ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿ: ದಾವಣಗೆರೆಯ ಮೂವರು ಸಾವು!
ಧಾರವಾಡ ತಾಲೂಕಿನ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಪಲ್ಟಿಯಾಗಿ ದಾವಣಗೆರೆ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದ್ದು, ಗಾಯಗೊಂಡ ಮತ್ತೂ ಮೂವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗರಗ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಖ್ಯಾಂಶಗಳು
- ಧಾರವಾಡದ ವೆಂಕಟಾಪುರ ಬಳಿ ಕಾರು ಪಲ್ಟಿಯಾಗಿ ದಾವಣಗೆರೆಯ ಮೂವರು ದುರ್ಮರಣ
- ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿಯಿಂದ ಧಾರವಾಡಕ್ಕೆ ಬರುವಾಗ ನಡೆದ ದುರಂತ
- ಗಂಭೀರವಾಗಿ ಗಾಯಗೊಂಡ ಮೂವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಸಲ್ಲಿಕೆ
ಧಾರವಾಡ, ಸೆಪ್ಟೆಂಬರ್ 01: ಜಿಲ್ಲೆಯ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಮತ್ತೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ವಿನಾಯಕ ಕೆ. ಯು. (25), ಮಂಜುನಾಥ (29) ಹಾಗೂ ಬಸವರಾಜ (34) ಮೃತಪಟ್ಟ ದುರದೃಷ್ಟಕರ ವ್ಯಕ್ತಿಗಳು. ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ತಕ್ಷಣವೇ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಗರಗ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




