AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಠೇವಣಿ ಹಣ ಹಿಂದಿರುಗಿಸದ ಧಾರವಾಡದ ಸೊಸೈಟಿಗೆ ದಂಡ, ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ

Dharwad Vikas Urban Credit Society: ದೂರು ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಠೇವಣಿ ಅವಧಿ ಮುಗಿದ ಮೇಲೆ ಕರಾರಿನಂತೆ ಬಡ್ಡಿ ಸಮೇತ ಠೇವಣಿದಾರರಿಗೆ ಹಣ ಹಿಂದಿರುಗಿಸುವುದು ಸೊಸೈಟಿಯ ಕರ್ತವ್ಯ. ಆದರೆ, ಠೇವಣಿ ಅವಧಿ ಮುಗಿದು ಸುಮಾರು ಎರಡ್ಮೂರು ವರ್ಷಗಳು ಕಳೆದರೂ ಠೇವಣಿ ಹಣ ಅಥವಾ ಅದರ ಮೇಲಿನ ಬಡ್ಡಿ ಹಿಂದಿರುಗಿಸದೇ ಇರುವುದು ತಪ್ಪು ಎಂದಿದ್ದಾರೆ.

ಠೇವಣಿ ಹಣ ಹಿಂದಿರುಗಿಸದ ಧಾರವಾಡದ ಸೊಸೈಟಿಗೆ ದಂಡ, ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ
ಠೇವಣಿ ಹಣ ಹಿಂದಿರುಗಿಸದ ಧಾರವಾಡದ ಸೊಸೈಟಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​|

Updated on: Feb 08, 2024 | 5:24 PM

Share

ಧಾರವಾಡ ನಗರದ ಕಮಲಾಪುರ ನಿವಾಸಿ ಅನ್ನಪೂರ್ಣಾ ಹುಲ್ಲಮನಿ ಅವರು ಧಾರವಾಡ ವಿಕಾಸ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸೊಸೈಟಿಯಲ್ಲಿ (Dharwad Vikas Urban Credit Society) 2020ರ ಫೆಬ್ರವರಿಯಲ್ಲಿ 17ರಂದು ರೂ 1.50 ಲಕ್ಷ ಮತ್ತು 2021ರ ಮೇ 7ರಂದು ರೂ.1 ಲಕ್ಷ ಹಣವನ್ನು ಒಂದು ವರ್ಷದ ಅವಧಿಗೆ ಠೇವಣಿ ಇಟ್ಟಿದ್ದರು. ಠೇವಣಿ ಅವಧಿ ಮುಗಿದ ಮೇಲೆ ಎರಡೂ ಠೇವಣಿಗಳ ಹಣ ಕೊಡುವಂತೆ ಸೊಸೈಟಿಗೆ ವಿನಂತಿಸಿದರೂ ಠೇವಣಿ ಹಣ (Deposit) ಅಥವಾ ಬಡ್ಡಿಯನ್ನು (Interest) ವಾಪಸ್ಸು ಕೊಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನ್ನಪೂರ್ಣಾ ಅವರು ಸೊಸೈಟಿ ವಿರುದ್ಧ ಗ್ರಾಹಕರ ಆಯೋಗದಲ್ಲಿ ( Dharwad Consumer Commission) ದೂರು ದಾಖಲು ಮಾಡಿದ್ದರು.

ದೂರು ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಠೇವಣಿ ಅವಧಿ ಮುಗಿದ ಮೇಲೆ ಕರಾರಿನಂತೆ ಬಡ್ಡಿ ಸಮೇತ ಠೇವಣಿದಾರರಿಗೆ ಹಣ ಹಿಂದಿರುಗಿಸುವುದು ಸೊಸೈಟಿಯ ಕರ್ತವ್ಯ.

ಇದನ್ನೂ ಓದಿ: ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?

ಆದರೆ, ಠೇವಣಿ ಅವಧಿ ಮುಗಿದು ಸುಮಾರು ಎರಡ್ಮೂರು ವರ್ಷಗಳು ಕಳೆದರೂ ಠೇವಣಿ ಹಣ ಅಥವಾ ಅದರ ಮೇಲಿನ ಬಡ್ಡಿ ಹಿಂದಿರುಗಿಸದೇ ಇರುವುದು ತಪ್ಪು. ಹಾಗಾಗಿ ಠೇವಣಿ ಹಣ ಒಟ್ಟು ರೂ. 2.50 ಲಕ್ಷ ಹಾಗೂ ಅದರ ಮೇಲೆ ಶೇ 13.5ರಷ್ಟು ಠೇವಣಿ ಇಟ್ಟ ದಿನಾಂಕದಿಂದ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸುವಂತೆ ಆಯೋಗ ಸೊಸೈಟಿಗೆ ನಿರ್ದೇಶಿಸಿದೆ.

ಇದನ್ನೂ ಓದಿ:  ಹುಬ್ಬಳ್ಳಿ -ಡೆಪಾಸಿಟ್​ ಹಿಂದಿರುಗಿಸದ ಸರಸ್ವತಿ ಕೋ ಆಪ್​​ ಸೊಸೈಟಿಗೆ 11 ಲಕ್ಷ ರೂ ದಂಡ ವಿಧಿಸಿದ ಕೋರ್ಟ್​​

ದೂರುದಾರರಿಗೆ ಆಗಿರುವ ಅನಾನುಕೂಲ ಹಾಗೂ ಮಾನಸಿಕ ಹಿಂಸೆಗಾಗಿ ರೂ. 25 ಸಾವಿರ ಪರಿಹಾರ ಮತ್ತು ಅವರ ಪ್ರಕರಣ ಖರ್ಚು ವೆಚ್ಚವೆಂದು ರೂ. 10 ಸಾವಿರ ಕೊಡುವಂತೆ ಎದುರುದಾರ ಸೊಸೈಟಿಯವರಿಗೆ ಆಯೋಗ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ