ಧಾರವಾಡ: ಸಿಮ್ ಸಕ್ರಿಯಗೊಳಿಸಲು ಜಿಯೋ ಕಂಪನಿಗೆ ನಿರ್ದೇಶನ ನೀಡಿದ ಗ್ರಾಹಕರ ಆಯೋಗ

ಮೊಬೈಲ್ ಸಿಮ್ ಕಳೆದುಕೊಂಡ ಹಿನ್ನೆಲೆಯಲ್ಲಿ ಮತ್ತೊಂದು ಸಿಮ್‌ ಸಕ್ರಿಯಗೊಳಿಸಲು ವಿಫಲವಾದ ರಿಲೈನ್ಸ್ ಕಂಪನಿಗೆ ಪರಿಹಾರ ನೀಡಲು ಧಾರವಾಡದ ಗ್ರಾಹಕರ ಆಯೋಗ ಆದೇಶ ನೀಡಿದೆ. ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯ ನಿವಾಸಿ ಲಕ್ಕಪ್ಪ ಬೆಣ್ಣಿ ಎಂಬುವರು 2017ರಲ್ಲಿ ಧಾರವಾಡದ ರಿಲೈನ್ಸ್ ಪ್ರೋಜೆಕ್ಟ್ ಸಂಸ್ಥೆಯಿಂದ ಜಿಯೋ ಸಿಮ್ ಖರೀದಿಸಿದ್ದರು. ಕೋವಿಡ್-19 ಅವಧಿಯಲ್ಲಿ ಅವರು ಆ ಸಿಮ್‌ನ್ನು ಕಳೆದುಕೊಂಡಿದ್ದರು.

ಧಾರವಾಡ: ಸಿಮ್ ಸಕ್ರಿಯಗೊಳಿಸಲು ಜಿಯೋ ಕಂಪನಿಗೆ ನಿರ್ದೇಶನ ನೀಡಿದ ಗ್ರಾಹಕರ ಆಯೋಗ
ಗ್ರಾಹಕನ ಸಿಮ್ ಸಕ್ರಿಯಗೊಳಿಸುವಂತೆ ಜಿಯೋ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಿಂದ ನಿರ್ದೇಶನ
Follow us
| Updated By: Rakesh Nayak Manchi

Updated on: Sep 01, 2023 | 9:30 PM

ಧಾರವಾಡ, ಸೆ.1: ಮೊಬೈಲ್ ಸಿಮ್ ಕಳೆದುಕೊಂಡ ಹಿನ್ನೆಲೆಯಲ್ಲಿ ಮತ್ತೊಂದು ಸಿಮ್‌ ಸಕ್ರಿಯಗೊಳಿಸಲು ವಿಫಲವಾದ ರಿಲೈನ್ಸ್ ಕಂಪನಿಗೆ ಪರಿಹಾರ ನೀಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಧಾರವಾಡ (Dharwad) ನಗರದ ಮಾಳಮಡ್ಡಿ ಬಡಾವಣೆಯ ನಿವಾಸಿ ಲಕ್ಕಪ್ಪ ಬೆಣ್ಣಿ ಎಂಬುವರು 2017ರಲ್ಲಿ ಧಾರವಾಡದ ರಿಲೈನ್ಸ್ ಪ್ರೋಜೆಕ್ಟ್ ಸಂಸ್ಥೆಯಿಂದ ಜಿಯೋ ಸಿಮ್ ಖರೀದಿಸಿದ್ದರು.

ಕೋವಿಡ್-19 ಅವಧಿಯಲ್ಲಿ ಲಕ್ಕಪ್ಪ ಬೆಣ್ಣಿ ಅವರ ಆ ಸಿಮ್‌ನ್ನು ಕಳೆದುಕೊಂಡಿದ್ದರು. ಅದನ್ನು ಮತ್ತೆ ಸಕ್ರಿಯಗೊಳಿಸುವಂತೆ ಸಿಮ್ ಖರೀದಿಸಿದ ರಿಲೈನ್ಸ್ ಪ್ರೋಜೆಕ್ಟ್ ಸಂಸ್ಥೆ ಮತ್ತು ಜಿಯೋ ಕಸ್ಟಮರ್ ಕೇರ್‌ಗೆ ಸಾಕಷ್ಟು ವಿನಂತಿಸಿದ್ದರು. ಆದರೂ ಹೇಳಿದ ನಂಬರಿನ ಜಿಯೋ ಸಿಮ್‌ ಅನ್ನು ಸಕ್ರಿಯಗೊಳಿಸಿರಲಿಲ್ಲ. ಅದರಿಂದ ತನ್ನ ದೈನಂದಿನ ಜೀವನ ನಿರ್ವಹಣೆ ಮತ್ತು ಬ್ಯಾಂಕ್ ಇತ್ಯಾದಿ ಕೆಲಸಕ್ಕೆ ತೊಂದರೆಯಾಗಿದ್ದು, ಎದುರುದಾರರು ತನಗೆ ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ಲಕ್ಕಪ್ಪ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು.

ಇದನ್ನೂ ಓದಿ: ಕಾಶಿ-ಅಯೋಧ್ಯೆ ಯಾತ್ರೆ ರದ್ದುಗೊಳಿಸಿದ ಸ್ಟಾರ್‌ ಏರ್‌ಲೈನ್ಸ್‌: ಪ್ರಯಾಣಿಕರಿಗೆ ದಂಡ ಸಮೇತ ಪರಿಹಾರಿ ನೀಡುವಂತೆ ಧಾರವಾಡ ಗ್ರಾಹಕರ ಆಯೋಗ ಆದೇಶ

ದೂರಿನ ಬಗ್ಗೆ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಕಳೆದುಕೊಂಡ ಸಿಮ್‌ ಅನ್ನು ಮರು ಸಕ್ರಿಯಗೊಳಿಸಲು ಕೇಳಿಕೊಂಡರೂ ಕೋರಿಕೆಯನ್ನು ಪರಿಗಣಿಸಲು ಸಂಸ್ಥೆಯು ವಿಫಲರಾಗಿದ್ದು, ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಅದೇ ನಂಬರ್‌ಗೆ ಸಿಮ್‌ ಅನ್ನು ಸಕ್ರಿಯಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಅಲ್ಲದೆ, ಸೇವಾ ನ್ಯೂನ್ಯತೆಗಾಗಿ 10 ಸಾವಿರ ರೂಪಾಯಿ ಪರಿಹಾರ ಮತ್ತು 5 ಸಾವಿರ ರೂಪಾಯಿ ಪ್ರಕರಣದ ಖರ್ಚನ್ನು ನೀಡುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು