AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ; ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ

Dharawad News; ಠೇವಣಿದಾರ ವಿರೂಪಾಕ್ಷಪ್ಪನ ಮಗ ರಾಜೇಂದ್ರ ಮತ್ತು ಮಗಳು ಭುವನೇಶ್ವರಿ ಬ್ಯಾಂಕಿಗೆ ವಕೀಲರ ಮೂಲಕ ನೋಟಿಸ್ ಕೊಡಿಸಿ ದೂರುದಾರನಿಗೆ ಠೇವಣಿ ಹಣ ನೀಡಬಾರದೆಂದು ಆಕ್ಷೇಪಿಸಿದ್ದರು. ಅವರ ಆಕ್ಷೇಪಣೆಯನ್ನು ಪರಿಗಣಿಸಿ ಬ್ಯಾಂಕಿನವರು ದೂರುದಾರರಿಗೆ ಠೇವಣಿ ಹಣ ತಡೆಹಿಡಿದಿದ್ದರು.

ಧಾರವಾಡ; ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ
ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 09, 2023 | 7:25 PM

Share

ಧಾರವಾಡ, ಆಗಸ್ಟ್ 9: ಧಾರವಾಡ ನಗರದ (Dharawad) ಗೌಡರ ಓಣಿ ನಿವಾಸಿ ಕಿರಣ ಗಿರಿಯಪ್ಪನವರ್ ಅವರ ಅಜ್ಜ ವಿರೂಪಾಕ್ಷಪ್ಪ ಗಿರಿಯಪ್ಪನವರ್ ಎಂಬುವವರು ಧಾರವಾಡದ ಕೆಸಿಸಿ ಬ್ಯಾಂಕಿನಲ್ಲಿ (KCC Bank) 9 ಲಕ್ಷ ರೂ.ಗಳ ಠೇವಣಿ ಇರಿಸಿದ್ದರು. ಈ ಠೇವಣಿ ಅವಧಿ 2023 ರ ಜುಲೈ 27 ರಂದು ಮುಕ್ತಾಯವಾಗುವುದಿತ್ತು. ಈ ಅವಧಿಯೊಳಗೆ ವಿರೂಪಾಕ್ಷಪ್ಪ 2022 ರ ಜೂನ್ 17 ರಂದು ನಿಧನ ಹೊಂದಿದರು. ಅವರು ಠೇವಣಿಗೆ ಮೊಮ್ಮಗ ಕಿರಣ್‌ನನ್ನು ನಾಮ ನಿರ್ದೇಶನ ಮಾಡಿದ್ದರು. ಹೀಗಾಗಿ ಅಜ್ಜ ಇಟ್ಟಿದ್ದ ಠೇವಣಿ ಹಣ ಕೊಡುವಂತೆ ಕಿರಣ್ ಬ್ಯಾಂಕಿಗೆ ಅರ್ಜಿ ಹಾಕಿದ್ದರು. ಬ್ಯಾಂಕಿನವರು ಠೇವಣಿ ಹಣವನ್ನು ಕಿರಣ್ ಖಾತೆಗೆ ವರ್ಗಾಯಿಸಿದ್ದರು.

ಈ ಮಧ್ಯೆ ಠೇವಣಿದಾರ ವಿರೂಪಾಕ್ಷಪ್ಪನ ಮಗ ರಾಜೇಂದ್ರ ಮತ್ತು ಮಗಳು ಭುವನೇಶ್ವರಿ ಬ್ಯಾಂಕಿಗೆ ವಕೀಲರ ಮೂಲಕ ನೋಟಿಸ್ ಕೊಡಿಸಿ ದೂರುದಾರನಿಗೆ ಠೇವಣಿ ಹಣ ನೀಡಬಾರದೆಂದು ಆಕ್ಷೇಪಿಸಿದ್ದರು. ಅವರ ಆಕ್ಷೇಪಣೆಯನ್ನು ಪರಿಗಣಿಸಿ ಬ್ಯಾಂಕಿನವರು ದೂರುದಾರರಿಗೆ ಠೇವಣಿ ಹಣ ತಡೆಹಿಡಿದಿದ್ದರು. ಇದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಬ್ಯಾಂಕಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಿರಣ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಧಾರವಾಡ ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಗೆ ಭೂಸ್ವಾಧೀನದ್ದೇ ದೊಡ್ಡ ಸಮಸ್ಯೆ

ಈ ದೂರಿನ ಬಗ್ಗೆ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಸದಸ್ಯ ಪ್ರಭು ಹಿರೇಮಠ ಅವರು ದೂರುದಾರ ಠೇವಣಿ ಹಣಕ್ಕೆ ಸಂಬಂಧಿಸಿದಂತೆ ನಾಮ ನಿರ್ದೇಶಿತ ಇದ್ದಾನೆ. ಕಾರಣ ಠೇವಣಿ ಹಣ ನಾಮಿನಿಯಾದ ದೂರುದಾರನಿಗೆ ಸಲ್ಲಬೇಕಾಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದ್ದಾರೆ. 3 ತಿಂಗಳೊಳಗಾಗಿ ಆ ಇಬ್ಬರೂ ಆಕ್ಷೇಪಿತರು ಸಂಬಂಧಿಸಿದ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ಹೂಡಿ ತಮಗೂ ಆ ಠೇವಣಿ ಹಣದಲ್ಲಿ ಇರುವ ಹಕ್ಕಿನ ಬಗ್ಗೆ ಆದೇಶ ಪಡೆದು ಬ್ಯಾಂಕಿಗೆ ಹಾಜರುಪಡಿಸುವಂತೆ ಸೂಚಿಸಿದೆ. ಅಲ್ಲದೇ ಅವರಿಬ್ಬರಿಗೂ ನೋಟಿಸ್ ನೀಡುವಂತೆ ಬ್ಯಾಂಕಿಗೆ ಆಯೋಗ ಸೂಚಿಸಿದೆ. ಮೂರು ತಿಂಗಳೊಳಗಾಗಿ ಠೇವಣಿಯಲ್ಲಿ ತಮ್ಮ ಹಕ್ಕನ್ನು ಸಾಬೀತುಪಡಿಸಿ, ಸಂಬಂಧಿಸಿದ ನ್ಯಾಯಾಲಯದಿಂದ ಆಕ್ಷೇಪಿತರು ಆದೇಶ ತರಲು ವಿಫಲರಾದಲ್ಲಿ ನಾಮಿನಿಯಾದ ದೂರುದಾರನಿಗೆ 9 ಲಕ್ಷ ರೂ. ಠೇವಣಿ ಹಣ ಮತ್ತು ಅದರ ಮೇಲೆ ಬರುವ ಬಡ್ಡಿ ಸೇರಿಸಿ ನೀಡುವಂತೆ ಬ್ಯಾಂಕಿಗೆ ಆಯೋಗ ಆದೇಶಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ