Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಸಿಮ್ ಸಕ್ರಿಯಗೊಳಿಸಲು ಜಿಯೋ ಕಂಪನಿಗೆ ನಿರ್ದೇಶನ ನೀಡಿದ ಗ್ರಾಹಕರ ಆಯೋಗ

ಮೊಬೈಲ್ ಸಿಮ್ ಕಳೆದುಕೊಂಡ ಹಿನ್ನೆಲೆಯಲ್ಲಿ ಮತ್ತೊಂದು ಸಿಮ್‌ ಸಕ್ರಿಯಗೊಳಿಸಲು ವಿಫಲವಾದ ರಿಲೈನ್ಸ್ ಕಂಪನಿಗೆ ಪರಿಹಾರ ನೀಡಲು ಧಾರವಾಡದ ಗ್ರಾಹಕರ ಆಯೋಗ ಆದೇಶ ನೀಡಿದೆ. ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯ ನಿವಾಸಿ ಲಕ್ಕಪ್ಪ ಬೆಣ್ಣಿ ಎಂಬುವರು 2017ರಲ್ಲಿ ಧಾರವಾಡದ ರಿಲೈನ್ಸ್ ಪ್ರೋಜೆಕ್ಟ್ ಸಂಸ್ಥೆಯಿಂದ ಜಿಯೋ ಸಿಮ್ ಖರೀದಿಸಿದ್ದರು. ಕೋವಿಡ್-19 ಅವಧಿಯಲ್ಲಿ ಅವರು ಆ ಸಿಮ್‌ನ್ನು ಕಳೆದುಕೊಂಡಿದ್ದರು.

ಧಾರವಾಡ: ಸಿಮ್ ಸಕ್ರಿಯಗೊಳಿಸಲು ಜಿಯೋ ಕಂಪನಿಗೆ ನಿರ್ದೇಶನ ನೀಡಿದ ಗ್ರಾಹಕರ ಆಯೋಗ
ಗ್ರಾಹಕನ ಸಿಮ್ ಸಕ್ರಿಯಗೊಳಿಸುವಂತೆ ಜಿಯೋ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಿಂದ ನಿರ್ದೇಶನ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Rakesh Nayak Manchi

Updated on: Sep 01, 2023 | 9:30 PM

ಧಾರವಾಡ, ಸೆ.1: ಮೊಬೈಲ್ ಸಿಮ್ ಕಳೆದುಕೊಂಡ ಹಿನ್ನೆಲೆಯಲ್ಲಿ ಮತ್ತೊಂದು ಸಿಮ್‌ ಸಕ್ರಿಯಗೊಳಿಸಲು ವಿಫಲವಾದ ರಿಲೈನ್ಸ್ ಕಂಪನಿಗೆ ಪರಿಹಾರ ನೀಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಧಾರವಾಡ (Dharwad) ನಗರದ ಮಾಳಮಡ್ಡಿ ಬಡಾವಣೆಯ ನಿವಾಸಿ ಲಕ್ಕಪ್ಪ ಬೆಣ್ಣಿ ಎಂಬುವರು 2017ರಲ್ಲಿ ಧಾರವಾಡದ ರಿಲೈನ್ಸ್ ಪ್ರೋಜೆಕ್ಟ್ ಸಂಸ್ಥೆಯಿಂದ ಜಿಯೋ ಸಿಮ್ ಖರೀದಿಸಿದ್ದರು.

ಕೋವಿಡ್-19 ಅವಧಿಯಲ್ಲಿ ಲಕ್ಕಪ್ಪ ಬೆಣ್ಣಿ ಅವರ ಆ ಸಿಮ್‌ನ್ನು ಕಳೆದುಕೊಂಡಿದ್ದರು. ಅದನ್ನು ಮತ್ತೆ ಸಕ್ರಿಯಗೊಳಿಸುವಂತೆ ಸಿಮ್ ಖರೀದಿಸಿದ ರಿಲೈನ್ಸ್ ಪ್ರೋಜೆಕ್ಟ್ ಸಂಸ್ಥೆ ಮತ್ತು ಜಿಯೋ ಕಸ್ಟಮರ್ ಕೇರ್‌ಗೆ ಸಾಕಷ್ಟು ವಿನಂತಿಸಿದ್ದರು. ಆದರೂ ಹೇಳಿದ ನಂಬರಿನ ಜಿಯೋ ಸಿಮ್‌ ಅನ್ನು ಸಕ್ರಿಯಗೊಳಿಸಿರಲಿಲ್ಲ. ಅದರಿಂದ ತನ್ನ ದೈನಂದಿನ ಜೀವನ ನಿರ್ವಹಣೆ ಮತ್ತು ಬ್ಯಾಂಕ್ ಇತ್ಯಾದಿ ಕೆಲಸಕ್ಕೆ ತೊಂದರೆಯಾಗಿದ್ದು, ಎದುರುದಾರರು ತನಗೆ ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ಲಕ್ಕಪ್ಪ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು.

ಇದನ್ನೂ ಓದಿ: ಕಾಶಿ-ಅಯೋಧ್ಯೆ ಯಾತ್ರೆ ರದ್ದುಗೊಳಿಸಿದ ಸ್ಟಾರ್‌ ಏರ್‌ಲೈನ್ಸ್‌: ಪ್ರಯಾಣಿಕರಿಗೆ ದಂಡ ಸಮೇತ ಪರಿಹಾರಿ ನೀಡುವಂತೆ ಧಾರವಾಡ ಗ್ರಾಹಕರ ಆಯೋಗ ಆದೇಶ

ದೂರಿನ ಬಗ್ಗೆ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಕಳೆದುಕೊಂಡ ಸಿಮ್‌ ಅನ್ನು ಮರು ಸಕ್ರಿಯಗೊಳಿಸಲು ಕೇಳಿಕೊಂಡರೂ ಕೋರಿಕೆಯನ್ನು ಪರಿಗಣಿಸಲು ಸಂಸ್ಥೆಯು ವಿಫಲರಾಗಿದ್ದು, ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಅದೇ ನಂಬರ್‌ಗೆ ಸಿಮ್‌ ಅನ್ನು ಸಕ್ರಿಯಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಅಲ್ಲದೆ, ಸೇವಾ ನ್ಯೂನ್ಯತೆಗಾಗಿ 10 ಸಾವಿರ ರೂಪಾಯಿ ಪರಿಹಾರ ಮತ್ತು 5 ಸಾವಿರ ರೂಪಾಯಿ ಪ್ರಕರಣದ ಖರ್ಚನ್ನು ನೀಡುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ