ಸ್ನೇಹಿತನ ಮಗಳ ಅರಿಶಿಣ ಶಾಸ್ತ್ರದಲ್ಲಿ ಫುಲ್​ ಡ್ಯಾನ್ಸ್, ನರ್ತಕಿ ಮೇಲೆ ಹಣ ತೂರಿದ ಕಾಂಗ್ರೆಸ್ ಮುಖಂಡನ ವಿಡಿಯೋ ವೈರಲ್

ನರ್ತಕಿ ಮೇಲೆ ಹಣ ತೂರಿದ್ದ ಕಾಂಗ್ರೆಸ್​ ಮುಖಂಡನ ವಿಡಿಯೋ ಬೆಳಗಾಗುವಷ್ಟರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಸ್ನೇಹಿತನ ಮಗಳ ಅರಿಶಿಣ ಶಾಸ್ತ್ರದಲ್ಲಿ ಫುಲ್​ ಡ್ಯಾನ್ಸ್, ನರ್ತಕಿ ಮೇಲೆ ಹಣ ತೂರಿದ ಕಾಂಗ್ರೆಸ್ ಮುಖಂಡನ ವಿಡಿಯೋ ವೈರಲ್
Follow us
|

Updated on:Mar 09, 2023 | 9:14 AM

ಧಾರವಾಡ: ಕಾಂಗ್ರೆಸ್​ ಮುಖಂಡರೊಬ್ಬರು(Congress Leader) ತಮ್ಮ ಸ್ನೇಹಿತನ ಮಗಳ ಮದುವೆಯ ಅರಿಶಿಣ ಕಾರ್ಯಕ್ರಮದಲ್ಲಿ ಡ್ಯಾನ್ಸರ್ (Dancer)​ ಮೇಲೆ ಹಣ ತೂರಿದ್ದು, ಇದೀಗ ಈ ವಿಡಿಯೋ ಸಖತ್ ವೈರಲ್(Video Viral) ಆಗಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ(Vinay Kulkarni)  ಪರಮಾಪ್ತರಾಗಿರುವ ಧಾರವಾಡದ(Dharwad) ಕಾಂಗ್ರೆಸ್​ ಮುಖಂಡ ಶಿವಶಂಕರ್ ಎನ್ನುವರು ನರ್ತಕಿ ಮೇಲೆ ಹಣ ತೂರಿದಿದ್ದಾರೆ. ಇದೀಗ ಬೆಳಗಾಗುವಷ್ಟರಲ್ಲಿ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆಗಳು ಶುರುವಾಗಿವೆ.

ಇದನ್ನೂ ಓದಿ: ಮಂಡ್ಯ: ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ! ವೇದಿಕೆಯಲ್ಲಿ ಬಾಲಕನಿಗೆ ಮುತ್ತಿಟ್ಟ ಮಹಿಳಾ ನೃತ್ಯಗಾರರು

ಶಿವಶಂಕರ ಹಂಪಣ್ಣವರ್ ನಿನ್ನೆ (ಮಾ.008) ತಮ್ಮ ಗೆಳಯನ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲೇ ನೃತ್ಯ ಕಾರ್ಯಕ್ರಮವೂ ನಡೆಯುತ್ತಿತ್ತು. ಈ ವೇಳೆ ಶಿವಶಂಕರ ಹಂಪಣ್ಣವರ್ ನೃತ್ಯಗಾರ್ತಿ ಮೇಲೆ ಹಣ ತೂರಿ ಕುಣಿದಿದ್ದಾರೆ. ಕೌಟುಂಬಿಕ ಕಾರ್ಯಕ್ರಮದಲ್ಲಿ ಹಣ ತೂರಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದ್ದು ವಿಡಿಯೋ ಮಾತ್ರ ರಾಷ್ಟ್ರಮಟ್ಟದಲ್ಲಿ ವೈರಲ್ ಆಗಿದೆ. ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​ಗೆ ಒಂದು ರೀತಿಯಾಗಿ ಮುಜುಗರ ತಂದಿಟ್ಟಿದೆ.

ಡ್ಯಾನರ್ ಮೇಲೆ ಗರಿ ಗರಿ ನೋಟುಗಳನ್ನು ತೂರುತ್ತ ಆಕೆಯೊಂದಿಗೆ ಸ್ಟೆಪ್​ ಹಾಕಿದ್ದಾರೆ. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಬಿಜೆಪಿ ಟೀಕಿಸಿದ್ದು, ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದೆ.

ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಇದು ನಾಚಿಕೆಗೇಡಿನ ಸಂಗತಿ. ಹುಡುಗಿಯೊಬ್ಬಳು ಹಣವನ್ನು ಎಸೆಯಲಾಗಿದೆ. ಇವರಿಗೆ ಹಣದ ಬೆಲೆ ಗೊತ್ತಿಲ್ಲ. ಇದು ಕಾಂಗ್ರೆಸ್​ನ ಸಂಸ್ಕೃತಿ ಏನೆಂದು ತೋರಿಸುತ್ತದೆ. ಮತ್ತು ನಾವು ಅದನ್ನು ಹಲವಾರು ಬಾರಿ ನೋಡಿದ್ದೇವೆ. ನಾನು ಇದನ್ನು ಖಂಡಿಸುತ್ತೇನೆ. ಕಾಂಗ್ರೆಸ್ ಈ ಬಗ್ಗೆ ಗಮನಹರಿಸಬೇಕು ಎಂದಿದ್ದಾರೆ.

ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ

ಇತ್ತೀಚೆಗಷ್ಟೇ ಮಂಡ್ಯದ ನಾಗಮಂಗಲ ತಾಲೂಕಿನ ತೋಳಸಿ ಕೊಬ್ಬರಿ ಗ್ರಾಮದೇವತೆ ಹಬ್ಬದಲ್ಲಿ ರಸಮಂಜನರಿ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ ಮಾಡಿರುವ ಘಟನೆ ನಡೆದಿತ್ತು. ಗ್ರಾಮದೇವತೆ ಹಬ್ಬದಲ್ಲಿ ರಸಮಂಜನರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಹಿಳಾ ನೃತ್ಯಗಾರರು ಅಶ್ಲೀಲವಾಗಿ ಡ್ಯಾನ್ಸ್ ಮಾಡಿದ್ದರು. ಡ್ಯಾನ್ಸರ್​ ಬಾಲಕನೊಬ್ಬನನ್ನ ವೇದಿಕೆಗೆ ಕರೆದುಕೊಂಡು ಆತನಿಗೆ ಮುತ್ತಿಟ್ಟು ಅಸಭ್ಯವಾಗಿ ವರ್ತಿಸಿದ್ದಳು. ನೃತ್ಯದ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತವಾಗಿತ್ತು. ಇನ್ನು ಇದೇ ಕಾರ್ಯಕ್ರಮದಲ್ಲಿ ನಾಗಮಂಗಲ ಶಾಸಕ ಸುರೇಶ್ ಗೌಡ ಹಾಗೂ ಮಾಜಿ ಶಾಸಕ ಚಲುವರಾಯಸ್ವಾಮಿ ಭಾಗಿಯಾಗಿದ್ದರು.

ಇನ್ನುಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:56 am, Thu, 9 March 23