AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಧಾರವಾಡದಲ್ಲಿ ಅಪಾರ ಹಾನಿ; ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡದಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದಾರೆ. ಮಳೆ ಅಕಾಲಿಕ ಮಳೆಯಿಂದ 188 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 22 ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 7390 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 1210 ಹೆಕ್ಟೇರ್ನಲ್ಲಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಮಳೆಗೆ ಧಾರವಾಡದಲ್ಲಿ ಅಪಾರ ಹಾನಿ; ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ
ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ
TV9 Web
| Edited By: |

Updated on: Nov 19, 2021 | 3:30 PM

Share

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಎನ್ನದೆ ನಿರಂತರ ಮಳೆ ಸುರಿಯುತ್ತಿದೆ. ಒಮ್ಮೆ ಜಿಟಿ ಜಿಟಿ ಮಳೆಯಾದ್ರೆ ಮತ್ತೊಮ್ಮೆ ಜೋರಾದ ಮಳೆಯಿಂದ ಸೂರ್ಯನ ದರ್ಶನವೇ ಆಗುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಧಾರವಾಡದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಳೆ ಹಾನಿ ಬಗ್ಗೆ ವಿವರಣೆ ನೀಡಿದ್ದಾರೆ.

ಧಾರವಾಡದಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದಾರೆ. ಮಳೆ ಅಕಾಲಿಕ ಮಳೆಯಿಂದ 188 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 22 ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 7390 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 1210 ಹೆಕ್ಟೇರ್ನಲ್ಲಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಸುಮಾರು 28 ಕಿಲೋಮೀಟರ್ನಷ್ಟು ರಸ್ತೆಗಳು ಹಾಳಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ವಾಡಿಕೆಯಂತೆ 26.3 ಮೀ.ಮೀ ಮಳೆಯಾಗಬೇಕಿತ್ತು. ಆದರೆ 70.1 ಮೀ‌ಮೀ ಮಳೆಯಾಗಿದೆ. ಶೇ. 167ರಷ್ಟು ಜಾಸ್ತಿ ಮಳೆಯಾಗಿದೆ. ಅಳ್ನಾವರ, ಧಾರವಾಡ ತಾಲೂಕಿನಲ್ಲಿ ಹೆಚ್ಚು ಮಳೆ ಆಗಿದೆ. ಸಾಕಷ್ಟು ನಷ್ಟವಾಗಿದೆ. ಹೊಲ್ತಿಕೋಟೆ ಗ್ರಾಮದ ಕೆರೆ ಒಡೆದಿದೆ. ಅದನ್ನು 15 ಲಕ್ಷ ರೂ‌ದಲ್ಲಿ ತಾತ್ಕಾಲಿಕ ರಿಪೇರಿ ಮಾಡಲಾಗುವುದು. ಇನ್ನೂ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಹೀಗಾಗಿ ಇನ್ನೂ ಹೆಚ್ಚಿನ ಬೆಳೆ ಹಾನಿ ಆಗುವ ಸಾಧ್ಯತೆ ಇದೆ ಎಂದರು.

ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡಲು ನಿರ್ಧಾರ ಇನ್ನು ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಅವಾಂತರಗಳು ಎದುರಾಗುತ್ತಿದ್ದು ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡಲು ನಿರ್ಧಾರ ಮಾಡಲಾಗಿದೆ. ಶಾಲೆಗೆ ಹೋಗಲು ಸಮಸ್ಯೆಯಾದ ಕಡೆ ರಜೆ ಕೊಡ್ತೇವೆ. ಹಳ್ಳ ಇದ್ದ ಕಡೆ ನೀರು ಕಡಿಮೆಯಾಗೋವರೆಗೂ ರಜೆ. ಅಂತಹ ಶಾಲೆಗಳಿಗೆ ರಜೆ ಕೊಡಲು ಡಿಡಿಪಿಐಗೆ ಸೂಚಿಸಲಾಗಿದೆ.

ಇದನ್ನೂ ಓದಿ: 40,000ಕ್ಕೂ ಹೆಚ್ಚು ತಮಿಳು ಬ್ರಾಹ್ಮಣರಿಗೆ ಸಿಗುತ್ತಿಲ್ಲ ವಧು; ಉತ್ತರ ಪ್ರದೇಶ, ಬಿಹಾರಕ್ಕೂ ವ್ಯಾಪಿಸಿದ ವಧು ಅನ್ವೇಷಣೆ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್