ಇಲ್ಲ ಸಲ್ಲದ ಕಾಯಿಲೆ ನೆಪ ಹೇಳಿ ವಿಮೆ ತಿರಸ್ಕರಿಸಿದ ಅಂಚೆ ಇಲಾಖೆಗೆ 3 ಲಕ್ಷ ದಂಡ ವಿಧಿಸಿದ ಧಾರವಾಡ ಗ್ರಾಹಕರ ಆಯೋಗ

ತನ್ನ ಚಿಕ್ಕಪ್ಪ ಯಾವುದೇ ಕಾಯಿಲೆಯಿಂದ ಬಳಲುತ್ತಿರಲಿಲ್ಲ. ಆದರೆ ಹೃದಯಾಘಾತದಿಂದ ಅವರು ಮೃತಪಟ್ಟಿರುವುದರಿಂದ ಅಂಚೆ ಇಲಾಖೆಯವರ ತೀರ್ಮಾನ ತಪ್ಪು ಮತ್ತು ಇದು ಸೇವಾ ನ್ಯೂನ್ಯತೆ ಆಗಿದೆ ಅಂತಾ ಅಂಚೆ ಇಲಾಖೆ ಮೇಲೆ ಕ್ರಮ ಕೈಗೊಂಡು ಪರಿಹಾರ ಕೊಡಿಸುವಂತೆ ಅರ್ಚನಾ ಗ್ರಾಹಕರ ರಕ್ಷಣಾಕಾಯ್ದೆಯಡಿ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

ಇಲ್ಲ ಸಲ್ಲದ ಕಾಯಿಲೆ ನೆಪ ಹೇಳಿ ವಿಮೆ ತಿರಸ್ಕರಿಸಿದ ಅಂಚೆ ಇಲಾಖೆಗೆ 3 ಲಕ್ಷ ದಂಡ ವಿಧಿಸಿದ ಧಾರವಾಡ ಗ್ರಾಹಕರ ಆಯೋಗ
ವಿಮೆ ತಿರಸ್ಕರಿಸಿದ ಅಂಚೆ ಇಲಾಖೆಗೆ 3.03 ಲಕ್ಷ ದಂಡ
Edited By: ಸಾಧು ಶ್ರೀನಾಥ್​

Updated on: Sep 12, 2023 | 5:35 PM

ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ನಾಗಪ್ಪ ಶಿವಪ್ಪ ಕುರಹಟ್ಟಿ ಅವರು ಮೆಣಸಿನಕಾಯಿ ವ್ಯಾಪಾರಸ್ಥರು. ವ್ಯಾಪಾರಕ್ಕೆಂದು ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ಆಗಾಗ್ಗೆ ಹೋಗಿ ಬರುತ್ತಿದ್ದರು. ಹೀಗೆ ವ್ಯಾಪಾರಕ್ಕೆಂದು ಹೋದಾಗ 28 ಮಾರ್ಚ್, 2019 ರಂದು ರೂ.7,291/- ಪ್ರೀಮಿಯಮ್ ನೀಡಿ ಸೊರಬ ಅಂಚೆ ಕಛೇರಿಯಿಂದ ಗ್ರಾಮೀಣ ಅಂಚೆ ಜೀವ ವಿಮೆಯನ್ನು ಪಡೆದುಕೊಂಡಿದ್ದರು. ನಾಗಪ್ಪ ಕುರಹಟ್ಟಿ 31 ಜನವರಿ, 2019 ರಂದು ತೀವ್ರ ಹೃದಯಾಘಾತದಿಂದ ಹಿರೆಹರಕುಣಿಯ ತಮ್ಮ ಮನೆಯಲ್ಲಿ ನಿಧನ ಹೊಂದಿದ್ದರು. ಆ ವಿಮೆ ಪಾಲಸಿಗೆ ನಾಗಪ್ಪ ಅವರ ಸಹೋದರನ ಮಗಳು ಅರ್ಚನಾ ನಾಮಿನಿ ಆಗಿದ್ದಳು. ವಿಮೆದಾರ ನಾಗಪ್ಪನ ಮರಣಾನಂತರ (health) ಅರ್ಚನಾ ಹುಬ್ಬಳ್ಳಿಯ ಅಂಚೆ ಕಛೇರಿಗೆ ವಿಮೆ ಪರಿಹಾರ ( postal insurance) ರೂ. 2 ಲಕ್ಷ 50 ಸಾವಿರ ಕೊಡುವಂತೆ ದಾಖಲೆಗಳ ಸಮೇತ ಕ್ಲೇಮ್ ಅರ್ಜಿ ಸಲ್ಲಿಸಿದ್ದರು.

ವಿಮೆ ಮಾಡಿಸುವ ಮೊದಲು ಮೃತ ನಾಗಪ್ಪ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದನು. ಆದರೆ ವಿಮೆ ಪಡೆಯುವಾಗ ಆ ಸಂಗತಿಗಳನ್ನು ಅಂಚೆ ಇಲಾಖೆಗೆ ಬಹಿರಂಗ ಪಡಿಸಿರಲಿಲ್ಲ ಅಂತಾ ಹುಬ್ಬಳ್ಳಿಯ ಅಂಚೆ ಕಛೇರಿಯವರು ಅರ್ಚನಾಳ ಕ್ಲೇಮ್‍ನ್ನು ತಿರಸ್ಕರಿಸಿದ್ದರು. ತನ್ನ ಚಿಕ್ಕಪ್ಪ ಯಾವುದೇ ಕಾಯಿಲೆಯಿಂದ ಬಳಲುತ್ತಿರಲಿಲ್ಲ. ಆದರೆ ಹೃದಯಾಘಾತದಿಂದ ಅವರು ಮೃತಪಟ್ಟಿರುವುದರಿಂದ ಅಂಚೆ ಇಲಾಖೆಯವರ ತೀರ್ಮಾನ ತಪ್ಪು ಮತ್ತು ಇದು ಸೇವಾ ನ್ಯೂನ್ಯತೆ ಆಗಿದೆ ಅಂತಾ ಅಂಚೆ ಇಲಾಖೆ ಮೇಲೆ ಕ್ರಮ ಕೈಗೊಂಡು ಪರಿಹಾರ ಕೊಡಿಸುವಂತೆ ಅರ್ಚನಾ ಗ್ರಾಹಕರ ರಕ್ಷಣಾಕಾಯ್ದೆಯಡಿ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ (District Consumer Disputes Redressal Commission -DCDRC) ದೂರನ್ನು ಸಲ್ಲಿಸಿದ್ದರು.

ಈ ದೂರಿನ ಬಗ್ಗೆ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಅವರು ಮೃತ ನಾಗಪ್ಪ ಕುರಹಟ್ಟಿ ಅವರ ಅಂಚೆ ಜೀವವಿಮೆ ಪಾಲಸಿ, ಅವರು ನಿಧನ ಹೊಂದುವ ಕಾಲಕ್ಕೆ ಚಾಲ್ತಿಯಲ್ಲಿತ್ತು. ಅಂಚೆ ಕಛೇರಿಯವರು ತಮ್ಮ ವಿಮಾ ನಿಯಮಾವಳಿಯಂತೆ ವಿಮಾ ಹಣವನ್ನು ಅರ್ಚನಾಳಿಗೆ ಕೊಡುವುದು ಕರ್ತವ್ಯವಾಗಿರುತ್ತದೆ. ಆದರೆ ಅಂತಹ ಕರ್ತವ್ಯ ನಿರ್ವಹಣೆಯಲ್ಲಿ ಅಂಚೆ ಜೀವವಿಮಾ ಕಛೇರಿ ವಿಫಲವಾಗಿದೆ. ಅವರು ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ಅಭಿಪ್ರಾಯಪಟ್ಟಿದೆ.

Also Read: ಡೆಪಾಸಿಟ್​ ಹಿಂದಿರುಗಿಸದ ಸರಸ್ವತಿ ಕೋ ಆಪ್​​ ಸೊಸೈಟಿಗೆ 11 ಲಕ್ಷ ರೂ ದಂಡ ವಿಧಿಸಿದ ಕೋರ್ಟ್​​

ವಿಮಾ ಪಾಲಸಿಯ ನಿಯಮದಂತೆ ನಾಮಿನಿಯಾದ ಅರ್ಚನಾಳಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ರೂ. 2 ಲಕ್ಷ 50 ಸಾವಿರ ವಿಮಾ ಹಣ ಮತ್ತು ಅದರ ಮೇಲೆ ಕ್ಲೇಮನ್ನು ತಿರಸ್ಕರಿಸಿದ ದಿನದಿಂದ ಶೇ. 8 ರಂತೆ ಬಡ್ಡಿ ಲೆಕ್ಕ ಹಾಕಿ ಸಂದಾಯ ಮಾಡುವಂತೆ ಆಯೋಗ ತನ್ನ ತೀರ್ಪಿನಲ್ಲಿ ಆದೇಶಿಸಿದೆ. ದೂರುದಾರಳಿಗೆ ಆಗಿರುವ ಮಾನಸಿಕ ತೊಂದರೆ ಹಾಗೂ ಅನಾನುಕೂಲಕ್ಕಾಗಿ ರೂ. 50 ಸಾವಿರ ಪರಿಹಾರ ಮತ್ತು ರೂ. 3 ಸಾವಿರ ಪ್ರಕರಣದ ಖರ್ಚು ವೆಚ್ಚವನ್ನು ಕೊಡುವಂತೆ ಅಂಚೆ ಜೀವವಿಮೆ ಕಛೇರಿಯವರಿಗೆ ಆದೇಶಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us