AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಮಳೆ ಬಾರದೇ ಒಣಗಿ ಹೋದ ಕಡಲೆ: ಕೈಕೊಟ್ಟ ಹಿಂಗಾರು, ರೈತ ಕಂಗಾಲು

Dharwad News: ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಮುಂಗಾರು ಕೈಕೊಟ್ಟ ಬಳಿಕ ಹಿಂಗಾರು ಮಳೆಯಾದರೂ ಆಗುತ್ತೆ ಅಂದುಕೊಂಡಿದ್ದ ರೈತರಿಗೆ ನಿರಾಸೆಯಾಗಿದೆ. ಏಕೆಂದರೆ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಾಗಲೆಲ್ಲಾ ಹಿಂಗಾರು ಮಳೆ ಕೈ ಹಿಡಿಯುತ್ತಿತ್ತು, ಆದರೆ ಈ ಬಾರಿ ಹಿಂಗಾರು ಮಳೆ ಕೂಡ ಕೈಕೊಟ್ಟಿದ್ದರಿಂದ ರೈತರು ಕಂಗಾಲಾಗಿ ಕಂಗಾಲಾಗಿ ಹೋಗಿದ್ದಾರೆ.

ಧಾರವಾಡ: ಮಳೆ ಬಾರದೇ ಒಣಗಿ ಹೋದ ಕಡಲೆ: ಕೈಕೊಟ್ಟ ಹಿಂಗಾರು, ರೈತ ಕಂಗಾಲು
ಕಡಲೆ ಬೆಳೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Nov 16, 2023 | 8:04 PM

Share

ಧಾರವಾಡ, ನವೆಂಬರ್​​​ 16: ಜಿಲ್ಲೆಯ ಪ್ರಮುಖ ಬೆಳೆಗಳ ಪೈಕಿ ಕಡಲೆ (Chickpeas) ಕೂಡ ಒಂದು. ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಹಿಂಗಾರು ಹಂಗಾಮಿನಲ್ಲಿ ಕಡಲೆ ಬೆಳೆಯುತ್ತಾರೆ. ಕಡಿಮೆ ಶ್ರಮ ಹಾಗೂ ಕಡಿಮೆ ನಿರ್ವಹಣೆ ಈ ಬೆಳೆಗೆ ಸಾಕು. ಅಲ್ಲದೇ ಕೊನೆ ಕೊನೆಗೆ ಚಳಿಯ ಮೇಲೆಯೇ ಈ ಬೆಳೆ ಕೈಗೆ ಬಂದು ಬಿಡುತ್ತೆ. ಇದೇ ಕಾರಣಕ್ಕೆ ಮುಂಗಾರು ಕೈಕೊಟ್ಟಿದ್ದಕ್ಕೆ ಹಿಂಗಾರಿನಲ್ಲಾದರೂ ಈ ಬೆಳೆ ಕೈ ಹಿಡಿಯಬಹುದು ಅಂದುಕೊಂಡು ಕಡಲೆ ಬಿತ್ತನೆ ಮಾಡಿದ ರೈತರಿಗೆ ಇದೀಗ ನಿರಾಸೆ ಮೂಡಿದೆ.

ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಮುಂಗಾರು ಕೈಕೊಟ್ಟ ಬಳಿಕ ಹಿಂಗಾರು ಮಳೆಯಾದರೂ ಆಗುತ್ತೆ ಅಂದುಕೊಂಡಿದ್ದ ರೈತರಿಗೆ ನಿರಾಸೆಯಾಗಿದೆ. ಏಕೆಂದರೆ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಾಗಲೆಲ್ಲಾ ಹಿಂಗಾರು ಮಳೆ ಕೈ ಹಿಡಿಯುತ್ತಿತ್ತು, ಆದರೆ ಈ ಬಾರಿ ಹಿಂಗಾರು ಮಳೆ ಕೂಡ ಕೈಕೊಟ್ಟಿದ್ದರಿಂದ ರೈತರು ಕಂಗಾಲಾಗಿ ಕಂಗಾಲಾಗಿ ಹೋಗಿದ್ದಾರೆ.

ಇದನ್ನೂ ಓದಿ: ಅದೊಂದಿದ್ದರೆ ಸಾಕಂತೆ ಪಡಿತರ ಬೇಡವಂತೆ… ಧಾರವಾಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಸಾವಿರಾರು ಜನ ಅನೇಕ ತಿಂಗಳಿಂದ ರೇಷನ್ ಪಡೆದೇ ಇಲ್ಲ!

ಅದರಲ್ಲೂ ಅನೇಕ ಕಡೆಗಳಲ್ಲಿ ಹಿಂಗಾರು ನಂಬಿ ಅನೇಕ ಕಡೆಗಳಲ್ಲಿ ಬಿತ್ತನೆ ಕಾರ್ಯ ಮಾಡಿದ್ದರು. ಅದರಲ್ಲೂ ಕಡಿಮೆ ನಿರ್ವಹಣೆ ಬೇಡುವ ಕಡಲೆ ಬಿತ್ತನೆ ಅನೇಕ ಕಡೆಗಳಲ್ಲಿ ಆಗಿತ್ತು. ಆದರೆ ಇದೀಗ ಅಂಥ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೇ ಒಂದು ಮಳೆ ಬಂದಿದ್ದರೂ ಸಾಕಿತ್ತು ಕಡಲೆ ಬೆಳೆ ಕೈಗೆ ಬರಲು. ಆದರೆ ಇದೀಗ ಎಲ್ಲವೂ ಮುಗಿದೇ ಹೋಗಿದೆ. ಒಂದು ಮಳೆ ಬಂದಿದ್ದರೆ ಮುಂದೆ ಚಳಿಯ ಮೇಲೆಯೇ ಕಾಳುಗಳು ಬಲಿತು, ಬೆಳೆ ಕೈಗೆ ಬರುತ್ತಿತ್ತು. ಆದರೆ ಮಳೆ ಬಾರದೇ ಗಿಡ ಒಣಗಿ ಹೋಗುತ್ತಿವೆ.

ಮುಂಗಾರು ಮಳೆಯಾಗದೇ ಭೂಮಿಯಲ್ಲಿ ತೇವಾಂಶವೇ ಇಲ್ಲದಾಗಿದೆ. ಮುಂಗಾರು ಮಳೆಯಾಗಿದ್ದರೆ ತೇವಾಂಶ ಉಳಿದುಕೊಂಡು, ಹಿಂಗಾರು ಮಳೆ ಕೊಂಚ ತಡವಾಗಿ ಬಂದಿದ್ದರೂ ನಡೆಯುತ್ತಿತ್ತು. ಆದರೆ ಮುಂಗಾರು ಮಳೆ ಕೈಕೊಟ್ಟು, ಇದೀಗ ಹಿಂಗಾರು ಕೂಡ ಕೈಕೊಟ್ಟಿದೆ. ಇದೆಲ್ಲದರ ಮೇಲೆ ಬಿಸಿಲಿನ ಪ್ರಮಾಣವೂ ಹೆಚ್ಚಾಗಿದೆ. ಹೀಗಾಗಿ ನೀರಿನ ಅಂಶ ಇಲ್ಲದೇ ಬೆಳೆ ಒಣಗುತ್ತಿರೋದು ಒಂದು ಕಡೆಯಾದರೆ, ವಿವಿಧ ರೋಗಗಳು ಬೆಳೆಗೆ ಮುತ್ತಿಕೊಳ್ಳುತ್ತಿರೋದು ಮತ್ತೊಂದು ಕಡೆ.

ಇದನ್ನೂ ಓದಿ: ಸಂತೋಷ-ಸಮಾಧಾನದ ಸಂಗತಿ! ಮುಂಗಾರು ಹಿಂಗಾರು ಕೈಕೊಟ್ಟರೂ ಆ ರೈತ ಮಾಡಿದ ಸೂಪರ್​ ಐಡಿಯಾಗೆ ಬಂಪರ್​ ಬೆಳೆ- ಮಹಿಳಾ ಕೃಷಿ ಕಾರ್ಮಿಕರಿಗೆ ಕೈತುಂಬಾ ಕೆಲಸ

ಪ್ರತಿವರ್ಷ ಉತ್ತಮ ಬೆಳೆ ಪಡೆಯುತ್ತಿದ್ದ ರೈತರಿಗೆ ಈ ಬಾರಿ ಎಕರೆಗೆ ಹತ್ತು ಕೇಜಿ ಕಾಳು ಕೂಡ ಬರೋದಿಲ್ಲ ಅನ್ನೋ ಸ್ಥಿತಿ ಬಂದಿದೆ. ಹೊಲ ಸಿದ್ಧ ಮಾಡಿಕೊಂಡು, ಬಿತ್ತನೆ ಕೆಲಸಕ್ಕೆ ಖರ್ಚು ಮಾಡಿದ್ದೂ ಕೂಡ ಈ ಬಾರಿ ಬರೋದಿಲ್ಲ. ಇದರಿಂದಾಗಿ ಮುಂದೆ ಏನೂ ಮಾಡದೇ ರೈತರು ಹೊಲಗಳಿಗೆ ಹೋಗೋದನ್ನೇ ಬಿಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಪ್ಪು ಮಣ್ಣು ಇರೋದ್ರಿಂದ ರೈತರು ಹಿಂಗಾರು ಮಳೆ ಮೇಲೆಯೇ ಹೆಚ್ಚು ಅವಲಂಬಿತರಾಗಿದ್ದಾರೆ. ಒಂದೆರಡು ಮಳೆಯಾಗಿಬಿಟ್ಟರೆ ರೈತರಿಗೆ ಬೆಳೆ ಕೈಗೆ ಸಿಕ್ಕುಬಿಡುತ್ತೆ. ಆದರೆ ಈ ಬಾರಿ ಮಾತ್ರ ಮುಂಗಾರಿನಲ್ಲಿಯೂ ಮಳೆ ಬರಲಿಲ್ಲ. ಇನ್ನು ಹಿಂಗಾರಿನಲ್ಲಿಯೂ ಮಳೆಯಾಗದೇ ರೈತರು ಕೈಸುಟ್ಟುಕೊಳ್ಳುವಂತಾಗಿರೋದು ವಿಪರ್ಯಾಸದ ಸಂಗತಿಯೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು