AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಮಗಳ ಅರಿಶಿಣ ಶಾಸ್ತ್ರದಲ್ಲಿ ಫುಲ್​ ಡ್ಯಾನ್ಸ್, ನರ್ತಕಿ ಮೇಲೆ ಹಣ ತೂರಿದ ಕಾಂಗ್ರೆಸ್ ಮುಖಂಡನ ವಿಡಿಯೋ ವೈರಲ್

ನರ್ತಕಿ ಮೇಲೆ ಹಣ ತೂರಿದ್ದ ಕಾಂಗ್ರೆಸ್​ ಮುಖಂಡನ ವಿಡಿಯೋ ಬೆಳಗಾಗುವಷ್ಟರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಸ್ನೇಹಿತನ ಮಗಳ ಅರಿಶಿಣ ಶಾಸ್ತ್ರದಲ್ಲಿ ಫುಲ್​ ಡ್ಯಾನ್ಸ್, ನರ್ತಕಿ ಮೇಲೆ ಹಣ ತೂರಿದ ಕಾಂಗ್ರೆಸ್ ಮುಖಂಡನ ವಿಡಿಯೋ ವೈರಲ್
ರಮೇಶ್ ಬಿ. ಜವಳಗೇರಾ
|

Updated on:Mar 09, 2023 | 9:14 AM

Share

ಧಾರವಾಡ: ಕಾಂಗ್ರೆಸ್​ ಮುಖಂಡರೊಬ್ಬರು(Congress Leader) ತಮ್ಮ ಸ್ನೇಹಿತನ ಮಗಳ ಮದುವೆಯ ಅರಿಶಿಣ ಕಾರ್ಯಕ್ರಮದಲ್ಲಿ ಡ್ಯಾನ್ಸರ್ (Dancer)​ ಮೇಲೆ ಹಣ ತೂರಿದ್ದು, ಇದೀಗ ಈ ವಿಡಿಯೋ ಸಖತ್ ವೈರಲ್(Video Viral) ಆಗಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ(Vinay Kulkarni)  ಪರಮಾಪ್ತರಾಗಿರುವ ಧಾರವಾಡದ(Dharwad) ಕಾಂಗ್ರೆಸ್​ ಮುಖಂಡ ಶಿವಶಂಕರ್ ಎನ್ನುವರು ನರ್ತಕಿ ಮೇಲೆ ಹಣ ತೂರಿದಿದ್ದಾರೆ. ಇದೀಗ ಬೆಳಗಾಗುವಷ್ಟರಲ್ಲಿ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆಗಳು ಶುರುವಾಗಿವೆ.

ಇದನ್ನೂ ಓದಿ: ಮಂಡ್ಯ: ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ! ವೇದಿಕೆಯಲ್ಲಿ ಬಾಲಕನಿಗೆ ಮುತ್ತಿಟ್ಟ ಮಹಿಳಾ ನೃತ್ಯಗಾರರು

ಶಿವಶಂಕರ ಹಂಪಣ್ಣವರ್ ನಿನ್ನೆ (ಮಾ.008) ತಮ್ಮ ಗೆಳಯನ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲೇ ನೃತ್ಯ ಕಾರ್ಯಕ್ರಮವೂ ನಡೆಯುತ್ತಿತ್ತು. ಈ ವೇಳೆ ಶಿವಶಂಕರ ಹಂಪಣ್ಣವರ್ ನೃತ್ಯಗಾರ್ತಿ ಮೇಲೆ ಹಣ ತೂರಿ ಕುಣಿದಿದ್ದಾರೆ. ಕೌಟುಂಬಿಕ ಕಾರ್ಯಕ್ರಮದಲ್ಲಿ ಹಣ ತೂರಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದ್ದು ವಿಡಿಯೋ ಮಾತ್ರ ರಾಷ್ಟ್ರಮಟ್ಟದಲ್ಲಿ ವೈರಲ್ ಆಗಿದೆ. ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​ಗೆ ಒಂದು ರೀತಿಯಾಗಿ ಮುಜುಗರ ತಂದಿಟ್ಟಿದೆ.

ಡ್ಯಾನರ್ ಮೇಲೆ ಗರಿ ಗರಿ ನೋಟುಗಳನ್ನು ತೂರುತ್ತ ಆಕೆಯೊಂದಿಗೆ ಸ್ಟೆಪ್​ ಹಾಕಿದ್ದಾರೆ. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಬಿಜೆಪಿ ಟೀಕಿಸಿದ್ದು, ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದೆ.

ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಇದು ನಾಚಿಕೆಗೇಡಿನ ಸಂಗತಿ. ಹುಡುಗಿಯೊಬ್ಬಳು ಹಣವನ್ನು ಎಸೆಯಲಾಗಿದೆ. ಇವರಿಗೆ ಹಣದ ಬೆಲೆ ಗೊತ್ತಿಲ್ಲ. ಇದು ಕಾಂಗ್ರೆಸ್​ನ ಸಂಸ್ಕೃತಿ ಏನೆಂದು ತೋರಿಸುತ್ತದೆ. ಮತ್ತು ನಾವು ಅದನ್ನು ಹಲವಾರು ಬಾರಿ ನೋಡಿದ್ದೇವೆ. ನಾನು ಇದನ್ನು ಖಂಡಿಸುತ್ತೇನೆ. ಕಾಂಗ್ರೆಸ್ ಈ ಬಗ್ಗೆ ಗಮನಹರಿಸಬೇಕು ಎಂದಿದ್ದಾರೆ.

ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ

ಇತ್ತೀಚೆಗಷ್ಟೇ ಮಂಡ್ಯದ ನಾಗಮಂಗಲ ತಾಲೂಕಿನ ತೋಳಸಿ ಕೊಬ್ಬರಿ ಗ್ರಾಮದೇವತೆ ಹಬ್ಬದಲ್ಲಿ ರಸಮಂಜನರಿ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ ಮಾಡಿರುವ ಘಟನೆ ನಡೆದಿತ್ತು. ಗ್ರಾಮದೇವತೆ ಹಬ್ಬದಲ್ಲಿ ರಸಮಂಜನರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಹಿಳಾ ನೃತ್ಯಗಾರರು ಅಶ್ಲೀಲವಾಗಿ ಡ್ಯಾನ್ಸ್ ಮಾಡಿದ್ದರು. ಡ್ಯಾನ್ಸರ್​ ಬಾಲಕನೊಬ್ಬನನ್ನ ವೇದಿಕೆಗೆ ಕರೆದುಕೊಂಡು ಆತನಿಗೆ ಮುತ್ತಿಟ್ಟು ಅಸಭ್ಯವಾಗಿ ವರ್ತಿಸಿದ್ದಳು. ನೃತ್ಯದ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತವಾಗಿತ್ತು. ಇನ್ನು ಇದೇ ಕಾರ್ಯಕ್ರಮದಲ್ಲಿ ನಾಗಮಂಗಲ ಶಾಸಕ ಸುರೇಶ್ ಗೌಡ ಹಾಗೂ ಮಾಜಿ ಶಾಸಕ ಚಲುವರಾಯಸ್ವಾಮಿ ಭಾಗಿಯಾಗಿದ್ದರು.

ಇನ್ನುಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:56 am, Thu, 9 March 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​