Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ದೋಷ ಸರಿಪಡಿಸದ ಝಿಯೋಮಿ ಕಂಪನಿಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಟಿವಿ ದೋಷ ಸರಿಪಡಿಸದ ಝಿಯೋಮಿ ಕಂಪನಿಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ಟಿವಿ ದೋಷ ಸರಿಪಡಿಸದ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗImage Credit source: istockphoto.com
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​

Updated on:Oct 06, 2023 | 4:14 PM

ಟಿವಿ ದೋಷ ಸರಿಪಡಿಸದ ಪ್ರಕರಣದಲ್ಲಿ ಝಿಯೋಮಿ ಟಿವಿ ಕಂಪನಿ ಮತ್ತು ವಿಮಾ ಸಂಸ್ಥೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿದ್ದಲ್ಲದೇ ಒಂದು ತಿಂಗಳೊಳಗೆ ಟಿವಿ ದೋಷ ಸರಿಪಡಿಸುವಂತೆ ಆದೇಶಿಸಿದೆ. ಧಾರವಾಡ ನಗರದ ನವಲೂರು ಬಡಾವಣೆಯ ವಿನಾಯಕ ನಗರದ ನಿವಾಸಿ ವಕೀಲ ಸಿ.ಎಸ್‌. ಹಿರೇಮಠ ಅವರು 2020 ಸೆ.11ರಂದು ಹುಬ್ಬಳ್ಳಿಯ ಕಾಮಾಕ್ಷಿ ಎಂಟರ್‌ಪ್ರೈಸೆಸ್ ಬಳಿ ರೂ. 22,500 ಕೊಟ್ಟು ಝಿಯೋಮಿ ಕಂಪನಿಯ ಟಿವಿ ಖರೀದಿಸಿದ್ದರು. ರೂ. 552 ಪ್ರೀಮಿಯಂ ಕಟ್ಟಿ ವಿಮೆ ಕೂಡ ಮಾಡಿಸಿದ್ದರು.

2021ರ ಅಕ್ಟೋಬರ್‌ನಲ್ಲಿ ಟಿವಿಯಲ್ಲಿ ದೋಷ ಉಂಟಾಗಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ದೋಷ ಸರಿಪಡಿಸುವಂತೆ ಕಾಮಾಕ್ಷಿ ಎಂಟರ್‌ಪ್ರೈಸೆಸ್‌ನವರಿಗೆ ಹಿರೇಮಠ ದೂರು ನೀಡಿದ್ದರು. ಟಿ.ವಿ. ಉತ್ಪಾದನಾ ದೋಷದಿಂದ ಕೂಡಿದೆ ಎಂದು ಕಂಪನಿ ಹಾಗೂ ವಿಮಾ ಸಂಸ್ಥೆಗೆ ತಿಳಿಸಿರುವುದಾಗಿ ಹಿರೇಮಠ ಅವರಿಗೆ ಕಾಮಾಕ್ಷಿ ಎಂಟರ್‌ಪ್ರೈಸೆಸ್ ನವರು ಹೇಳಿದ್ದರು.

Also read: ನಾಮಿನಿಗೆ ವಿಮಾ ಹಣ ಕೊಡದ ಖಾಸಗಿ ವಿಮಾ ಕಂಪನಿಗೆ, 10 ಲಕ್ಷ ರೂ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ವಿಚಾರಣೆ ನಡೆಸಿದ ಆಯೋಗ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ, ಪ್ರಭು ಹಿರೇಮಠ, ಝಿಯೋಮಿ ಕಂಪನಿ ಮತ್ತು ವಿಮಾ ಕಂಪನಿ ಜಂಟಿಯಾಗಿ ದೂರುದಾರರಿಗೆ ರೂ. 10 ಸಾವಿರ ಪರಿಹಾರ ಹಾಗೂ ಪ್ರಕರಣದ ವೆಚ್ಚ ರೂ. 5 ಸಾವಿರ ನೀಡುವಂತೆ ಆದೇಶಿಸಿದ್ದಾರೆ. ಅಲ್ಲದೇ ಒಂದು ತಿಂಗಳೊಳಗೆ ಟಿವಿ ದೋಷ ಸರಿಪಡಿಸುವಂತೆ ಆದೇಶಿಸಿದ್ದಾರೆ. ಇನ್ನು ಈ ದೋಷಕ್ಕೆ ಟಿವಿ ಮಾರಾಟಗಾರರಾದ ಕಾಮಾಕ್ಷಿ ಎಂಟರ್‌ಪ್ರೈಸೆಸ್‌ನವರು ಹೊಣೆಗಾರರಲ್ಲ ಅಂತಾ ಅವರ ಮೇಲಿನ ದೂರನ್ನು ಆಯೋಗ ವಜಾಗೊಳಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Fri, 6 October 23

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್