AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಬೆಳೆ ವಿಮೆ ಪರಿಹಾರ ನೀಡದ ಬ್ಯಾಂಕ್‌ಗೆ 2 ಲಕ್ಷ ರೂ. ದಂಡ ವಿಧಿಸಿದ ಗ್ರಾಹಕರ ನ್ಯಾಯಾಲಯ

ದೇವರಹುಬ್ಬಳ್ಳಿಯ ಈರಪ್ಪ ಬಸವಣೆಪ್ಪ ಕುಂದಗೋಳ ಉಳಿತಾಯ ಖಾತೆಯಿಂದ ನಿಗದಿಯ ಕೆ.ವಿ.ಜಿ. ಬ್ಯಾಂಕಿನವರು ರೂ.3321.32 ಬೆಳೆ ವಿಮೆ ಪ್ರಿಮಿಯಮ್​ಗಾಗಿ ಉಳಿತಾಯ ಖಾತೆಯಿಂದ ಕಡಿತಗೊಳಿಸಿದ್ದರು. ಆದರೆ ಕಡಿತಗೊಳಿಸಿದ ಪ್ರಿಮಿಯಮ್ ಹಣವನ್ನು ಕೆ.ವಿ.ಜಿ. ಬ್ಯಾಂಕಿನವರು ವಿಮಾ ಕಂಪನಿಗೆ ಕಳುಹಿಸಿರಲಿಲ್ಲ. ಹೀಗಾಗಿ ರೈತರಿಗೆ ಪ್ರಿಮಿಯಂ ಹಣ ಬಂದಿರಲಿಲ್ಲ. ಈ ಪ್ರಕರಣದಲ್ಲಿ ನ್ಯಾಯ ಕೋರಿ ರೈತ ಈರಪ್ಪ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಧಾರವಾಡ: ಬೆಳೆ ವಿಮೆ ಪರಿಹಾರ ನೀಡದ ಬ್ಯಾಂಕ್‌ಗೆ 2 ಲಕ್ಷ ರೂ. ದಂಡ ವಿಧಿಸಿದ ಗ್ರಾಹಕರ ನ್ಯಾಯಾಲಯ
ಬೆಳೆ ವಿಮೆ ಪರಿಹಾರ ನೀಡದ ಬ್ಯಾಂಕ್‌ಗೆ 2 ಲಕ್ಷ ರೂ. ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ನ್ಯಾಯಾಲಯ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: Rakesh Nayak Manchi|

Updated on: Dec 04, 2023 | 8:59 PM

Share

ಧಾರವಾಡ, ಡಿ.4: ಬೆಳೆ ವಿಮೆ ಪರಿಹಾರ ನೀಡದ ನಿಗದಿಯ ಕೆ.ವಿ.ಜಿ. ಬ್ಯಾಂಕಿಗೆ 2.59 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ (Dharwad) ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಅಲ್ಲದೆ, ದೂರುದಾರ ಈಶ್ವರಪ್ಪ ಬಸವಣೆಪ್ಪ ಕುಂದಗೋಳ ಅವರಿಗೆ ಪರಿಹಾರ ನೀಡುವಂತೆ ಸೂಚಿಸಿದೆ.

ದೇವರಹುಬ್ಬಳ್ಳಿಯ ಈರಪ್ಪ ಬಸವಣೆಪ್ಪ ಕುಂದಗೋಳ ಅವರು ನಿಗದಿಯ ಕೆವಿಜಿ ಬ್ಯಾಂಕ್ ಶಾಖೆಯಲ್ಲಿ ಉಳಿತಾಯ ಖಾತೆ ಹೊಂದಿದ್ದರು. 2016-17ನೇ ಮುಂಗಾರು ಹಂಗಾಮಿನ ಭತ್ತದ ಬೆಳೆಗೆ ಬ್ಯಾಂಕ್ ಮೂಲಕ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ್ದರು. ಉಳಿತಾಯ ಖಾತೆಯಲ್ಲಿ ರೂ.1.35 ಗಿಂತ ಹೆಚ್ಚು ಹಣ ಜಮಾವಿತ್ತು.

2017ರ ಜುಲೈ 13ರಂದು ದೂರುದಾರರ ಉಳಿತಾಯ ಖಾತೆಯಿಂದ ನಿಗದಿಯ ಕೆ.ವಿ.ಜಿ. ಬ್ಯಾಂಕಿನವರು ರೂ.3321.32 ಬೆಳೆ ವಿಮೆ ಪ್ರಿಮಿಯಮ್​ಗಾಗಿ ಉಳಿತಾಯ ಖಾತೆಯಿಂದ ಕಡಿತಗೊಳಿಸಿದ್ದರು. ಆದರೆ ಕಡಿತಗೊಳಿಸಿದ ಪ್ರಿಮಿಯಮ್ ಹಣವನ್ನು ಕೆ.ವಿ.ಜಿ. ಬ್ಯಾಂಕಿನವರು ವಿಮಾ ಕಂಪನಿಗೆ ಕಳುಹಿಸಿರಲಿಲ್ಲ. ಹೀಗಾಗಿ ರೈತರಿಗೆ ಪ್ರಿಮಿಯಂ ಹಣ ಬಂದಿರಲಿಲ್ಲ. ಈ ಪ್ರಕರಣದಲ್ಲಿ ನ್ಯಾಯ ಕೋರಿ ರೈತ ಈರಪ್ಪ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಧಾರವಾಡ ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಿಗೆ ಪಿಡಿಒಗಳೇ ಇಲ್ಲ ! ಕಣ್ಮುಚ್ಚಿ ಕುಳಿತ ಸರ್ಕಾರ

ಪ್ರಕರಣದ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ವಿಮಾ ಪ್ರಿಮಿಯಂ ಬ್ಯಾಂಕಿನವರು ಕಡಿತಗೊಳಿಸಿದ್ದರೂ ಹಣವನ್ನು ಅವರು ವಿಮಾ ಕಂಪನಿಗೆ ಕಳುಹಿಸದೇ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ದೂರುದಾರರು ತಮ್ಮ ಬೆಳೆಯ ಮೌಲ್ಯವನ್ನು ರೂ.1.64,937 ತೋರಿಸಿ ವಿಮೆ ಮಾಡಿಸಿದ್ದರು. ಆದ್ದರಿಂದ ರೈತರ ಈರಪ್ಪ ಅವರಿಗೆ ಬ್ಯಾಂಕಿನವರು ರೂ.1.50 ಬೆಳೆ ಪರಿಹಾರ ಮತ್ತು ಅದರ ಮೇಲೆ 2016 ರಿಂದ ಶೇ. 8ರಂತೆ ಬಡ್ಡಿ ರೂ. 49 ಸಾವಿರ ಒಟ್ಟು ರೂ.1.99 ಲಕ್ಷ ಪರಿಹಾರ ನೀಡುವಂತೆ ಕೆ.ವಿ.ಜಿ. ಬ್ಯಾಂಕಿಗೆ ನಿರ್ದೇಶಿಸಿದೆ.

ದೂರುದಾರರಿಗೆ ಆಗಿರುವ ತೊಂದರೆ ಹಾಗೂ ಮಾನಸಿಕ ಹಿಂಸೆಗಾಗಿ ರೂ. 50 ಸಾವಿರ ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚವೆಂದು ರೂ. 10 ಸಾವಿರಗಳನ್ನು ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಬ್ಯಾಂಕಿಗೆ ಆಯೋಗ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ