AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆ ಹಳ್ಳ ಪ್ರವಾಹ: ದೇವಸ್ಥಾನದೊಳಗೆ ನುಗ್ಗಿದ ನೀರಿನಲ್ಲೇ 2 ದಿನ ಕಳೆದ ಮಾನಸಿಕ ಅಸ್ವಸ್ಥನ ರಕ್ಷಣೆ

ಆತ ಎಂದಿನಂತೆ ಕಳ್ಳಿ ಬಸವೇಶ್ವರ ದೇವಸ್ಥಾನಕ್ಕೆ ಹೋಗಿದ್ದನು. ಆದರೆ ಅಲ್ಲಿಂದ ಮರಳಿ ಬರಬೇಕು ಎನ್ನುವಷ್ಟರಲ್ಲಿ ದೇವಸ್ಥಾನದ ಸುತ್ತಲೂ ನೀರು ಬಂದು ಬಿಟ್ಟಿತ್ತು. ಇದರಿಂದಾಗಿ ಆತ ಮನೆಗೆ ಬರಲಾಗದೆ ಎರಡು ದಿನ ದೇವಸ್ಥಾನದಲ್ಲಿಯೇ ಕಳೆದನು. ಮುಂದೇನಾಯ್ತು ಈ ಸ್ಟೋರಿ ಓದಿ.

ಬೆಣ್ಣೆ ಹಳ್ಳ ಪ್ರವಾಹ: ದೇವಸ್ಥಾನದೊಳಗೆ ನುಗ್ಗಿದ ನೀರಿನಲ್ಲೇ 2 ದಿನ ಕಳೆದ ಮಾನಸಿಕ ಅಸ್ವಸ್ಥನ ರಕ್ಷಣೆ
ಲಕ್ಷ್ಮಣ, ಬೆಣ್ಣೆ ಹಳ್ಳ ಪ್ರವಾಹ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Oct 13, 2024 | 8:23 AM

Share

ಧಾರವಾಡ, ಅಕ್ಟೋಬರ್​ 13: ನವಲಗುಂದ (Navalagund) ತಾಲೂಕಿನಲ್ಲಿ ಹರಿಯುವ ಬೆಣ್ಣೆ ಹಳ್ಳ (Bennihalla) ನದಿಯಂತೆಯೇ ಭೋರ್ಗರೆಯುತ್ತೆ. ಪ್ರತಿವರ್ಷ ಮಳೆಗಾಲದಲ್ಲಿ ಈ ಹಳ್ಳ ಉಂಟು ಮಾಡುವ ಅವಾಂತರಗಳು ಒಂದೆರಡಲ್ಲ. ಬೆಣ್ಣೆ ಹಳ್ಳ ಹಲವಾರು ಗ್ರಾಮಗಳ ಪಕ್ಕದಲ್ಲಿ ಹರಿದು ಹೋಗುತ್ತೆ. ನವಲಗುಂದ ತಾಲೂಕಿನ ಕಾಲವಾಡ ಗ್ರಾಮದ ಬಳಿಯೂ ಹರಿಯುತ್ತೆ. ಇಲ್ಲಿ ಈ ಹಳ್ಳಕ್ಕೆ ಯಮನಿ ಹಳ್ಳವೂ ಬಂದು ಸೇರುತ್ತೆ.

ಸಂಗಮ ಸ್ಥಳದಲ್ಲಿ ಕಳ್ಳಿ ಬಸವೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನಕ್ಕೆ ಎಂದಿನಂತೆ ಗ್ರಾಮದ ಲಕ್ಷ್ಮಣ ಬಾರಕೇರ್ ಎಂಬುವರು ಎರಡು ದಿನಗಳ ಹಿಂದೆ ಹೋಗಿದ್ದರು. ಲಕ್ಷ್ಮಣ ಅವರು ದೇವಸ್ಥಾನಕ್ಕೆ ಹೋಗುವಾಗ ಬುತ್ತಿ ಕಟ್ಟಿಕೊಂಡು ಹೋಗಿದ್ದರು. ಲಕ್ಷ್ಮಣ ಅವರು ದೇವಸ್ಥಾನಕ್ಕೆ ಹೋಗುತ್ತಲೇ ಮಳೆಯ ಪ್ರಮಾಣ ಹೆಚ್ಚಾಗಿ, ಹಳ್ಳ ದೇವಸ್ಥಾನವನ್ನು ಸುತ್ತುವರೆದಿದೆ.

ಲಕ್ಷ್ಮಣ ಅವರು ದೇವಸ್ಥಾನಕ್ಕೆ ಹೋಗಿದ್ದು ಯಾರಿಗೂ ಗೊತ್ತಿರಲಿಲ್ಲ. ಲಕ್ಷ್ಮಣ ಅವರು ಮಾನಸಿಕ ಅಸ್ವಸ್ಥನಾಗಿದ್ದರಿಂದ ಮನೆಯವರು ಮತ್ತು ಗ್ರಾಮಸ್ಥರು ಅವರ ಬಗ್ಗೆ ಅಷ್ಟೊಂದು ತಲೆ ಕೆಡಿಸಿಕೊಂಡಿರಲಿಲ್ಲ. ಎರಡು ದಿನಗಳ ಬಳಿಕ ಶನಿವಾರ ಬೆಳಗ್ಗೆ ಹಳ್ಳದ ನೀರು ಸಲ್ಪ ಕಡಿಮೆಯಾಗಿದೆ. ಲಕ್ಷ್ಮಣ ಅವರು ದೇವಸ್ಥಾನದ ಬಳಿ ಕಾಣಿಸಿಕೊಂಡಿದ್ದಾರೆ. ಲಕ್ಷ್ಮಣ ಅವರನ್ನು ಕಂಡ ಗ್ರಾಮಸ್ಥರು, ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದರು. ಆದರೆ ರಕ್ಷಣಾ ಕಾರ್ಯಕ್ಕೆ ಹಳ್ಳದಲ್ಲಿನ ಮುಳ್ಳು-ಕಂಟಿ ಅಡ್ಡಿಯಾದವು. ಅಗ್ನಿಶಾಮಕ ದಳ ಸಿಬ್ಬಂದಿ ಬಳಿ ಇರುವ ಬಲೂನು ಹಡಗುಗಳು ಹಳ್ಳದಲ್ಲಿರುವ ಮುಳ್ಳಿಗೆ ತಾಗಿದರೆ ಪಂಕ್ಚರ್ ಆಗುವ ಸಾಧ್ಯತೆ ಇತ್ತು. ಹೀಗಾಗಿ ಕಾರ್ಯಾಚರಣೆ ವಿಧಾನವನ್ನು ಕೊಂಚ ಬದಲಾಯಿಸಿ, ನುರಿತ ಈಜುಗಾರರನ್ನು ಕರೆಯಿಸಿ ಕಾರ್ಯಾಚರಣೆ ಮುಂದುವರೆಸಲಾಯಿತು.

ಇದನ್ನೂ ಓದಿ: ಬೆಣ್ಣೆಹಳ್ಳದಲ್ಲಿ ನೋಡ ನೋಡುತ್ತಲೇ ಕೊಚ್ಚಿ ಹೋದ ಸಾಕುನಾಯಿಗಳು; ಹೂಳು ಎತ್ತದ ಕಾರಣ ಹೆಚ್ಚುತ್ತಿದೆ ಅನಾಹುತ

ಆದರೆ ಅವರಿಗೂ ದೇವಸ್ಥಾನದ ಬಳಿಗೆ ಮುಟ್ಟಲು ಸಾಧ್ಯವಾಗಲಿಲ್ಲ. ಕೊನೆಗೆ ಬೋಟ್ ಮೂಲಕ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಯಿತು. ಆದರೆ ಮೊದಲಿಗೆ ತಂದ ಸಣ್ಣ ಬೋಟ್​ನಿಂದಲೂ ಲಕ್ಷ್ಮಣ ಅವರ ಬಳಿ ತಲುಪಲು ಸಾಧ್ಯವಾಗಲಿಲ್ಲ. ಹೀಗಾಗಿ ನವಲಗುಂದದಿಂದ ದೊಡ್ಡ ಬೋಟ್ ತರಿಸಿ, ಕೊನೆಗೂ ಲಕ್ಷ್ಮಣ ಅವರನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾದರು.

ಪ್ರತಿವರ್ಷ ಈ ಗ್ರಾಮದ ಬಳಿಯೇ ಇಂಥ ಅನಾಹುತಗಳು ಆಗುತ್ತವೆ. ಕೆಲ ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಎಂಟು ಜನರು ಸಿಲುಕಿಕೊಂಡಿದ್ದರು. ಆಗಲೂ ಇಂಥದ್ದೇ ಕಾರ್ಯಾಚರಣೆ ಮೂಲಕ ಅವರನ್ನು ರಕ್ಷಿಸಲಾಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ ಘಟನೆ ನಡೆದಿದೆ. ಒಟ್ಟಿನಲ್ಲಿ ಬೆಣ್ಣಿಹಳ್ಳದಿಂದ ಇಂಥ ಘಟನೆಗಳು ನಡೆಯುತ್ತಲೇ ಇದ್ದು, ಇಂಥ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಯಾವುದಾದರೂ ಒಂದು ವ್ಯವಸ್ಥೆ ಮಾಡಬೇಕಾದ ಅವಶ್ಯಕತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್