AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ; ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ

Dharawad News; ಠೇವಣಿದಾರ ವಿರೂಪಾಕ್ಷಪ್ಪನ ಮಗ ರಾಜೇಂದ್ರ ಮತ್ತು ಮಗಳು ಭುವನೇಶ್ವರಿ ಬ್ಯಾಂಕಿಗೆ ವಕೀಲರ ಮೂಲಕ ನೋಟಿಸ್ ಕೊಡಿಸಿ ದೂರುದಾರನಿಗೆ ಠೇವಣಿ ಹಣ ನೀಡಬಾರದೆಂದು ಆಕ್ಷೇಪಿಸಿದ್ದರು. ಅವರ ಆಕ್ಷೇಪಣೆಯನ್ನು ಪರಿಗಣಿಸಿ ಬ್ಯಾಂಕಿನವರು ದೂರುದಾರರಿಗೆ ಠೇವಣಿ ಹಣ ತಡೆಹಿಡಿದಿದ್ದರು.

ಧಾರವಾಡ; ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ
ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 09, 2023 | 7:25 PM

Share

ಧಾರವಾಡ, ಆಗಸ್ಟ್ 9: ಧಾರವಾಡ ನಗರದ (Dharawad) ಗೌಡರ ಓಣಿ ನಿವಾಸಿ ಕಿರಣ ಗಿರಿಯಪ್ಪನವರ್ ಅವರ ಅಜ್ಜ ವಿರೂಪಾಕ್ಷಪ್ಪ ಗಿರಿಯಪ್ಪನವರ್ ಎಂಬುವವರು ಧಾರವಾಡದ ಕೆಸಿಸಿ ಬ್ಯಾಂಕಿನಲ್ಲಿ (KCC Bank) 9 ಲಕ್ಷ ರೂ.ಗಳ ಠೇವಣಿ ಇರಿಸಿದ್ದರು. ಈ ಠೇವಣಿ ಅವಧಿ 2023 ರ ಜುಲೈ 27 ರಂದು ಮುಕ್ತಾಯವಾಗುವುದಿತ್ತು. ಈ ಅವಧಿಯೊಳಗೆ ವಿರೂಪಾಕ್ಷಪ್ಪ 2022 ರ ಜೂನ್ 17 ರಂದು ನಿಧನ ಹೊಂದಿದರು. ಅವರು ಠೇವಣಿಗೆ ಮೊಮ್ಮಗ ಕಿರಣ್‌ನನ್ನು ನಾಮ ನಿರ್ದೇಶನ ಮಾಡಿದ್ದರು. ಹೀಗಾಗಿ ಅಜ್ಜ ಇಟ್ಟಿದ್ದ ಠೇವಣಿ ಹಣ ಕೊಡುವಂತೆ ಕಿರಣ್ ಬ್ಯಾಂಕಿಗೆ ಅರ್ಜಿ ಹಾಕಿದ್ದರು. ಬ್ಯಾಂಕಿನವರು ಠೇವಣಿ ಹಣವನ್ನು ಕಿರಣ್ ಖಾತೆಗೆ ವರ್ಗಾಯಿಸಿದ್ದರು.

ಈ ಮಧ್ಯೆ ಠೇವಣಿದಾರ ವಿರೂಪಾಕ್ಷಪ್ಪನ ಮಗ ರಾಜೇಂದ್ರ ಮತ್ತು ಮಗಳು ಭುವನೇಶ್ವರಿ ಬ್ಯಾಂಕಿಗೆ ವಕೀಲರ ಮೂಲಕ ನೋಟಿಸ್ ಕೊಡಿಸಿ ದೂರುದಾರನಿಗೆ ಠೇವಣಿ ಹಣ ನೀಡಬಾರದೆಂದು ಆಕ್ಷೇಪಿಸಿದ್ದರು. ಅವರ ಆಕ್ಷೇಪಣೆಯನ್ನು ಪರಿಗಣಿಸಿ ಬ್ಯಾಂಕಿನವರು ದೂರುದಾರರಿಗೆ ಠೇವಣಿ ಹಣ ತಡೆಹಿಡಿದಿದ್ದರು. ಇದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಬ್ಯಾಂಕಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಿರಣ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಧಾರವಾಡ ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಗೆ ಭೂಸ್ವಾಧೀನದ್ದೇ ದೊಡ್ಡ ಸಮಸ್ಯೆ

ಈ ದೂರಿನ ಬಗ್ಗೆ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಸದಸ್ಯ ಪ್ರಭು ಹಿರೇಮಠ ಅವರು ದೂರುದಾರ ಠೇವಣಿ ಹಣಕ್ಕೆ ಸಂಬಂಧಿಸಿದಂತೆ ನಾಮ ನಿರ್ದೇಶಿತ ಇದ್ದಾನೆ. ಕಾರಣ ಠೇವಣಿ ಹಣ ನಾಮಿನಿಯಾದ ದೂರುದಾರನಿಗೆ ಸಲ್ಲಬೇಕಾಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದ್ದಾರೆ. 3 ತಿಂಗಳೊಳಗಾಗಿ ಆ ಇಬ್ಬರೂ ಆಕ್ಷೇಪಿತರು ಸಂಬಂಧಿಸಿದ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ಹೂಡಿ ತಮಗೂ ಆ ಠೇವಣಿ ಹಣದಲ್ಲಿ ಇರುವ ಹಕ್ಕಿನ ಬಗ್ಗೆ ಆದೇಶ ಪಡೆದು ಬ್ಯಾಂಕಿಗೆ ಹಾಜರುಪಡಿಸುವಂತೆ ಸೂಚಿಸಿದೆ. ಅಲ್ಲದೇ ಅವರಿಬ್ಬರಿಗೂ ನೋಟಿಸ್ ನೀಡುವಂತೆ ಬ್ಯಾಂಕಿಗೆ ಆಯೋಗ ಸೂಚಿಸಿದೆ. ಮೂರು ತಿಂಗಳೊಳಗಾಗಿ ಠೇವಣಿಯಲ್ಲಿ ತಮ್ಮ ಹಕ್ಕನ್ನು ಸಾಬೀತುಪಡಿಸಿ, ಸಂಬಂಧಿಸಿದ ನ್ಯಾಯಾಲಯದಿಂದ ಆಕ್ಷೇಪಿತರು ಆದೇಶ ತರಲು ವಿಫಲರಾದಲ್ಲಿ ನಾಮಿನಿಯಾದ ದೂರುದಾರನಿಗೆ 9 ಲಕ್ಷ ರೂ. ಠೇವಣಿ ಹಣ ಮತ್ತು ಅದರ ಮೇಲೆ ಬರುವ ಬಡ್ಡಿ ಸೇರಿಸಿ ನೀಡುವಂತೆ ಬ್ಯಾಂಕಿಗೆ ಆಯೋಗ ಆದೇಶಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು