AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಟ್ಟು ಹೋದ ಬೈಕ್​ಗೆ ಖಾಯಂ ನೊಂದಣಿ ಇಲ್ಲ ಎಂದು ಪರಿಹಾರ ನೀಡಲು ನಿರಾಕರಿಸಿದ ಕಂಪನಿಗೆ 15 ಲಕ್ಷ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ಖಾಯಂ ರಜಿಸ್ಟ್ರೇಶನ್ ಮಾಡಿಸದ ಕಾರಣ ಸುಟ್ಟ ಬೈಕ್​ಗೆ ಪರಿಹಾರದ ಹಣ ನೀಡಲು ನ್ಯೂ ಇಂಡಿಯಾ ಅಶುರೆನ್ಸ್ ವಿಮಾ ಕಂಪನಿ ನಿರಾಕರಿಸಿತ್ತು. ಸದ್ಯ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಭಾರೀ ದಂಡ ವಿಧಿಸಿದೆ.

ಸುಟ್ಟು ಹೋದ ಬೈಕ್​ಗೆ ಖಾಯಂ ನೊಂದಣಿ ಇಲ್ಲ ಎಂದು ಪರಿಹಾರ ನೀಡಲು ನಿರಾಕರಿಸಿದ ಕಂಪನಿಗೆ 15 ಲಕ್ಷ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 02, 2023 | 3:50 PM

Share

ಧಾರವಾಡ: ಪರಿಹಾರದ ಹಣ ನೀಡದ ನ್ಯೂ ಇಂಡಿಯಾ ಅಶುರೆನ್ಸ್ ವಿಮಾ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಭಾರೀ ದಂಡ ವಿಧಿಸಿದೆ. 15,59,000 ರೂ ದಂಡ ಮತ್ತು ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ತುಷಾರ್ ಪವಾರ್ ಎಂಬುವವರು ಮುಂಬೈ ಶೋ ರೂಮ್‌ನಿಂದ ಬೈಕ್ ಖರೀದಿಸಿದ್ದರು. 2021 ಮೇ ತಿಂಗಳಲ್ಲಿ 14,99,000 ರೂ. ಹಣವನ್ನು ನೀಡಿ ಕವಾಸಾಕಿ ಕಂಪನಿಯ ಕವಾಸಾಕಿ-900 ಸುಪರ್ ಬೈಕ್ ಖರೀದಿಸಿದ್ದರು. ವಿಮಾ ಹಣ ರೂ.39,006/- ಪ್ರೀಮಿಯಮ್ ಕಟ್ಟಿದ್ದರು. ಬಳಿಕ ಆರ್.ಟಿ.ಓ ಕಚೇರಿಯಿಂದ ತಾತ್ಕಾಲಿಕ ನೋಂದಣಿ ಮಾಡಿಸಲಾಗಿತ್ತು. ಆದ್ರೆ ತಿಂಗಳೊಳಗಾಗಿ ಖಾಯಂ ರಜಿಸ್ಟ್ರೇಶನ್ ಮಾಡಿಸಬೇಕಿತ್ತು. ಅದೇ ಸಮಯಕ್ಕೆ ಲಾಕ್‌ಡೌನ್ ಘೋಷಣೆಯಾಗಿತ್ತು. ಆಗ ಆರ್.ಟಿ. ಓ. ಕಚೇರಿ ಬಂದ್ ಆಗಿತ್ತು. ಕೆಲ ದಿನಗಳ ಬಳಿಕ ಆಕಸ್ಮಿಕ ಬೆಂಕಿಗೆ ಬೈಕ್ ಸುಟ್ಟು ಹೋಗಿತ್ತು. ವಿಮೆ ಚಾಲ್ತಿಯಿದ್ದುದರಿಂದ 14,99,000 ನೀಡುವಂತೆ ಕ್ಲೇಮ್ ಮಾಡಲಾಗಿದೆ. ಆಗ ವಿಮಾ ಕಂಪನಿ ವಾಹನಕ್ಕೆ ಖಾಯಂ ನೋಂದಣಿ ಆಗಿರಲಿಲ್ಲ. ಹೀಗಾಗಿ ವಿಮೆ ನೀಡಲು ಸಾಧ್ಯವಿಲ್ಲ ಎಂದಿದೆ.

ಆಗ ತುಷಾರ್ ಕಂಪನಿ ವಿರುದ್ಧ ಆಯೋಗದ ಮೊರೆ ಹೋಗಿದ್ದು ಆಯೋಗದಿಂದ ತುಷಾರ್ ಪರ ತೀರ್ಪು ಬಂದಿದೆ. ಬೈಕಿನ ಪೂರ್ತಿ ಮೌಲ್ಯ ರೂ.14,99,000ಗಳ ಪರಿಹಾರ, ದೂರುದಾರರಿಗೆ ಮಾನಸಿಕ ತೊಂದರೆಗಾಗಿ ರೂ.50,000 ಪರಿಹಾರ, ಪ್ರಕರಣದ ಖರ್ಚು ವೆಚ್ಚ ರೂ.10,000 ಸೇರಿದಂತೆ ಒಟ್ಟು ರೂ. 15,59,000/- ದಂಡ ಮತ್ತು ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶ ಹೊರಡಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ