AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳಿತಾಯ ಖಾತೆಯ ಹಣ ನೀಡದ ಸೊಸೈಟಿಗೆ ದಂಡ: ಹುಬ್ಬಳ್ಳಿ ಮಹಿಳೆಗೆ ಸಿಕ್ತು ನ್ಯಾಯ!

Dharwad Consumer Commission: ಧಾರವಾಡದ ವಿ.ಎಸ್. ಸಾಧುನವರ್ ಸೊಸೈಟಿಯು ಓರ್ವ ಗ್ರಾಹಕರಿಗೆ ಅವರ 2.4 ಲಕ್ಷ ರೂ ಉಳಿತಾಯ ಹಣವನ್ನು ನೀಡಲು ನಿರಾಕರಿಸಿದ ಹಿನ್ನೆಲೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಸೊಸೈಟಿಗೆ 60 ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದ ಸುದೀರ್ಘ ವಿಚಾರಣೆ ಮಾಡಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಪೀಠ ಈ ಮಹತ್ವದ ಆದೇಶ ನೀಡಿದೆ.

ಉಳಿತಾಯ ಖಾತೆಯ ಹಣ ನೀಡದ ಸೊಸೈಟಿಗೆ ದಂಡ: ಹುಬ್ಬಳ್ಳಿ ಮಹಿಳೆಗೆ ಸಿಕ್ತು ನ್ಯಾಯ!
ಪ್ರಾತಿನಿಧಿಕ ಚಿತ್ರImage Credit source: Getty images
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Jul 23, 2026 | 7:29 PM

Share

ಮುಖ್ಯಾಂಶಗಳು

  • ಗ್ರಾಹಕನಿಗೆ ಉಳಿತಾಯ ಖಾತೆಯಲ್ಲಿದ್ದ ಹಣ ನೀಡದ ಸೊಸೈಟಿಗೆ ದಂಡ
  • ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಿಂದ ಆದೇಶ
  • ಬಡಿ ಸಮೇತ ಖಾತೆಯಲ್ಲಿಟ್ಟ 2.4 ಲಕ್ಷ ರೂ ಮರಳಿಸುವಂತೆ ಆದೇಶ

ಧಾರವಾಡ, ಜುಲೈ 23: ಗ್ರಾಹಕರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣವನ್ನು ಹಿಂಪಡೆಯಲು ಹೋದಾಗ ಹಣ ನೀಡದೆ ನಿರಾಕರಿಸಿದ ಧಾರವಾಡದ ವಿ.ಎಸ್. ಸಾಧುನವರ್ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗವು (Dharwad Consumer Commission) ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಜೊತೆಗೆ ದಂಡ (fine) ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ. ಪರಿಹಾರವಾಗಿ 50 ಸಾವಿರ ರೂ ಮತ್ತು ಪ್ರಕರಣದ ವೆಚ್ಚ 10 ಸಾವಿರ ರೂ ಸೇರಿ ಒಟ್ಟು 60 ಸಾವಿರ ರೂ ನೀಡುವಂತೆ ಖಡಕ್​ ಸೂಚನೆ ನೀಡಿದೆ.

ಏನಿದು ಪ್ರಕರಣ?

ಹುಬ್ಬಳ್ಳಿಯ ನಿವಾಸಿ ಕೋಮಲಾ ಜಾರತರಗರ್ ಎಂಬುವವರು ಧಾರವಾಡದ ವಿ.ಎಸ್. ಸಾಧುನವರ್ ಸೊಸೈಟಿಯ ತಮ್ಮ ಉಳಿತಾಯ ಖಾತೆಯಲ್ಲಿ 2.40 ಲಕ್ಷ ರೂ ಹಣ ಇಟ್ಟಿದ್ದರು. ಅಗತ್ಯವಿದ್ದಾಗ ತಮ್ಮ ಖಾತೆಯಲ್ಲಿದ್ದ ಹಣವನ್ನು ನೀಡುವಂತೆ ಕೋಮಲಾ ಸೊಸೈಟಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ, ಹಣ ನೀಡಲು ಆಡಳಿತ ಮಂಡಳಿ ನಿರಾಕರಿಸಿತ್ತು. ಇದರಿಂದ ಬೇಸತ್ತ ಕೋಮಲಾ 2026ರ ಫೆಬ್ರವರಿ 2ರಂದು ಸೊಸೈಟಿ ಮತ್ತು ಅದರ ಅಧ್ಯಕ್ಷ ವಿ.ಎಸ್. ಸಾಧುನವರ ವಿರುದ್ಧ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಕಲಬುರಗಿಯಲ್ಲಿ 300ಕ್ಕೂ ಅಧಿಕ ಮನೆಗಳ ತೆರವಿಗೆ ಕೋರ್ಟ್ ಆದೇಶ: ಆತಂಕದಲ್ಲಿ ನಿವಾಸಿಗಳು; ಆಗಿದ್ದೇನು?

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ ಅವರನ್ನೊಳಗೊಂಡ ಪೀಠವು ಗ್ರಾಹಕರ ಪರ ತೀರ್ಪು ನೀಡಿದೆ. ಕೋಮಲಾ ಖಾತೆಯಲ್ಲಿದ್ದ 2.40 ಲಕ್ಷ ರೂ ಹಣವನ್ನು ಬಡ್ಡಿ ಸಮೇತ ತಕ್ಷಣವೇ ಮರಳಿಸುವಂತೆ ಸೂಚಿಸಿದ್ದಾರೆ.

60 ಸಾವಿರ ರೂ ಪರಿಹಾರ ನೀಡುವಂತೆ ಗ್ರಾಹಕರ ಆಯೋಗ ಆದೇಶ

ಅಷ್ಟೇ ಅಲ್ಲದೆ ಗ್ರಾಹಕರಿಗೆ 50 ಸಾವಿರ ರೂ ಪರಿಹಾರ ಹಾಗೂ ಪ್ರಕರಣದ ಕಾನೂನು ವೆಚ್ಚವಾಗಿ 10 ಸಾವಿರ ರೂ ಸೇರಿದಂತೆ ಒಟ್ಟು 60 ಸಾವಿರ ರೂ ಹೆಚ್ಚುವರಿಯಾಗಿ ಪಾವತಿಸುವಂತೆ ವಿ.ಎಸ್.ಸಾಧುನವರ್ ಸೊಸೈಟಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:28 pm, Thu, 23 July 26

Follow Us
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!