AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು
ನಿಂತಿದ್ದ ಲಾರಿಗೆ ಕಾರು ಡಿಕ್ಕಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:May 30, 2025 | 10:10 AM

Share

ಧಾರವಾಡ, ಮೇ 30: ನಿಂತಿದ್ದ ಲಾರಿಗೆ ಕಾರು ಡಿಕ್ಕಿ (accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಗದಗ-ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ 63ರಲ್ಲಿ ನಡೆದಿದೆ. ಸದ್ಯ ಅಪಘಾತ ನಡೆದ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಕಾರಿನಲ್ಲಿದ್ದವರು ಹುಬ್ಬಳ್ಳಿಗೆ ಹೊರಟಿದ್ದ ವೇಳೆ ದುರಂತ ಸಂಭವಿಸಿದೆ.

ನೀರಿನ ಗುಂಡಿಗೆ ಬಿದ್ದ ಕಾರು: ಓರ್ವ ಸಾವು, ಮೂವರು ಬಚಾವ್

ಅತಿವೇಗವಾಗಿ ಬಂದು ನೀರಿನ ಗುಂಡಿಗೆ ಕಾರು ಬಿದ್ದು ಓರ್ವ ಸಾವನ್ನಪ್ಪಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಬಳಿ ನಡೆದಿದೆ.

ಇದನ್ನೂ ಓದಿ: ಜಿಮ್ ಡಂಬಲ್​​ನಿಂದ ಹೆಂಡತಿಯ ತಲೆ ಜಜ್ಜಿದ ಗಂಡ: ಪಾಪ ಪ್ರಜ್ಞೆಯಿಂದ ತಾನೂ ಆತ್ಮಹತ್ಯೆಗೆ ಶರಣು

ಇದನ್ನೂ ಓದಿ
Image
ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು
Image
ಮಂಗಳೂರು: ಬಾವಿಯಲ್ಲಿ ಪ್ರಿಯಕರನ ಜೊತೆ ವಿವಾಹಿತೆಯ ಶವಪತ್ತೆ
Image
ಜಿಮ್ ಡಂಬಲ್​​ನಿಂದ ಹೆಂಡತಿಯ ತಲೆ ಜಜ್ಜಿದ ಗಂಡ: ತಾನೂ ಆತ್ಮಹತ್ಯೆಗೆ ಶರಣು
Image
ಪ್ರೀತಿಸಿ ಮದ್ವೆಯಾಗಿದ್ದವಳನ್ನ 10 ಬಾರಿ ಇರಿದು ಕೊಂದ ಪತಿ!

ಶ್ರೀನಿವಾಸಪುರ ಮೂಲದ ಎಸ್.ಆದರ್ಶ ಮೃತ ದುರ್ದೈವಿ. ಟಿ.ಎನ್ ಶರತ್, ಭರತ್ ಮತ್ತು ರಿಯಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವಿಗೀಡಾದ ಗಂಡು ಕರಡಿ

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಜಾಪುರ ಗೇಟ್ ಬಳಿ ಕರಡಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಕೆಲಹೊತ್ತು ನರಳಾಡಿ ಗಂಡು ಕರಡಿ ಸಾವಿಗೀಡಾಗಿರುವಂತಹ ಘಟನೆ ನಡೆದಿದೆ. ರಸ್ತೆ ದಾಟುವ ವೇಳೆ ಕರಡಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ವಾಹನ ಸಮೇತ ಚಾಲಕ ಪರಾರಿ ಆಗಿದ್ದಾನೆ.

ಇದನ್ನೂ ಓದಿ: ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು, ಅವಶೇಷಗಳಡಿ ಸಿಲುಕಿದ ಐವರ ರಕ್ಷಣೆಗೆ ಕಾರ್ಯಾಚರಣೆ

ಇನ್ನು ಡಿಕ್ಕಿಯಿಂದ ಗಾಯಗೊಂಡ ಕರಡಿ ರಸ್ತೆ ದಾಟಲು ಯತ್ನಿಸಿದೆ. ಆದರೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ರಸ್ತೆ ಬಳಿಯೇ ಸಾವಿಗೀಡಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:50 am, Fri, 30 May 25

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ