Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಧಾರವಾಡದಲ್ಲಿ ಅಪಾರ ಹಾನಿ; ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡದಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದಾರೆ. ಮಳೆ ಅಕಾಲಿಕ ಮಳೆಯಿಂದ 188 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 22 ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 7390 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 1210 ಹೆಕ್ಟೇರ್ನಲ್ಲಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಮಳೆಗೆ ಧಾರವಾಡದಲ್ಲಿ ಅಪಾರ ಹಾನಿ; ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ
ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ
Follow us
TV9 Web
| Updated By: ಆಯೇಷಾ ಬಾನು

Updated on: Nov 19, 2021 | 3:30 PM

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಎನ್ನದೆ ನಿರಂತರ ಮಳೆ ಸುರಿಯುತ್ತಿದೆ. ಒಮ್ಮೆ ಜಿಟಿ ಜಿಟಿ ಮಳೆಯಾದ್ರೆ ಮತ್ತೊಮ್ಮೆ ಜೋರಾದ ಮಳೆಯಿಂದ ಸೂರ್ಯನ ದರ್ಶನವೇ ಆಗುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಧಾರವಾಡದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಳೆ ಹಾನಿ ಬಗ್ಗೆ ವಿವರಣೆ ನೀಡಿದ್ದಾರೆ.

ಧಾರವಾಡದಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದಾರೆ. ಮಳೆ ಅಕಾಲಿಕ ಮಳೆಯಿಂದ 188 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 22 ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 7390 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 1210 ಹೆಕ್ಟೇರ್ನಲ್ಲಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಸುಮಾರು 28 ಕಿಲೋಮೀಟರ್ನಷ್ಟು ರಸ್ತೆಗಳು ಹಾಳಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ವಾಡಿಕೆಯಂತೆ 26.3 ಮೀ.ಮೀ ಮಳೆಯಾಗಬೇಕಿತ್ತು. ಆದರೆ 70.1 ಮೀ‌ಮೀ ಮಳೆಯಾಗಿದೆ. ಶೇ. 167ರಷ್ಟು ಜಾಸ್ತಿ ಮಳೆಯಾಗಿದೆ. ಅಳ್ನಾವರ, ಧಾರವಾಡ ತಾಲೂಕಿನಲ್ಲಿ ಹೆಚ್ಚು ಮಳೆ ಆಗಿದೆ. ಸಾಕಷ್ಟು ನಷ್ಟವಾಗಿದೆ. ಹೊಲ್ತಿಕೋಟೆ ಗ್ರಾಮದ ಕೆರೆ ಒಡೆದಿದೆ. ಅದನ್ನು 15 ಲಕ್ಷ ರೂ‌ದಲ್ಲಿ ತಾತ್ಕಾಲಿಕ ರಿಪೇರಿ ಮಾಡಲಾಗುವುದು. ಇನ್ನೂ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಹೀಗಾಗಿ ಇನ್ನೂ ಹೆಚ್ಚಿನ ಬೆಳೆ ಹಾನಿ ಆಗುವ ಸಾಧ್ಯತೆ ಇದೆ ಎಂದರು.

ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡಲು ನಿರ್ಧಾರ ಇನ್ನು ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಅವಾಂತರಗಳು ಎದುರಾಗುತ್ತಿದ್ದು ಸಮಸ್ಯೆ ಇದ್ದ ಕಡೆ ಶಾಲೆಗಳಿಗೆ ರಜೆ ಕೊಡಲು ನಿರ್ಧಾರ ಮಾಡಲಾಗಿದೆ. ಶಾಲೆಗೆ ಹೋಗಲು ಸಮಸ್ಯೆಯಾದ ಕಡೆ ರಜೆ ಕೊಡ್ತೇವೆ. ಹಳ್ಳ ಇದ್ದ ಕಡೆ ನೀರು ಕಡಿಮೆಯಾಗೋವರೆಗೂ ರಜೆ. ಅಂತಹ ಶಾಲೆಗಳಿಗೆ ರಜೆ ಕೊಡಲು ಡಿಡಿಪಿಐಗೆ ಸೂಚಿಸಲಾಗಿದೆ.

ಇದನ್ನೂ ಓದಿ: 40,000ಕ್ಕೂ ಹೆಚ್ಚು ತಮಿಳು ಬ್ರಾಹ್ಮಣರಿಗೆ ಸಿಗುತ್ತಿಲ್ಲ ವಧು; ಉತ್ತರ ಪ್ರದೇಶ, ಬಿಹಾರಕ್ಕೂ ವ್ಯಾಪಿಸಿದ ವಧು ಅನ್ವೇಷಣೆ

ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ