AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಕೊಡೆಗಳಂತೆ ಹುಟ್ಟುತ್ತಿರುವ ಪಿಜಿಗಳಿಗೆ ಜಿಲ್ಲಾಡಳಿತ ಲಗಾಮು: ಮಾಲೀಕರಿಗೆ ಢವಢವ

ಧಾರವಾಡದಲ್ಲಿ ವಿದ್ಯಾರ್ಥಿಗಳ ಹೆಚ್ಚುತ್ತಿರುವ ಸಂಖ್ಯೆಗೆ ಅನುಗುಣವಾಗಿ ಪಿಜಿಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ, ಅನೇಕ ಪಿಜಿಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದು, ತೆರಿಗೆ ವಂಚನೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿವೆ. ಇದರಿಂದ ಮಹಾನಗರ ಪಾಲಿಕೆಗೆ ಆದಾಯ ನಷ್ಟವಾಗುತ್ತಿದೆ. ಜಿಲ್ಲಾಡಳಿತ ಪಿಜಿಗಳ ಮೇಲೆ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಪಿಜಿ ಮಾಲೀಕರು ಸಕ್ರಮವಾಗಿ ಕಾರ್ಯನಿರ್ವಹಿಸಲು ಮತ್ತು ತೆರಿಗೆ ಪಾವತಿಸಲು ಸಿದ್ಧರಿದ್ದಾರೆ ಎಂದು ಹೇಳುತ್ತಿದ್ದಾರೆ.

ನಾಯಿ ಕೊಡೆಗಳಂತೆ ಹುಟ್ಟುತ್ತಿರುವ ಪಿಜಿಗಳಿಗೆ ಜಿಲ್ಲಾಡಳಿತ ಲಗಾಮು: ಮಾಲೀಕರಿಗೆ ಢವಢವ
ಪಿಜಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jun 02, 2025 | 10:18 PM

Share

ಧಾರವಾಡ, ಜೂನ್​ 02: ಧಾರವಾಡ (Dharwad) ವಿದ್ಯಾಕಾಶಿ ಅಂತಲೇ ಪ್ರಸಿದ್ಧಿ ಪಡೆದಿದೆ. ಸರಕಾರಿ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳು ಇಲ್ಲಿವೆ. ಅಲ್ಲದೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ (Coaching Centre) ​ಗಳ ಸಂಖ್ಯೆಯೂ ಹೆಚ್ಚಾಗಿದೆ. ಅದಕ್ಕೆ ಪೂರಕವಾಗಿ ಪಿಜಿಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಆದರೆ ಎಗ್ಗಿಲ್ಲದೆ ಆರಂಭವಾಗುತ್ತಿರುವ ಪಿಜಿಗಳಲ್ಲಿ ಅಧಿಕೃತ ಎಷ್ಟು? ಅನಧಿಕೃತ ಎಷ್ಟು? ಎಂಬ ಲೆಕ್ಕ ಇಲ್ಲ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಗೆ ತೆರಿಗೆ ಸರಿಯಾಗಿ ಬರುತ್ತಿಲ್ಲ. ಮತ್ತೊಂದು ಕಡೆ ಇದೇ ಪಿಜಿಗಳು ಅಕ್ರಮ ದಂಧೆಗಳ ತಾಣವಾಗುತ್ತಿವೆ. ಇದಕ್ಕೆ ಲಗಾಮು ಹಾಕಲು ಜಿಲ್ಲಾಡಳಿತ ನಿರ್ಧರಿಸಿದೆ.

ಐಎಎಸ್, ಕೆಎಎಸ್, ಪೊಲೀಸ್ ನೇಮಕಾತಿಯಿಂದ ಹಿಡಿದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೆಂಟರ್​ಗಳು ಧಾರವಾಡದಲ್ಲಿವೆ. ಒಂದು ಅಂದಾಜಿನ ಪ್ರಕಾರ ಇಲ್ಲಿರುವ ಹೊರ ಜಿಲ್ಲೆಗಳ ವಿದ್ಯಾರ್ಥಿಗಳ ಸಂಖ್ಯೆ ಒಂದು ಲಕ್ಷ ಮೇಲಿದೆ. ಇದಕ್ಕೆ ತಕ್ಕಂತೆ ಧಾರವಾಡದ ಮೂಲೆ ಮೂಲೆಗಳಲ್ಲಿ ಪಿಜಿಗಳು ತಲೆ ಎತ್ತಿವೆ. ಪಿಜಿಗಳು ಕಮರ್ಷಿಯಲ್ ವ್ಯಾಪ್ತಿಗೆ ಬರುತ್ತವೆ. ಆದರೆ ಬಹುತೇಕ ಕಡೆ ವಾಸದ ಮನೆಗಳನ್ನೇ ಪಿಜಿಗಳನ್ನಾಗಿ ಮಾಡಲಾಗಿದ್ದು, ಸರಿಯಾಗಿ ತೆರಿಗೆ ಕಟ್ಟುತ್ತಿಲ್ಲ. ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳುತ್ತಿಲ್ಲ. ಇದನ್ನು ಮನಗಂಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಪಿಜಿಗಳ ಸಂಖ್ಯೆ ಹಾಗೂ ಅಲ್ಲಿರುವ ವ್ಯವಸ್ಥೆಗಳ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಸೂಚನೆ ನೀಡಿದ್ದಾರೆ.

ಧಾರವಾಡದಲ್ಲಿ ಆರಂಭದಲ್ಲಿ ಸಪ್ತಾಪುರ ಹಾಗೂ ಜಯನಗರ ಬಡಾವಣೆಗಳಲ್ಲಿ ಮಾತ್ರ ಕೋಚಿಂಗ್ ಸೆಂಟರ್​ಗಳು ಇದ್ದವು. ಆ ಪ್ರದೇಶದ ಸುತ್ತಮುತ್ತ ಮಾತ್ರವೇ ಪಿಜಿಗಳು ಇದ್ದವು. ಆದರೆ ಈಗ ಕೋಚಿಂಗ್ ಸೆಂಟರ್​ಗಳ ವ್ಯಾಪ್ತಿ ನಗರದ ತುಂಬೆಲ್ಲ ವ್ಯಾಪಿಸಿದೆ. ಧಾರವಾಡದಲ್ಲಿ ಅನೇಕ ಪ್ರತಿಷ್ಠಿತ ಕಾಲೇಜುಗಳಿದ್ದು, ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ಕೂಡ ವ್ಯಾಸಂಗಕ್ಕಾಗಿ ಬರುತ್ತಾರೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಹಾಸ್ಟೆಲ್​ಗಳ ಲಭ್ಯತೆ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು ಪಿಜಿಗಳತ್ತ ಮುಖ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು
Image
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
Image
ದೇಶದ ರಕ್ಷಣಾ ವ್ಯವಸ್ಥೆಗೆ ಪೂರಕವಾಗುವ ಡ್ರೋನ್​ ತಯಾರಿಸಿದ ವಿದ್ಯಾರ್ಥಿಗಳು
Image
ಹುಬ್ಬಳ್ಳಿ-ಧಾರವಾಡದ ಕೆಲ ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ

ಈ ಹಿಂದೆ ಸಂಸಾರಸ್ಥರಿಗೆ ಮನೆಗಳನ್ನು ಬಾಡಿಗೆ ಕೊಡುತ್ತಿದ್ದವರೆಲ್ಲರೂ, ಈಗ ಅದೇ ಮನೆಗಳಲ್ಲಿ ಕೆಲವು ಬೆಡ್ ಹಾಕಿ, ಒಂದು ಬೆಡ್​ಗೆ ಇಂತಿಷ್ಟು ಅಂತ ದರ ನಿಗದಿ ಮಾಡಿ ಪಿಜಿ ನಡೆಸುತ್ತಿದ್ದಾರೆ. ಇದರಿಂದ ಪಾಲಿಕೆ ಆದಾಯಕ್ಕೂ ಹೊಡೆತ ಬೀಳುತ್ತಿದೆ. ಈ ಮನೆಗಳ ಮಾಲೀಕರಿಗೆ ನೋಟಿಸ್ ಕೊಡುವುದಾಗಿ ಅಧಿಕಾರಿಗಳು ಹೇಳುತ್ತಲೇ ಬಂದಿದ್ದರು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ.

ಆದರೆ, ಈ ಬಾರಿಯಾದರೂ ಕಾರ್ಯರೂಪಕ್ಕೆ ಬಂದು, ಸಕ್ರಮವಾಗಿ ಪಿಜಿಗಳನ್ನು ನಡೆಸುವವರಿಗೆ ನ್ಯಾಯ ಸಿಗಲಿ ಎಂಬ ಕೂಗು ಕೇಳಿ ಬರುತ್ತಿದೆ. ಪಿಜಿಗಳೆಲ್ಲ ಕಮರ್ಷಿಯಲ್ ವ್ಯಾಪ್ತಿಗೆ ಬರುವುದರಿಂದ ಹೆಚ್ಚಿನ ತೆರಿಗೆ ವಿಧಿಸಿದರೂ ನಾವು ನೀಡಲು ಸಿದ್ಧ ಅಂತ ಕೆಲ ಪಿಜಿ ಮಾಲೀಕರು ಹೇಳುತ್ತಿದ್ದಾರೆ. ಕೂಡಲೇ, ಈ ಬಗ್ಗೆ ಸರಿಯಾಗಿ ನಿಯಮಗಳನ್ನು ರೂಪಿಸಿ, ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಕೋರ್ಟ್

ಹು-ಧಾ ಮಹಾನಗರ ಪಾಲಿಕೆ ಆದಾಯದ ಕೊರತೆ ಅನುಭವಿಸುತ್ತಿದೆ. ವಿವಿಧ ಮೂಲಗಳಿಂದ ಆದಾಯವನ್ನು ಪಡೆಯಲು ಹರಸಾಹಸ ಪಡುತ್ತಿದೆ. ಇದೇ ವೇಳೆ ನಗರದಲ್ಲಿ ಇಷ್ಟೊಂದು ಪಿಜಿಗಳನ್ನಿಟ್ಟುಕೊಂಡರೂ ಅವುಗಳಿಂದ ತೆರಿಗೆ ಹರಿದು ಬರುತ್ತಿಲ್ಲ. ಹೀಗಾಗಿ, ಕೂಡಲೇ ಈ ವಿಚಾರವನ್ನು ಪಾಲಿಕೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಕ್ರಮಕ್ಕೆ ಮುಂದಾಗಬೇಕಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಈ ಪಿಜಿಗಳಿಂದ ಸಾಕಷ್ಟು ಸಮಸ್ಯೆಗಳು ಎದುರಾಗುವುದರಲ್ಲಿ ಎರಡು ಮಾತಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು