AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಧಾರವಾಡದಲ್ಲಿ ಅಪಾರ ಹಾನಿ; ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡದಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದಾರೆ. ಮಳೆ ಅಕಾಲಿಕ ಮಳೆಯಿಂದ 188 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 22 ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 7390 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 1210 ಹೆಕ್ಟೇರ್ನಲ್ಲಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಮಳೆಗೆ ಧಾರವಾಡದಲ್ಲಿ ಅಪಾರ ಹಾನಿ; ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ
ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ
Follow us
TV9 Web
| Updated By: ಆಯೇಷಾ ಬಾನು

Updated on: Nov 19, 2021 | 3:30 PM

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಎನ್ನದೆ ನಿರಂತರ ಮಳೆ ಸುರಿಯುತ್ತಿದೆ. ಒಮ್ಮೆ ಜಿಟಿ ಜಿಟಿ ಮಳೆಯಾದ್ರೆ ಮತ್ತೊಮ್ಮೆ ಜೋರಾದ ಮಳೆಯಿಂದ ಸೂರ್ಯನ ದರ್ಶನವೇ ಆಗುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಧಾರವಾಡದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಳೆ ಹಾನಿ ಬಗ್ಗೆ ವಿವರಣೆ ನೀಡಿದ್ದಾರೆ.

ಧಾರವಾಡದಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದಾರೆ. ಮಳೆ ಅಕಾಲಿಕ ಮಳೆಯಿಂದ 188 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 22 ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 7390 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 1210 ಹೆಕ್ಟೇರ್ನಲ್ಲಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಸುಮಾರು 28 ಕಿಲೋಮೀಟರ್ನಷ್ಟು ರಸ್ತೆಗಳು ಹಾಳಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ವಾಡಿಕೆಯಂತೆ 26.3 ಮೀ.ಮೀ ಮಳೆಯಾಗಬೇಕಿತ್ತು. ಆದರೆ 70.1 ಮೀ‌ಮೀ ಮಳೆಯಾಗಿದೆ. ಶೇ. 167ರಷ್ಟು ಜಾಸ್ತಿ ಮಳೆಯಾಗಿದೆ. ಅಳ್ನಾವರ, ಧಾರವಾಡ ತಾಲೂಕಿನಲ್ಲಿ ಹೆಚ್ಚು ಮಳೆ ಆಗಿದೆ. ಸಾಕಷ್ಟು ನಷ್ಟವಾಗಿದೆ. ಹೊಲ್ತಿಕೋಟೆ ಗ್ರಾಮದ ಕೆರೆ ಒಡೆದಿದೆ. ಅದನ್ನು 15 ಲಕ್ಷ ರೂ‌ದಲ್ಲಿ ತಾತ್ಕಾಲಿಕ ರಿಪೇರಿ ಮಾಡಲಾಗುವುದು. ಇನ್ನೂ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಹೀಗಾಗಿ ಇನ್ನೂ ಹೆಚ್ಚಿನ ಬೆಳೆ ಹಾನಿ ಆಗುವ ಸಾಧ್ಯತೆ ಇದೆ ಎಂದರು.

ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡಲು ನಿರ್ಧಾರ ಇನ್ನು ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಅವಾಂತರಗಳು ಎದುರಾಗುತ್ತಿದ್ದು ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡಲು ನಿರ್ಧಾರ ಮಾಡಲಾಗಿದೆ. ಶಾಲೆಗೆ ಹೋಗಲು ಸಮಸ್ಯೆಯಾದ ಕಡೆ ರಜೆ ಕೊಡ್ತೇವೆ. ಹಳ್ಳ ಇದ್ದ ಕಡೆ ನೀರು ಕಡಿಮೆಯಾಗೋವರೆಗೂ ರಜೆ. ಅಂತಹ ಶಾಲೆಗಳಿಗೆ ರಜೆ ಕೊಡಲು ಡಿಡಿಪಿಐಗೆ ಸೂಚಿಸಲಾಗಿದೆ.

ಇದನ್ನೂ ಓದಿ: 40,000ಕ್ಕೂ ಹೆಚ್ಚು ತಮಿಳು ಬ್ರಾಹ್ಮಣರಿಗೆ ಸಿಗುತ್ತಿಲ್ಲ ವಧು; ಉತ್ತರ ಪ್ರದೇಶ, ಬಿಹಾರಕ್ಕೂ ವ್ಯಾಪಿಸಿದ ವಧು ಅನ್ವೇಷಣೆ

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ