Follow us
| Updated By: ವಿವೇಕ ಬಿರಾದಾರ

Updated on: Oct 13, 2024 | 8:23 AM

ಧಾರವಾಡ, ಅಕ್ಟೋಬರ್​ 13: ನವಲಗುಂದ (Navalagund) ತಾಲೂಕಿನಲ್ಲಿ ಹರಿಯುವ ಬೆಣ್ಣೆ ಹಳ್ಳ (Bennihalla) ನದಿಯಂತೆಯೇ ಭೋರ್ಗರೆಯುತ್ತೆ. ಪ್ರತಿವರ್ಷ ಮಳೆಗಾಲದಲ್ಲಿ ಈ ಹಳ್ಳ ಉಂಟು ಮಾಡುವ ಅವಾಂತರಗಳು ಒಂದೆರಡಲ್ಲ. ಬೆಣ್ಣೆ ಹಳ್ಳ ಹಲವಾರು ಗ್ರಾಮಗಳ ಪಕ್ಕದಲ್ಲಿ ಹರಿದು ಹೋಗುತ್ತೆ. ನವಲಗುಂದ ತಾಲೂಕಿನ ಕಾಲವಾಡ ಗ್ರಾಮದ ಬಳಿಯೂ ಹರಿಯುತ್ತೆ. ಇಲ್ಲಿ ಈ ಹಳ್ಳಕ್ಕೆ ಯಮನಿ ಹಳ್ಳವೂ ಬಂದು ಸೇರುತ್ತೆ.

ಸಂಗಮ ಸ್ಥಳದಲ್ಲಿ ಕಳ್ಳಿ ಬಸವೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನಕ್ಕೆ ಎಂದಿನಂತೆ ಗ್ರಾಮದ ಲಕ್ಷ್ಮಣ ಬಾರಕೇರ್ ಎಂಬುವರು ಎರಡು ದಿನಗಳ ಹಿಂದೆ ಹೋಗಿದ್ದರು. ಲಕ್ಷ್ಮಣ ಅವರು ದೇವಸ್ಥಾನಕ್ಕೆ ಹೋಗುವಾಗ ಬುತ್ತಿ ಕಟ್ಟಿಕೊಂಡು ಹೋಗಿದ್ದರು. ಲಕ್ಷ್ಮಣ ಅವರು ದೇವಸ್ಥಾನಕ್ಕೆ ಹೋಗುತ್ತಲೇ ಮಳೆಯ ಪ್ರಮಾಣ ಹೆಚ್ಚಾಗಿ, ಹಳ್ಳ ದೇವಸ್ಥಾನವನ್ನು ಸುತ್ತುವರೆದಿದೆ.

ಲಕ್ಷ್ಮಣ ಅವರು ದೇವಸ್ಥಾನಕ್ಕೆ ಹೋಗಿದ್ದು ಯಾರಿಗೂ ಗೊತ್ತಿರಲಿಲ್ಲ. ಲಕ್ಷ್ಮಣ ಅವರು ಮಾನಸಿಕ ಅಸ್ವಸ್ಥನಾಗಿದ್ದರಿಂದ ಮನೆಯವರು ಮತ್ತು ಗ್ರಾಮಸ್ಥರು ಅವರ ಬಗ್ಗೆ ಅಷ್ಟೊಂದು ತಲೆ ಕೆಡಿಸಿಕೊಂಡಿರಲಿಲ್ಲ. ಎರಡು ದಿನಗಳ ಬಳಿಕ ಶನಿವಾರ ಬೆಳಗ್ಗೆ ಹಳ್ಳದ ನೀರು ಸಲ್ಪ ಕಡಿಮೆಯಾಗಿದೆ. ಲಕ್ಷ್ಮಣ ಅವರು ದೇವಸ್ಥಾನದ ಬಳಿ ಕಾಣಿಸಿಕೊಂಡಿದ್ದಾರೆ. ಲಕ್ಷ್ಮಣ ಅವರನ್ನು ಕಂಡ ಗ್ರಾಮಸ್ಥರು, ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದರು. ಆದರೆ ರಕ್ಷಣಾ ಕಾರ್ಯಕ್ಕೆ ಹಳ್ಳದಲ್ಲಿನ ಮುಳ್ಳು-ಕಂಟಿ ಅಡ್ಡಿಯಾದವು. ಅಗ್ನಿಶಾಮಕ ದಳ ಸಿಬ್ಬಂದಿ ಬಳಿ ಇರುವ ಬಲೂನು ಹಡಗುಗಳು ಹಳ್ಳದಲ್ಲಿರುವ ಮುಳ್ಳಿಗೆ ತಾಗಿದರೆ ಪಂಕ್ಚರ್ ಆಗುವ ಸಾಧ್ಯತೆ ಇತ್ತು. ಹೀಗಾಗಿ ಕಾರ್ಯಾಚರಣೆ ವಿಧಾನವನ್ನು ಕೊಂಚ ಬದಲಾಯಿಸಿ, ನುರಿತ ಈಜುಗಾರರನ್ನು ಕರೆಯಿಸಿ ಕಾರ್ಯಾಚರಣೆ ಮುಂದುವರೆಸಲಾಯಿತು.

ಇದನ್ನೂ ಓದಿ: ಬೆಣ್ಣೆಹಳ್ಳದಲ್ಲಿ ನೋಡ ನೋಡುತ್ತಲೇ ಕೊಚ್ಚಿ ಹೋದ ಸಾಕುನಾಯಿಗಳು; ಹೂಳು ಎತ್ತದ ಕಾರಣ ಹೆಚ್ಚುತ್ತಿದೆ ಅನಾಹುತ

ಆದರೆ ಅವರಿಗೂ ದೇವಸ್ಥಾನದ ಬಳಿಗೆ ಮುಟ್ಟಲು ಸಾಧ್ಯವಾಗಲಿಲ್ಲ. ಕೊನೆಗೆ ಬೋಟ್ ಮೂಲಕ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಯಿತು. ಆದರೆ ಮೊದಲಿಗೆ ತಂದ ಸಣ್ಣ ಬೋಟ್​ನಿಂದಲೂ ಲಕ್ಷ್ಮಣ ಅವರ ಬಳಿ ತಲುಪಲು ಸಾಧ್ಯವಾಗಲಿಲ್ಲ. ಹೀಗಾಗಿ ನವಲಗುಂದದಿಂದ ದೊಡ್ಡ ಬೋಟ್ ತರಿಸಿ, ಕೊನೆಗೂ ಲಕ್ಷ್ಮಣ ಅವರನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾದರು.

ಪ್ರತಿವರ್ಷ ಈ ಗ್ರಾಮದ ಬಳಿಯೇ ಇಂಥ ಅನಾಹುತಗಳು ಆಗುತ್ತವೆ. ಕೆಲ ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಎಂಟು ಜನರು ಸಿಲುಕಿಕೊಂಡಿದ್ದರು. ಆಗಲೂ ಇಂಥದ್ದೇ ಕಾರ್ಯಾಚರಣೆ ಮೂಲಕ ಅವರನ್ನು ರಕ್ಷಿಸಲಾಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ ಘಟನೆ ನಡೆದಿದೆ. ಒಟ್ಟಿನಲ್ಲಿ ಬೆಣ್ಣಿಹಳ್ಳದಿಂದ ಇಂಥ ಘಟನೆಗಳು ನಡೆಯುತ್ತಲೇ ಇದ್ದು, ಇಂಥ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಯಾವುದಾದರೂ ಒಂದು ವ್ಯವಸ್ಥೆ ಮಾಡಬೇಕಾದ ಅವಶ್ಯಕತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು