AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಕೇರಳ, ಮಹಾರಾಷ್ಟ್ರಕ್ಕೆ ಹೋಗಿ ಬಂದಿದ್ದ ಮೂವರಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ

ಮೂವರು ವಿದ್ಯಾರ್ಥಿಗಳಿಂದ ಇಡೀ ಜಿಲ್ಲೆಗೆ ಆತಂಕ ಶುರುವಾಗಿದೆ. ಕೇರಳದ ಇಬ್ಬರು ಹಾಗೂ ಮಹಾರಾಷ್ಟ್ರದ ಒಬ್ಬ ವಿದ್ಯಾರ್ಥಿ ಸೇರಿದಂತೆ ಮೂವರು ತಮ್ಮ ತವರಿಗೆ ಹೋಗಿ ಬಂದಿದ್ದರು. ಅವರಿಂದಲೇ ಕೊರೊನಾ ಬೇರೆಯವರಿಗೂ ತಗುಲಿದೆ ಎಂದು ಧಾರವಾಡ ಜಿಲ್ಲಾಡಳಿತ ಸ್ಫೋಟಕ ಮಾಹಿತಿ ಹೊರ ಹಾಕಿದೆ.

Coronavirus: ಕೇರಳ, ಮಹಾರಾಷ್ಟ್ರಕ್ಕೆ ಹೋಗಿ ಬಂದಿದ್ದ ಮೂವರಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Nov 29, 2021 | 9:55 AM

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಮತ್ತೆ ಗುಪ್ತಗಾಮಿನಿಯಾಗಿ ಜನರ ದೇಹ ಸೇರಲು ಶುರು ಮಾಡಿದೆ. ರಾಜ್ಯದಲ್ಲಿ ಆತಂಕದ ಮೋಡ ಕವಿದಿದೆ. ಅದರಲ್ಲೂ ಧಾರವಾಡದ ಎಸ್ಡಿಎಂ ಕಾಲೇಜು ಕೊರೊನಾ ಹಾಟ್ ಸ್ಪೋರ್ಟ್ ಆಗಿದೆ. 300ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ಈಗ ಧಾರವಾಡದ ಎಸ್ಡಿಎಂ ಕಾಲೇಜಿನಲ್ಲಿ ಕೊರೊನಾ ಸ್ಫೋಟಕ್ಕೆ ಕೇರಳ ನಂಟೇ ಕಾರಣ ಎನ್ನಲಾಗುತ್ತಿದೆ.

ಮೂವರಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಮೂವರು ವಿದ್ಯಾರ್ಥಿಗಳಿಂದ ಇಡೀ ಜಿಲ್ಲೆಗೆ ಆತಂಕ ಶುರುವಾಗಿದೆ. ಕೇರಳದ ಇಬ್ಬರು ಹಾಗೂ ಮಹಾರಾಷ್ಟ್ರದ ಒಬ್ಬ ವಿದ್ಯಾರ್ಥಿ ಸೇರಿದಂತೆ ಮೂವರು ತಮ್ಮ ತವರಿಗೆ ಹೋಗಿ ಬಂದಿದ್ದರು. ಅವರಿಂದಲೇ ಕೊರೊನಾ ಬೇರೆಯವರಿಗೂ ತಗುಲಿದೆ ಎಂದು ಧಾರವಾಡ ಜಿಲ್ಲಾಡಳಿತ ಸ್ಫೋಟಕ ಮಾಹಿತಿ ಹೊರ ಹಾಕಿದೆ.

ಈ ಮೂವರು ವಿದ್ಯಾರ್ಥಿಗಳು ತವರಿನಿಂದ ಬಂದು ಕಾಲೇಜಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ರು. ಹೀಗಾಗೇ ಎಲ್ಲರಿಗೂ ಸೋಂಕು ಹರಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಱಂಡಮ್ ಟೆಸ್ಟ್ಗೆ ನಿರ್ಧಾರ ಮಾಡಲಾಗಿದೆ. ಆ ಮೂವರು ವಿದ್ಯಾರ್ಥಿಗಳನ್ನ ಐಸೋಲೆಟ್ ಮಾಡದ್ದಾರೆ.

ಕೊರೊನಾ ಹಾಟ್ ಸ್ಪೋರ್ಟ್ ಆದ ಎಸ್ಡಿಎಂ ಕಾಲೇಜು ಕಳೆದ ಮೂರ್ನಾಲ್ಕು ದಿನದಿಂದ ಎಸ್‌ಡಿಎಂ ಕಾಲೇಜಿನಲ್ಲಿ ಸೋಂಕು ಸ್ಫೋಟಗೊಳ್ಳುತ್ತಿದೆ. ಮೊದಲು 66 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಬಳಿಕ 182 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿತ್ತು. ಈಗ ಒಟ್ಟು 306 ಪ್ರಕರಣಗಳು ದಾಖಲಾಗಿವೆ. ಒಟ್ಟು 3973 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿತ್ತು. 2,217 ಜನರ ಪೈಕಿ 25 ಜನರಿಗೆ ಮಾತ್ರ ಸೋಂಕು ದೃಢಪಟ್ಟಿರೋದ್ರಿಂದ ಎಸ್‌ಡಿಎಂ ಕಾಲೇಜಿನಲ್ಲಿ ಕೊಂಚ ಮಟ್ಟಿಗೆ ನಿರಾಳ ಕಂಡುಬಂದಿದೆ.

ಮೊದಲಿಗೆ ಪರೀಕ್ಷೆ ಮಾಡಿದ್ದ 1,756 ಪ್ರಕರಣಗಳಲ್ಲಿ 281 ಪ್ರಕರಣ ಪತ್ತೆಯಾಗಿದ್ದವು. ಇದರಿಂದ ಅಧಿಕಾರಿಗಳಿಗೆ ಆತಂಕ ಹೆಚ್ಚಾಗಿತ್ತು. ಇನ್ನುಳಿದ 2,217 ಜನರಿಗೂ ಕೊರೊನಾ ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ ಕೇವಲ 25 ಪಾಸಿಟಿವ್ ಪತ್ತೆಯಾಗಿದೆ. ಕಡಿಮೆ ಸೋಂಕಿತರು ಪತ್ತೆಯಾದ ಹಿನ್ನೆಲೆ ಜಿಲ್ಲಾಡಳಿತ ನಿಟ್ಟುಸಿರು ಬಿಟ್ಟಿದೆ. ಆದರೂ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ಧಾರ ಮಾಡಿದೆ. ಎಸ್ಡಿಎಂ ಕಾಲೇಜಿನಲ್ಲಿ ಸಂಪೂರ್ಣ ಕೊವಿಡ್ ಇಳಿಯುವವರೆಗೆ ಒಪಿಡಿ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ.

ಇನ್ನು ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ‌ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಕೊವಿಡ್ ಪರೀಕ್ಷೆ ಸಂಖ್ಯೆ ಹೆಚ್ಚಳಕ್ಕೆ ರಾಜ್ಯ ಸರಕಾರದಿಂದ ನೂತನ ಆದೇಶ ಹೊರಡಿಸಲಾಗಿದೆ. ನಿತ್ಯವೂ 5000 ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಈ ಮುಂಚೆ ನಿತ್ಯ 500 ಪರೀಕ್ಷೆ ಮಾಡಲಾಗುತ್ತಿತ್ತು. ಕೊರೊನಾ ಸ್ಫೋಟದ ಬಳಿಕ ಕೊರೊನಾ ಪರೀಕ್ಷೆಯ ಸಂಖ್ಯೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ:  ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ; ಮತ್ತೆ ಹೊಸದಾಗಿ 25 ಕೇಸ್​ಗಳು ಪತ್ತೆ, ಕೊವಿಡ್ ಪರೀಕ್ಷೆ ಸಂಖ್ಯೆ ಹೆಚ್ಚಳ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ